Webdunia - Bharat's app for daily news and videos

Install App

ಸಾವಿನ ಬಗ್ಗೆ ಮೊದಲೇ ಶಿರೂರು ಶ್ರೀಗಳಿಗೆ ಸಿಕ್ಕಿತ್ತಾ ಮುನ್ಸೂಚನೆ?!

Webdunia
ಶುಕ್ರವಾರ, 20 ಜುಲೈ 2018 (09:35 IST)
ಬೆಂಗಳೂರು: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರಿಗೆ ಸಾವಿನ ಬಗ್ಗೆ ಮೊದಲೇ ದೈವದಿಂದ ಸೂಚನೆ ಸಿಕ್ಕಿತ್ತೇ?

ಕೆಲವು ದಿನಗಳ ಹಿಂದೆ ಪಡುಬಿದ್ರೆ ಕೊಡಮಣಿತ್ತಾಯ ದೈವ ಕೋಲದಲ್ಲಿ ಭಾಗಿಯಾಗಿದ್ದ ಶ್ರೀಗಳಿಗೆ ದೈವ ನಿಮಗೆ ಅಪಾಯವಿದೆ ಎಂದು ಸೂಚನೆ ನೀಡಿತ್ತಂತೆ. ಆದರೆ ಶ್ರೀಗಳು ನಾನು ಗಟ್ಟಿಯಾಗಿದ್ದೇನೆ ಎಂದು ಪ್ರತಿಕ್ರಿಯಿಸುವ ಮೂಲಕ ದೈವದ ಸೂಚನೆಯನ್ನು ಕಡೆಗಣಿಸಿದರು ಎಂದು ಖಾಸಗಿ ವಾಹಿನಿ ವರದಿ ಮಾಡಿದೆ.

ಹೀಗಾಗಿ ಶ್ರೀಗಳಿಗೆ ಅಪಾಯ ಕಾದಿರುವ ಬಗ್ಗೆ ಮೊದಲೇ ದೈವ ಸೂಚನೆ ನೀಡಿತ್ತು ಎನ್ನಲಾಗಿದೆ. ಇನ್ನಪಂದೆಡೆ ಕೊನೆಯದಾಗಿ ಶ್ರೀಗಳು ಪಟ್ಟದ ದೇವರ ವಿಚಾರಕ್ಕಾಗಿ ನಡೆಯುತ್ತಿದ್ದ ಸಂಘರ್ಷದ ಬಗ್ಗೆ ಮಾತನಾಡಿದ್ದರು ಎನ್ನಲಾಗಿದ್ದು, ವಿಠಲ ಮಾತ್ರ ನನ್ನ ಸ್ವತ್ತು ಎಂದಿದ್ದರು ಎನ್ನಲಾಗಿದೆ.

ಶ್ರೀಗಳ ಸಾವಿನಿಂದಾಗಿ ಸೂತಕದ ಛಾಯೆ ಮೂಡಿದ್ದ ಉಡುಪಿ ಮಠದಲ್ಲಿ ಇಂದು ಪೂಜೆ ನಡೆಸಲು ಪೊಲೀಸರು ಅನುಮತಿ ನೀಡಿದ್ದಾರೆ. ಆದರೆ ಶ್ರೀಗಳ ಸಾವಿನ ಬಗ್ಗೆ ಅನುಮಾನಗಳಿರುವ ಕಾರಣ, ಶಿರೂರು ಶ್ರೀಗಳ ಕೊಠಡಿ, ಮಠದಲ್ಲಿ ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments