Webdunia - Bharat's app for daily news and videos

Install App

ಸರ್ಕಾರಕ್ಕೆ ಮುಳುವಾಯ್ತ ಈ ನೈಟ್ ಕರ್ಫ್ಯೂ!?

Webdunia
ಬುಧವಾರ, 29 ಡಿಸೆಂಬರ್ 2021 (10:39 IST)
ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ಹೊಸ ವರ್ಷದ ಪಾರ್ಟಿಗಾಗಿ ರಾಜ್ಯದ ಜನರು ನೆರೆಯ ರಾಜ್ಯಗಳಿಗೆ ವಲಸೆ ಹೋಗಲು ಸಜ್ಜಾಗಿದ್ದಾರೆ.

ಇದರಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟಾಗಲಿದೆ. ಮಂಗಳವಾರ ರಾತ್ರಿಯಿಂದಲೇ 10 ದಿನಗಳ ಕಾಲ ರಾಜ್ಯದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹೊಸ ವರ್ಷಕ್ಕೆ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್, ಬಾರ್, ಪಬ್ನಲ್ಲಿ ಪಾರ್ಟಿ ಮಾಡುವವರು ನೆರೆಯ ಗೋವಾ, ತಮಿಳುನಾಡಿಗೆ ವಲಸೆ ಹೋಗುತ್ತಿದ್ದಾರೆ.

ಈಗಾಗಲೇ ಪಾರ್ಟಿಗಾಗಿ ನಗರ ಹಾಗೂ ಆಸುಪಾಸಿನ ಪ್ರದೇಶದ ರೆಸಾರ್ಟ್, ಹೋಟೆಲ್ ಬುಕ್ ಮಾಡಿದ ಗ್ರಾಹಕರು ಆರ್ಡರ್ ಕ್ಯಾನ್ಸಲ್ ಮಾಡುತ್ತಿದ್ದಾರೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎನ್ನುತ್ತಾರೆ ಮಾಲೀಕರು.

ಕೋವಿಡ್ ಪೂರ್ವದಲ್ಲಿ ಹೊಸ ವರ್ಷದ ಮುನ್ನಾದಿನ ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಜನ ಜಾತ್ರೆಯೇ ಸೇರುತ್ತಿತ್ತು. ಪಬ್, ಬಾರ್, ಹೋಟೆಲ್ಗಳು ಕಿಕ್ಕಿರಿದು ತುಂಬಿರುತ್ತಿದ್ದವು.

ಬೆಳಗಾಗುವುದರೊಳಗೆ ನೂರಾರು ಕೋಟಿ ರೂ. ವಹಿವಾಟು ನಡೆಯುತ್ತಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಕೋವಿಡ್ ಬಿಗಿ ನಿಯಮದ ಹಿನ್ನೆಲೆಯಲ್ಲಿ ಜನರೇ ಬರುತ್ತಿಲ್ಲ. ಮೋಜು ಮಸ್ತಿಗೆ ಬ್ರೇಕ್ ಬಿದ್ದಿದ್ದು, ವ್ಯಾಪಾರ ವಹಿವಾಟು ಪಾತಾಳಕ್ಕೆ ಕುಸಿದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments