Webdunia - Bharat's app for daily news and videos

Install App

ಸಮೀಕ್ಷೆ : ಬೆಂಗಳೂರಿನಲ್ಲಿ ಶಾಕಿಂಗ್ ಫಲಿತಾಂಶ

Webdunia
ಸೋಮವಾರ, 13 ಫೆಬ್ರವರಿ 2023 (07:35 IST)
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಸವಾಲು ಎದುರಾಗಿದೆ.

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಆಂತರಿಕ ಸಮೀಕ್ಷೆ ನಡೆಸಿತ್ತು. ಈ ಪೈಕಿ ಗೆದ್ದ 15 ಬಿಜೆಪಿ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆ ವ್ಯಕ್ತವಾಗಿದೆ.

ರಸ್ತೆಗುಂಡಿ, ಮಳೆ ಪ್ರವಾಹ, ಮಳೆ ಹಾನಿ, ಒಳಚರಂಡಿ ಅವ್ಯವಸ್ಥೆ, ಫುಟ್ಪಾತ್, ಟ್ರಾಫಿಕ್ ಜ್ಯಾಮ್ ಸಮಸ್ಯೆಯಿಂದ ಜನ ತತ್ತರಿಸುವ ವಿಚಾರ ತಿಳಿದು ಬಂದಿದೆ.

ಮಳೆ ನಿಂತ ಕೂಡಲೇ ಚುನಾವಣೆ ಸಮೀಪ ಆತುರಾತುರವಾಗಿ ಹಲವು ಕಾಮಗಾರಿಗಳನ್ನು ಬಿಬಿಎಂಪಿ ಪೂರ್ಣಗೊಳಿಸಿದೆ. ಆದರೆ ಪೂರ್ಣಗೊಳಿಸಿದ ಕಾಮಗಾರಿಗಳು ಸರಿಯಾಗಿ ನಡೆಯದ ಬಗ್ಗೆ ಜನರ ಅಸಮಾಧಾನ ಇರುವುದು ಸಮೀಕ್ಷೆಯಲ್ಲಿ ಗೊತ್ತಾಗಿದೆ. 

ಈ ಕಾರಣಕ್ಕೆ ಜನಾಕ್ರೋಶ ತಣಿಸಲು ಬೆಂಗಳೂರಿಗೆ ಮೋದಿ ಅವರನ್ನು ಪದೇ ಪದೇ ಕರೆ ತರಲು ಬಿಜೆಪಿ ಪ್ಲ್ಯಾನ್ ಮಾಡಿದೆ. ಸೋಮವಾರದ ಏರೋ ಇಂಡಿಯಾ ಶೋ ಉದ್ಘಾಟನಾ ಭಾಷಣದಲ್ಲಿ ಮೋದಿ ಡಬಲ್ ಎಂಜಿನ್ ಸರ್ಕಾರದ ಸಾಧನೆಯನ್ನು ಬಣ್ಣಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments