Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಸರ್ಕಾರಿ ನೇಮಕಾತಿ ಪರೀಕ್ಷೆಗಳ ವೇಳೆ ನಡೆಯುವ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಟಫ್ ರೂಲ್ಸ್ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ ಎಲ್ಲ ಸರ್ಕಾರಿ ನೇಮಕಾತಿ ಪರೀಕ್ಷೆಗಳ ವೇಳೆ ಇನ್ಮುಂದೆ ಜಾಮರ್ ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ. ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಕರ್ಮಕಾಂಡ ಹಿನ್ನೆಲೆಯಲ್ಲಿ ಜಾಮರ್ ಅಳವಡಿಕೆಗೆ ಸರ್ಕಾರ ಮುಂದಾಗಿದೆ.
ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಜಾಮರ್ ಅಳವಡಿಕೆ ಸಂಬಂಧ ಸರ್ಕಾರ ಮಟ್ಟದಲ್ಲಿ ಮಹತ್ವದ ಚರ್ಚೆ ನಡೆದಿದೆ. ಯಾವುದೇ ಪರೀಕ್ಷೆ ನಡೆದರೂ ಜಾಮರ್ ಕಡ್ಡಾಯ ಮಾಡುವ ಬಗ್ಗೆ ಪ್ಲ್ಯಾನ್ ಮಾಡುತ್ತಿದೆ. ಜಾಮರ್ ಅಳವಡಿಕೆ ಸಂಬಂಧ ಜೂನ್ ವಾರದಲ್ಲಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.