Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಮುಂದಿನ ವರ್ಷದಿಂದ ಸಮವಸ್ತ್ರ ಗೊಂದಲ ಇಲ್ಲದಂತೆ ಕಾನೂನು ತರುತ್ತೇವೆ.
ಹೈಕೋರ್ಟ್ ತೀರ್ಪು ಆಧರಿಸಿ ವಿಶೇಷ ಕಾನೂನು ಮುಂದಿನ ವರ್ಷದಿಂದ ಕಾನೂನು ಜಾರಿ ಮಾಡುತ್ತೇವೆ. ಇದಕ್ಕೆ ಸಂಬಂಧಿಸಿದ ಸಮಿತಿಯನ್ನು ರಚಿಸುತ್ತೇವೆ ಎಂದರು.
ವಿದ್ಯಾರ್ಥಿಗಳು ಕಾಲೇಜಿಗೆ ಸಮವಸ್ತ್ರ ಧರಿಸಿ ಬರಬೇಕು. ಸಮವಸ್ತ್ರ ಇಲ್ಲದೆ ಯಾರಿಗೂ ಕಾಲೇಜಿಗೆ ಅವಕಾಶ ಇಲ್ಲ. ಹಿಜಬ್, ಕೇಸರಿ ಶಾಲು ಯಾವುದಕ್ಕೂ ಅವಕಾಶ ಇಲ್ಲ. ಹೈಕೋರ್ಟ್ ಆದೇಶ ಎಲ್ಲರೂ ಪಾಲನೆ ಮಾಡಲೇಬೇಕು ಎಂದು ಸೂಚನೆ ನೀಡಿದರು.
ಪೂರ್ವ ಸಿದ್ಧತೆ ಪರೀಕ್ಷೆ ಬೇಕಿದರೆ ಮತ್ತೆ ಬರೆಯಬಹುದು. ಆದರೆ ಪಬ್ಲಿಕ್ ಪರೀಕ್ಷೆ ನಿಯಮ ಮೀರಿದರೆ ಬರೆಯಲು ಸಾಧ್ಯವಿಲ್ಲ. ಇದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಂಡು ಶಾಲೆಗೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.