Webdunia - Bharat's app for daily news and videos

Install App

ಗಗನಕ್ಕೇರಿದ ಹೂ, ಅಗತ್ಯ ವಸ್ತುಗಳ ಬೆಲೆ

Webdunia
ಸೋಮವಾರ, 3 ಅಕ್ಟೋಬರ್ 2022 (06:33 IST)
ಬೆಂಗಳೂರು : ದಸರಾ ಮತ್ತು ಆಯುಧಪೂಜೆ ಹಿನ್ನೆಲೆ ನಗರದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಹಬ್ಬದ ಹಿನ್ನೆಲೆ ನಾಳೆ ನಾಡಿದ್ದು ಇನ್ನಷ್ಟು ದರ ಏರಿಕೆ ಸಾಧ್ಯತೆ ಇದ್ದು, ಇಂದೇ ಜನ ಖರೀದಿಗೆ ಮುಂದಾಗಿದ್ದಾರೆ.

ಹಬ್ಬದ ದಿನಗಳು ಹತ್ತಿರ ಬಂದರೆ ಸಾಕು ಜನಸಾಮಾನ್ಯರ ಜೇಬಿಗೆ ಹೊರೆ ಬೀಳುವುದು ಸಾಮಾನ್ಯ. ಕಾರಣ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ.
ಅದರಂತೆ ಈ ಬಾರಿಯ ಆಯುಧಪೂಜೆ ದಸರಾಗೂ ದರ ಏರಿಕೆಯಾಗಿದ್ದು, ಹಬ್ಬಕ್ಕೆ ಎರಡು ದಿನ ಮುನ್ನವೆ ಖರೀದಿ ಕೂಡ ಜೋರಾಗಿದೆ. 

ಈ ಬಾರಿ ಆಯುಧಪೂಜೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಸಾಮಾನ್ಯವಾಗಿ ಆಯುಧಪೂಜೆ ಸಂದರ್ಭದಲ್ಲಿ ವಾಹನಗಳು, ಯಂತ್ರಗಳಿಗೆ ಹೂವಿನ ಅಲಂಕಾರದ ಜೊತೆಗೆ, ಪೂಜೆ ಪುನಾಸ್ಕಾರಗಳು ಜೋರಾಗಿಯೇ ಮಾಡುವುದರಿಂದ ಹೂ ಸೇರಿದಂತೆ ಕೆಲ ಅಗತ್ಯ ವಸ್ತುಗಳ ದರ ದುಪ್ಪಟ್ಟಾಗಿದೆ.

ಹೂವಿನ ಬೆಲೆ ಕೆಜಿಗೆ ಎಷ್ಟು?

ಮಲ್ಲಿಗೆ ಹೂ – 1000 ಸಾವಿರ ರೂ.
ಸೇವಂತಿಗೆ – 300-500  ರೂ.
ಚೆಂಡು ಹೂ – 150 ರೂ .
ಕನಕಾಂಬರ – 3 ಸಾವಿರ
ಸುಗಂಧರಾಜ – 400 ರೂ.
ಕಾಕಡ – 700-800 ರೂ.

ಕೇವಲ ಹೂ ಮಾತ್ರ ಅಲ್ಲ. ಈ ಹಬ್ಬಕ್ಕೆ ಬೇಕಾದ ಮತ್ತೊಂದು ಅಗತ್ಯ ವಸ್ತು ಅಂದರೆ ಕುಂಬಳಕಾಯಿ ಹಾಗೂ ಬಾಳೆ ಕಂಬ. ಇವುಗಳ ಬೆಲೆ ಕೂಡ ಡಬಲ್ ಆಗಿದೆ. ತಮಿಳುನಾಡು, ಆಂಧ್ರದಿಂದ ನಗರಕ್ಕೆ ಆಗಮಿಸಿರುವ ಕುಂಬಳಕಾಯಿ ಕೆ.ಜಿಗೆ 35 ರಿಂದ 40 ರೂ. ಗೆ ಏರಿಕೆ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments