ಸ್ಪೀಕರ್ ರಮೇಶ್ ಕುಮಾರ್ ಗೇ ಪ್ರಮಾಣ ವಚನಕ್ಕೆ ಬಾಗಿಲು ಬಂದ್!

Webdunia
ಗುರುವಾರ, 7 ಜೂನ್ 2018 (09:20 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಿನ್ನೆ ರಾಜಭವನದಲ್ಲಿ ನಡೆದಿತ್ತು. ಆದರೆ ಈ ಸಮಾರಂಭಕ್ಕೆ ಸ್ಪೀಕರ್ ರಮೇಶ್ ಕುಮಾರ್ ಗೇ ಪ್ರವೇಶಿಸಲಾಗಲಿಲ್ಲ.

ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದ ರಾಜಭವನದಲ್ಲಿ ಉಂಟಾದ ಟ್ರಾಫಿಕ್ ಗೊಂದಲದಿಂದಾಗಿ ಒಳಗೆ ಪ್ರವೇಶಿಲಾಗದೇ ಸ್ಪೀಕರ್ ರಮೇಶ್ ಕುಮಾರ್ ಹೊರೆಗೆ ಅರ್ಧ ಗಂಟೆಗಳ ಕಾಲ ಕಾದು ಕೊನೆಗೆ ಬೇಸತ್ತು ಮರಳಿದ್ದಾರೆ. ಬಳಿಕ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಖಡಕ್ ಆಗಿ ಅಸಮಾಧಾನ ಹೊರಹಾಕಿದ್ದಾರೆ.

ತಮ್ಮ ಆಹ್ವಾನದ ಮೇರೆಗೆ ಕಾರ್ಯಕ್ರಮಕ್ಕೆ ಬಂದು ಅರ್ಧಗಂಟೆ ಕಾದು ಅಸಹಾಯಕನಾಗಿ ಮರಳಿದ್ದೇನೆ. ಈ ಅವ್ಯವಸ್ಥೆಗೆ ಯಾರು ಕಾರಣ ಗೊತ್ತಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೊರತಾಗಿ ಸ್ಪೀಕರ್ ಸ್ಥಾನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೊಡ್ಡದು. ಸಭಾಪತಿಗಳು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೇಬೇಕು. ಇದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಆದರೆ ನಿಮ್ಮ ಅಧಿಕಾರಿಗಳ ಅಜ್ಞಾನ, ದುರಹಂಕಾರದಿಂದ ಈ ರೀತಿಯಾಗಿದೆ.

ಇವೆಲ್ಲವನ್ನೂ ಮೀರಿ ರಾಜಭವನದ ಒಳಗೆ ಮತ್ತು ಹೊರಗೆ ತುಂಬಿದ್ದ ವಾಹನಗಳು ಯಾರವು? ಇದಕ್ಕೆ ಅನುಮತಿ ನೀಡಿದವರು ಯಾರು? ಎಂದು ತಿಳಿದುಕೊಳ್ಳಲು ಬಯಸುತ್ತೇನೆ. ನಿಮ್ಮ ಅಕ್ಷಮ್ಯ ಅಪರಾಧಕ್ಕೆ ಈ ಮೂಲಕ ಪ್ರತಿಭಟನೆ ಸಲ್ಲಿಸುತ್ತೇನೆ’ ಎಂದು ರಮೇಶ್ ಕುಮಾರ್ ಪತ್ರದಲ್ಲಿ ಖಾರವಾಗಿ ನುಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೇ ಶಾಕ್ ಕೊಟ್ಟ ಡಿಕೆ ಶಿವಕುಮಾರ್

ಯೂಟ್ಯೂಬ್ ಡೌನ್: ಯೂಟ್ಯೂಬ್ ಓಪನ್ ಮಾಡಿದ್ರೆ ನಿಮಗೂ ಹೀಗೆ ಬರ್ತಿದೆಯಾ

Karnataka Weather: ಕರ್ನಾಟಕದಲ್ಲಿ ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments