Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ: ರಾಜ್ಯ ಸಚಿವ ಸಂಪುಟ ರಚನೆ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಕಾಂಗ್ರೆಸ್ ಸಚಿವರ ಪಟ್ಟಿಯನ್ನು ಫೈನಲ್ ಮಾಡಲು ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಇಂದು ದೆಹಲಿಗೆ ತೆರಳಿದ್ದಾರೆ.
ದೆಹಲಿಗೆ ಇಂದು ತೆರಳಿರುವ ವೇಣುಗೋಪಾಲ್ ಕಾಂಗ್ರೆಸ್ ಹೈಕಮಾಂಡ್ ಜತೆ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಪಡೆಯಲಿದ್ದಾರೆ. ಇದರ ಜತೆಗೆ ಕೆಪಿಸಿಸಿ ಅಧ್ಯಕ್ಷ ಪದವಿಗೆ ಯಾರು ಸೂಕ್ತ ಎನ್ನುವುದನ್ನು ಚರ್ಚಿಸಲಿದ್ದಾರೆ. ಅಲ್ಲದೆ, ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ.
ಸೋಮವಾರ ಅಥವಾ ಮಂಗಳವಾರ ವೇಣುಗೋಪಾಲ್ ಅಂತಿಮ ಪಟ್ಟಿಯೊಂದಿಗೆ ಮರಳಲಿದ್ದಾರೆ. ಬುಧವಾರ ಸಂಪುಟ ಪುನರಾಚನೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.