Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನಾವು ಈ ಸಂಗತಿಯನ್ನು ಪದೇಪದೆ ಚರ್ಚಿಸುತ್ತಿದ್ದೇವೆ. ಒಮೈಕ್ರಾನ್ ರೂಪಾಂತರಿಯನ್ನು ನಾವ್ಯಾರೂ ಹಗುರವಾಗಿ ಪರಿಗಣಿಸುವಂತಿಲ್ಲ.
ರಾಜ್ಯ ಕೊವಿಡ್ ಟಾಸ್ಕ್ ಫೋರ್ಸ್ ಚೇರ್ಮನ್ ಡಾ ದೇವಿಪ್ರಸಾದ್ ಶೆಟ್ಟಿ ಅದನ್ನೇ ಹೇಳಿದ್ದಾರೆ. ಅದು ಬೇರೆ ಬೇರೆ ದೇಶಗಳಲ್ಲಿ ಕಾಣಿಸಿಕೊಂಡಿದೆ ಎಂದರೆ, ಭಾರತದಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ ಕರ್ನಾಟಕವೂ ಸೇರಿದಂತೆ ಎಲ್ಲ ರಾಜ್ಯಗಳ ಸರ್ಕಾರಗಳು ಸಾಧ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಜಾರಿಗೆ ತರುತ್ತಿವೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರ ಯಾವ ಹಂತದಲ್ಲೂ ಎಚ್ಚರ ತಪ್ಪುವುದಿಲ್ಲ ಎಂಬ ಆಶ್ವಾಸನೆಯನ್ನು ಜನತೆಗೆ ನೀಡುತ್ತಲೇ ಇದ್ದಾರೆ.
ಅದಕ್ಕೆ ತಕ್ಕ ಹಾಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹ ಕಾರ್ಯೋನ್ಮುಖಗೊಂಡು ಜನರಿಗೆ ಎಚ್ಚರದಿಂದಿರಲು, ಲಸಿಕೆ ಹಾಕಿಸಿಕೊಳ್ಳಲು ಆಗ್ರಹಿಸುತ್ತಿದೆ. ಮಂಗಳವಾರ ಬೆಂಗಳೂರಿನ ಐಕಾನಿಕ್ ಕೆ ಅರ್ ಮಾರ್ಕೆಟ್ನಲ್ಲಿ ವ್ಯಾಪಾರ ಮಾಡುವ ಜನರಿಗೆ ಲಸಿಕೆ ಹಾಕಿಸಿಕೊಳ್ಳಲು ಬಿ ಬಿ ಎಮ್ ಪಿಯ ಮಹಿಳಾ ಮಾರ್ಷಲೊಬ್ಬರು ಕೈಯಲ್ಲಿ ಧ್ವನಿವರ್ಧಕ ಹಿಡಿದು ಘೋಷಣೆ ಮಾಡುತ್ತಿದ್ದರು.
ಅವರು ಹೇಳುತ್ತಿರುವುದನ್ನು ಗಮನವಿಟ್ಟು ಕೇಳಿಸಿಕೊಳ್ಳಿ. ಲಸಿಕೆಯ ಎರಡೂ ಡೋಸ್ ಹಾಕಿಸಿಕೊಳ್ಳದವರಿಗೆ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡುವ ಅವಕಾಶ ನೀಡಲಾಗದು ಅಂತ ಹೇಳುತ್ತಿದ್ದಾರೆ.