Publish Date: Tue, 16 Oct 2018 (10:24 IST)
Updated Date: Tue, 16 Oct 2018 (10:27 IST)
ಬೆಂಗಳೂರು: ಕಾಂಗ್ರೆಸ್ ಗೆ ದೊಡ್ಡ ಶಾಕ್ ಕಾದಿದೆ ಎಂಬ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
ಅವರು ಏನು ನಮಗೆ ಶಾಕ್ ಕೊಡೋದು? ನಾವೇ ಅವರಿಗೆ ಶಾಕ್ ಕೊಡ್ತೀವಿ. ಬಿಎಸ್ ವೈ ಒಬ್ಬ ಸುಳ್ಳುಗಾರ, ಅವರಿಂದ ಏನೂ ಆಗಲ್ಲ ಎಂದು ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವ್ಯಂಗ್ಯವಾಗಿ ತಿರುಗೇಟು ಕೊಟ್ಟಿದ್ದಾರೆ.
ಈ ನಡುವೆ ಬಳ್ಳಾರಿ ಕಾಂಗ್ರೆಸ್ ನಲ್ಲಿ ಲೋಕಸಭೆ ಅಭ್ಯರ್ಥಿ ಬಗ್ಗೆ ಯಾರಿಗೂ ಗೊಂದಲ ಬೇಡ. ಪಕ್ಷದ ನಾಯಕರು ಕೈಗೊಳ್ಳುವ ತೀರ್ಮಾನವನ್ನು ಗೌರವಿಸಿ ಎಲ್ಲರೂ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.