ಮಳೆಯ ಆರ್ಭಟದ ನಡುವೆ ಪವರ ಕಟ್ ಸಮಸ್ಯೆ

Webdunia
ಗುರುವಾರ, 7 ಅಕ್ಟೋಬರ್ 2021 (09:37 IST)
ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಧಾರಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿತ್ತು. ಅಲ್ಲದೇ ನಿನ್ನೆ ಸಹ ಭಾರೀ ಮಳೆಯಾಗಿದ್ದು, ಮುಂದಿನ ಕೆಲ ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಕೂಡ  ನಗರದ ಹಲವು ಮನೆಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಜನರು ಮಳೆಯಿಂದಾಗಿ ಪರದಾಡುತ್ತಿರುವ ಮಧ್ಯೆ ಬೆಸ್ಕಾಂ ಪ್ರತಿದಿನ ವಿವಿಧ ಪ್ರದೇಶಗಳಲ್ಲಿ ಪವರ್ ಕಟ್ ಮಾಡುತ್ತಿದ್ದು, ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿದಿನ ಒಂದೆಲ್ಲ ಒಂದು ಏರಿಯಾದಲ್ಲಿ ಪವರ್ ಕಟ್ ಸಮಸ್ಯೆಯಾಗುತ್ತಿದೆ. ಇಂದೂ ಕೂಡ ಕೆಲ ಏರಿಯಾಗಳಲ್ಲಿ ವಿದ್ಯುತ್ ಸಮಸ್ಯೆಯಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
 ಯಾವ್ಯವ ಪ್ರದೇಶಗಳಲ್ಲಿ ಪವರ್ ಕಟ್ ?
ಬೆಳತೂರ್, ಕಾಡುಗೋಡಿ ಅಂಬೇಡ್ಕರ್ ನಗರ ಜೆಪಿ ನಗರ 2 ನೇ ಹಂತ, ಕೊಡಿಗೇಹಳ್ಳಿ, ಸರ್ಕಾರಿ ಶಾಲೆಯ ಸುತ್ತಮುತ್ತಲಿನ ಪ್ರದೇಶ, ವಾಜರಹಳ್ಳಿ, ಗಜಾರೆ ಲೇಔಟ್, ಎಂಜಿ ರಸ್ತೆ, ಕಾವೇರಿ ಲೇಔಟ್ ಹಾಗೂ ಗಾಯತ್ರಿ ಲೇಔಟ್, ಬಸವನಪುರ, ಕೆಆರ್ ಪುರಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.
ಆಶಿರ್ವಾದ್ ಲೇಔಟ್, ಆಮ್ಕೋ ಲೇಔಟ್, ಕೊಡಿಗೇಹಳ್ಳಿ ಅಂಬೇಡ್ಕರ್ ನಗರ, ವೈಟ್ಫೀಲ್ಡ್ , ಮಾರುತಿ ವಿಸ್ತರಣೆ, ರಾಜೀವ್ ನಗರ, ಪಟಾಲಮ್ಮ ವಿಸ್ತರಣೆ, ಮಾಲೂರು , ರಾಹುತನಹಳ್ಳಿ, ಲಕ್ಕೇನಹಳ್ಳಿ ಸೇರಿದಂತೆ ನೆಲಮಂಗಲದ ಸುತ್ತ ಮುತ್ತಲಿನ ಏರಿಯಾಗಳಲ್ಲಿ ಪವರ್ ಕಟ್ ಆಗಲಿದೆ.
ಗಂಗೊಂಡನಹಳ್ಳಿ, ನಾಯಂಡನಹಳ್ಳಿ, ದತ್ತಾತ್ರೇಯ ನಗರ, ಯಶವಂತಪುರ , ಹೊಸಕೆರೆಹಳ್ಳಿ, ಚನ್ನಸಂದ್ರ, ಕಾಡುಗೋಡಿ, ವಿನಾಯಕ ಲೇಔಟ್, ಮೇದರಹಳ್ಳಿ, ಸೋಲದೇವನಹಳ್ಳಿ  ಹಾಗೂ ಹೆನ್ನೂರ್ ಕ್ರಾಸ್, ಕೊಥನೂರ್ ಮತ್ತು ಸುತ್ತಮುತ್ತಲಿನ ಪ್ರದೇಶದ ಜನರು ವಿದ್ಯುತ್ ಸಮಸ್ಯೆ ಎದುರಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಸ್ಕಾಂ ನಡೆಗೆ ಜನರ ಆಕ್ರೋಶ
ಬೆಂಗಳೂರಿನ ಜನರಿಗೆ ಪವರ್ ಕಟ್ ಸಮಸ್ಯೆ ಹೊಸದಲ್ಲ. ಕಳೆದ ಒಂದು ವಾರದಿಂದ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ತಲೆದೋರುತ್ತಿದ್ದು, ಜನರಿಗೆ ಕಷ್ಟವಾಗುತ್ತಿದೆ.  ಅದರಲ್ಲೂ ಕೊರೊನಾ ಕಾರಣದಿಂದ ಹೆಚ್ಚಿನ ಜನರು ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದಾರೆ ಈ ವಿದ್ಯುತ್ ಸಮಸ್ಯೆ ಅವರಿಗೆ ಹೆಚ್ಚಿನ ತೊಂದರೆ ಮಾಡುತ್ತದೆ.
ದಿನದಲ್ಲಿ ಒಂದೆರೆಡು ಗಂಟೆಗಳಾದರೇ ಹೇಗೆ ಸಂಭಾಳಿಸಬಹುದು ಆದರೆ 5 ಗಂಟೆಗಳಿಗಿಂತ ಹೆಚ್ಚು ವಿದ್ಯುತ್ ಇಲ್ಲದೆ ಜನರು ಪರದಾಡುವಂತಾಗುತ್ತದೆ.  ಅಲ್ಲದೇ ಕೇವಲ ಒಂದು ದಿನ ಮಾತ್ರ ವಾಗಿದ್ದರೂ ಹೇಗೆ ಸಾಧ್ಯವಿತ್ತು ಆದರೆ ಕಳೆದ ಒಂದು ವಾರಗಳಿಂದ ವಿದ್ಯುತ್ ಸಮಸ್ಯೆಯಾಗಿದ್ದು, ಸಂಭಾಳಿಸುವುದು  ಅಸಾಧ್ಯ ಎಂಬುದು ಜನರ ವಾದ.  ಬೆಸ್ಕಾಂನ ಈ ನಡೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ
Show comments