Webdunia - Bharat's app for daily news and videos

Install App

ಗೃಹಲಕ್ಷ್ಮಿ ಯೋಜನೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಮುಹೂರ್ತ ಫಿಕ್ಸ್

Webdunia
ಭಾನುವಾರ, 16 ಜುಲೈ 2023 (09:46 IST)
ಬೆಂಗಳೂರು : ಪ್ರತಿ ಮನೆ ಯಜಮಾನಿಗೆ 2000 ನೀಡುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಅಂತೂ ಇಂತೂ ಮುಹೂರ್ತ ಕೂಡಿಬಂದಿದೆ.
 
ಇದೇ ಜುಲೈ 19 ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಸಂಜೆ 5.30ಕ್ಕೆ ಗೃಹ ಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಅದೇ ದಿನದಿಂದ ಫಲಾನುಭವಿಯಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಆಗಸ್ಟ್ 16 ಅಥವಾ 17ರಂದು ಯಜಮಾನಿ ಖಾತೆಗೆ 2000 ರೂ. ಹಣ ಹಾಕುತ್ತೇವೆ ಎಂದು ಈಗಾಗಲೇ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ   ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಯೋಜನೆಗೆ ಯಾರು ಅರ್ಹರು?
ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿರತಕ್ಕದ್ದಲ್ಲ.

ರೇಷನ್ ಕಾರ್ಡ್ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ ಒತ್ತಡಕ್ಕೆ ಮಣಿದ ಬಸವರಾಜ ಹೊರಟ್ಟಿ, ಕೊನೆಗೂ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ

ಅಬ್ಬಬ್ಬಾ ಏನು ಪ್ರಿತಿನೋ ಈತನಿಗೆ.. ಸಚಿವ ನಾಗೇಂದ್ರಗೆ ಗದೆ ಗಿಫ್ಟ್ ಕೊಡಲು ಬಂದ ಸ್ಟೈಲ್ ನೋಡಿ Video

ಎಸ್ಕಲೇಟರ್ ನಲ್ಲಿ ಆಡುತ್ತಿದ್ದ ಮಗು ಬಿದ್ದು ಪ್ರಾಣವೇ ಹೋಯ್ತು ಎನ್ನುವಾಗ ಹೀರೋನಂತೆ ಬಂದ ವ್ಯಕ್ತಿ: Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸ್ಪೀಕರ್ ಸ್ಥಾನ ಕೊಡಲ್ಲ ಎಂದು ಕಾಂಗ್ರೆಸ್, ಬಿಡಲ್ಲ ಎಂದು ಬಸವರಾಜ ಹೊರಟ್ಟಿ: ಜಿದ್ದಾ ಜಿದ್ದಿ

ಮುಂದಿನ ಸುದ್ದಿ
Show comments