Webdunia - Bharat's app for daily news and videos

Install App

ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಪೋಟ.

Webdunia
ಮಂಗಳವಾರ, 3 ಏಪ್ರಿಲ್ 2018 (12:56 IST)
ವಿಜಯಪುರ ಜಿಲ್ಲೆಯ ಇಂಡಿ ವಿಧಾನ ಸಭಾ ಮತಕ್ಷೇತ್ರದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಾಕಷ್ಟು ಗೊಂದಲ ಸೃಷ್ಟಿಸುತ್ತಿದೆ ಎಂದು ಬಿಜೆಪಿ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯ ಗಂಧ ಗಾಳಿ ಗೊತ್ತಿರದಿರುವವರು ಕೂಡಾ ಆ ಪಟ್ಟಿಯಲ್ಲಿ ಇದ್ದಾರೆ. ಮಾದ್ಯಮದಲ್ಲಿ ಬಂದಿರುವ ಪಟ್ಟಿ ಗೊಂದಲ ಸೃಷ್ಟಿಸುತ್ತಿದೆ. ಪಕ್ಷಕ್ಕಾಗಿ ಕೆಲಸ ಮಾಡಿದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೇಟ್ ಕೊಟ್ಟರೆ ನಾವು ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
 
ರಾಜ್ಯಾದ್ಯಕ್ಷರು ಕೂಡಾ ಇದಕ್ಕೆ ಸಮ್ಮತಿ ನೀಡಿದ್ದಾರೆ. ಮತಕ್ಷೇತ್ರದ ಜನ ಯಾವುದೇ ಕಾರಣಕ್ಕೂ ಗೊಂದಲಕ್ಕೆ ಒಳಗಾಗಬಾರದು. ರಾಷ್ಟ್ರೀಯ ಹಾಗೂ ರಾಜ್ಯಾದ್ಯಕ್ಷರು ಘೋಷಣೆ ಮಾಡಿದ‌ ಅಭ್ಯರ್ಥಿಗಳಿಗೆ ನಾವು ಬೆಂಬಲಿಸುತ್ತೇವೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರವಿಕಾಂತ್ ಬಗಲಿ ಹೇಳಿದ್ದಾರೆ
 
ಮಾಜಿ ಶಾಸಕ ರವಿಕಾಂತ ಪಾಟೀಲಗೂ ಬಿಜೆಪಿಗೆ ಯಾವುದೇ ರೀತಿಯ ಸಂಬಂಧವಿಲ್ಲ. ಅವರು ಪಕ್ಷದ ಅಬ್ಯರ್ಥಿ ಕೂಡಾ ಅಲ್ಲ. ರವಿಕಾಂತ ಪಾಟೀಲರ ಪುತ್ರ ಯುವ ಮೋರ್ಚಾ ರಾಜ್ಯ ಪಧಾಧಿಕಾರಿಯಾಗಿದ್ದಾರೆ. ಆದರೆ ರವಿಕಾಂತ ಪಾಟೀಲರಿಗೂ ಪಕ್ಷಕ್ಕೆ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಆದರೆ, ರವಿಕಾಂತ್ ಪಾಟೀಲ್ ತಾವೇ ಬಿಜೆಪಿ ಪಕ್ಷದ ಅಭ್ಯರ್ಥಿ ಎಂದು ಇಂಡಿ ಮತಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದಾರೆ. ರವಿಕಾಂತ ಪಾಟೀಲರಿಗೆ ನೋಟಿಸ್ ಕೊಡಬೇಕು ಎಂದರೆ ಅವರು ಪಕ್ಷದ ಸದಸ್ಯನ ಅಲ್ಲ. ಈ ಹಿನ್ನಲೆಯಲ್ಲಿ ಅವರಿಗೆ ನೋಟಿಸ್ ಕೊಡುತ್ತಿಲ್ಲ. ರವಿಕಾಂತ ಪಾಟೀಲ್ ಅಥವಾ ಬೇರಾರಿಗೆ ಟಿಕೇಟ್ ಕೊಟ್ಟರೆ ಬಂಡಾಯದ ಭಾವುಟ ಹಾರಿಸುವದು ಖಚಿತ ಎಂದು ಗುಡುಗಿದ್ದಾರೆ.
 
ಪಕ್ಷಕ್ಕಾಗಿ ದುಡಿದ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೇಟ್ ಕೊಟ್ಟರೂ ಅದಕ್ಕೆ ನಮ್ಮ ಬೆಂಬಲವಿದೆ ಎಂದು.ಮಾದ್ಯಮಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕಾಂತ ಬಗಲಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments