Webdunia - Bharat's app for daily news and videos

Install App

ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕ: ಶ್ರೀರಾಮುಲು

Webdunia
ಮಂಗಳವಾರ, 21 ಸೆಪ್ಟಂಬರ್ 2021 (14:55 IST)
ಬೆಂಗಳೂರು : ವಜಾಗೊಂಡಿದ್ದ ಸಾರಿಗೆ ನೌಕರರ  ಮರು ನೇಮಕಕ್ಕೆ ಸರ್ಕಾರ ಆದೇಶ ನೀಡಿದೆ. ಈ ಮೂಲಕ 4,200 ಸಾರಿಗೆ ನೌಕರರಿಗೆ ಸಚಿವ ಬಿ.ಶ್ರೀರಾಮುಲು  ಸಿಹಿ ಸುದ್ದಿ ನೀಡಿದ್ದಾರೆ.

ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರನ್ನು ಮರು ನೇಮಕ ಮಾಡಲು ಸರ್ಕಾರ ಆದೇಶ ನೀಡಿದ್ದು, ಸಾರಿಗೆ ಸಚಿವರು ಹಾಗು ನೌಕರರ ನಡುವೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ಸಾರಿಗೆ ಯೂನಿಯನ್ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. 12 ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದರು. ನಿನ್ನೆ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಲಾಗಿದೆ. ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿ ತೊಂದರೆಯಾಗಬಾರದೆಂದು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ವೇತನ ತಾರತಮ್ಯ ಬಗ್ಗೆಯೂ ಸಾರಿಗೆ ನೌಕರರ ಬೇಡಿಕೆ ಇಟ್ಟಿದ್ದರು. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆಯೂ ಮಾತಾನಾಡುವ ಯೋಚನೆ ಇದೆ. ಅವರ ಪ್ರಮುಖವಾದ 4,200 ಸಾರಿಗೆ ನೌಕರರನ್ನ ಪುನರ್ ನೇಮಕ ಬಗ್ಗೆ ಒತ್ತಡ ಇತ್ತು. ಈ ಬಗ್ಗೆ ಮೊದಲು ಆದ್ಯತೆ ಕೊಟ್ಟು ಮರು ನೇಮಕ ಮಾಡುತ್ತೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.
ಬಹುತೇಕ ಎಲ್ಲಾ ಸಮಸ್ಯೆ ಪರಿಹಾರಿಸೋದಾಗಿ ಶ್ರೀರಾಮುಲು ಭರವಸೆ ನೀಡಿದ್ದಾರೆ. ಕಳೆದ ಮುಷ್ಕರದ ವೇಳೆ 4,200 ನೌಕರರನ್ನ ನಿಗಮಗಳು ವಜಾಗೊಳಿಸಿತ್ತು. ಮರು ನೇಮಕಕ್ಕಾಗಿ ಸಾರಿಗೆ ನೌಕರರ ಯೂನಿಯನ್ ಬೇಡಿಕೆ ಇಟ್ಟಿತ್ತು. ಹಲವಾರು ಪ್ರತಿಭಟನೆ ಸಹ ನಡೆದಿತ್ತು. ರಾಮುಲು ಎಲ್ಲಾ ನೌಕರರ ಯೂನಿಯನ್ ಮುಖಂಡರನ್ನ ಕರೆಸಿ ಮಾತುಕತೆ ನಡೆಸಿದರು. ಸಾರಿಗೆ ನೌಕರರ ಮುಖಂಡರಾದ ಅನಂತ ಸುಬ್ಬಾರಾವ್, ಸಿಐಟಿಯು ಮಂಜುನಾಥ್, ಪ್ರಕಾಶ್ ಸೇರಿ ಹಲವು ಮುಖಂಡರ ಜೊತೆ ಚರ್ಚಿಸಿದರು.
ಇನ್ನು ಸಾರಿಗೆ ಸಚಿವರು ಶಾಲಾ, ಕಾಲೇಜಿಗೆ ಹೋಗುವುದಕ್ಕೆ ಮಕ್ಕಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಡಿಪೋಗಳಲ್ಲಿ ಕೆಲಸ ಮಾಡುವ ಸಾರಿಗೆ ನೌಕರರಿಗೆ ಕಿರುಕುಳ, ಸಾರಿಗೆ ನೌಕರರ ಎಲ್ಲಾ ಸಮಸ್ಯೆ, ಬೇಡಿಕೆಗಳನ್ನ ಬಗೆಹರಿಸುತ್ತೇವೆ. ಸ್ವತಃ ನಾನೇ ಡಿಪೋಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಎಲ್ಲದರ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ರಾಮುಲು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments