Publish Date: Sat, 10 Jun 2023 (11:06 IST)
Updated Date: Sat, 10 Jun 2023 (11:09 IST)
ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಭಾನುವಾರ ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಿದ್ದಾರೆ.
ಈ ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಹಿಸಲಿದ್ದಾರೆ. ಕೇವಲ ಸಿದ್ದರಾಮಯ್ಯ ಸರ್ಕಾರದ ಮಂತ್ರಿಮಂಡಲದವರು ಮಾತ್ರವಲ್ಲ, ಡಿ.ವಿ.ಸದಾನಂದಗೌಡ, ತೇಜಸ್ವಿಸೂರ್ಯ ಸೇರಿದಂತೆ ಬಿಜೆಪಿ ಸಂಸದರಿಗೂ ಆಹ್ವಾನ ನೀಡಲಾಗಿದೆ.
ನಾಳೆಯ ಶಕ್ತಿ ಯೋಜನೆ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಲು ಸರ್ಕಾರ ಸಿದ್ದತೆ ಮಾಡಿದೆ. ಬಸ್ನಲ್ಲಿ ಸಿದ್ದರಾಮಯ್ಯ ನಾಲ್ಕು ಕಿಲೋಮೀಟರ್ವರೆಗೂ ರೌಂಡ್ಸ್ ಹಾಕಲಿದ್ದು, ಬಿಎಂಟಿಸಿಯ ಬಿಎ-6 ಬಸ್ನಲ್ಲಿ ಸಂಚರಿಸಲಿದ್ದಾರೆ. ನಾಲ್ಕು ಸಾರಿಗೆ ನಿಗಮಗಳ ಎಂಟು ಬಸ್ಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಒಂದು ನಿಗಮದಿಂದ ಎರಡು ಬಸ್ಗಳಿಗೆ ವಿಧಾನಸೌಧ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಸಿಎಂ ಹಾಗೂ ಮಂತ್ರಿಮಂಡಲ ವಿಧಾನಸೌಧ ಟು ವಿಧಾನಸೌಧಕ್ಕೆ ಬಸ್ನಲ್ಲಿ ಸಂಚಾರಿಸಲಿದ್ದಾರೆ.
ವಿಧಾನಸೌಧ-ಎಂಎಸ್ ಬಿಲ್ಡಿಂಗ್-ಮೈಸೂರು ಬ್ಯಾಂಕ್ ಸರ್ಕಲ್-ಮೆಜೆಸ್ಟಿಕ್- ವಿಧಾನಸೌಧಕ್ಕೆ ಬಸ್ ಸಂಚರಿಸಲಿದೆ. ಪ್ರಥಮ ಫ್ರೀ ಟಿಕೆಟ್ ಸಿಎಂ ಸಿದ್ದರಾಮಯ್ಯ ವಿತರಿಸಲಿದ್ದಾರೆ.