ದಿಢೀರ್ ಏರಿಕೆಯಾದ ತರಕಾರಿ ಬೆಲೆ!

Webdunia
ಮಂಗಳವಾರ, 23 ನವೆಂಬರ್ 2021 (16:22 IST)
ಹುಬ್ಬಳ್ಳಿ : ಅಕಾಲಿಕವಾಗಿ ಸುರಿದ ಭಾರಿ ಮಳೆ ಸೃಷ್ಟಿಸಿದ ಅವಾಂತರಗಳಿಗೆ ಲೆಕ್ಕವಿಲ್ಲ. ಮಳೆಯಿಂದಾಗಿ ಒಂದು ಕಡೆ ರೈತ ಸಮುದಾಯ  ಸಂಕಷ್ಟಕ್ಕೆ ಗುರಿಯಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಸುಮಾರು ಒಂದು ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಕೈಗೆ ಬಂದ ತುತ್ತು ರೈತರ ಬಾಯಿಗೆ ಬಾರದಂತಾಗಿದೆ. ಇದು ಹೀಗಿರಬೇಕಾದರೆ ಅತಿಯಾದ ಮಳೆ ಹೊಡೆತಕ್ಕೆ ಜನಸಾಮಾನ್ಯನೂ ಕಕ್ಕಾಬಿಕ್ಕಿಯಾಗುವಂತಾಗಿದೆ. ತರಕಾರಿಗಳ ದರ ದಿಢೀರ್ ಏರಿಕೆಯಾಗಿದ್ದು, ಗ್ರಾಹಕನ ಜೇಬಿಗೆ ಕತ್ತರಿ ಬೀಳುವಂತಾಗಿದೆ. ಅತಿವೃಷ್ಟಿಯಿಂದ ತರಕಾರಿ ಬೆಲೆ ಗಗನಕ್ಕೇರಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಟೊಮ್ಯಾಟೊ, ಮೆಣಸಿನಕಾಯಿ ಬೆಲೆ ಶತಕದ ಗಡಿ ದಾಟಿದೆ.
ಹುಬ್ಬಳ್ಳಿ ಜನತಾ ಬಜಾರ್, ದುರ್ಗದ ಬೈಲು, ಸರಾಫ್ ಕಟ್ಟಾ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಟೊಮ್ಯಾಟೋ 100 ರೂಪಾಯಿಗೆ ಮಾರಾಟವಾಗುತ್ತಿದೆ. ಸಣ್ಣ ಟೊಮೇಟೊ 70 ರಿಂದ 80 ರೂ.ಗಳಿಗೆ ಮಾರಾಟವಾಗುತ್ತಿದೆ. ಹಸಿ ಮೆಣಸಿನಕಾಯಿ ದರ ಪ್ರತಿ ಕೆ.ಜಿ.ಗೆ 100 ರಿಂದ 120 ರೂಪಾಯಿಗೆ ಏರಿಕೆಯಾಗಿದೆ.  ಈರುಳ್ಳಿ ದರ ಅರ್ಧ ಶತಕದ ಗಡಿ ದಾಟಿದೆ.
ಬೆಂಡೆಕಾಯಿ, ಹೀರೇಕಾಯಿ, ಸೌತೇಕಾಯಿ, ಕ್ಯಾರೆಟ್, ಹೂ ಕೋಸು, ಎಲೆ ಕೋಸು ಇತ್ಯಾದಿಗಳ ದರವೂ ಗಗನಮುಖಿಯಾಗಿದೆ. ಕೆಜಿ ಕ್ಯಾರೆಟ್-80 ರೂ., ಬೆಂಡೇಕಾಯಿ-80ರೂ., ಆಲೂಗೆಡ್ಡೆ-35 ರೂ, ಹೀರೇಕಾಯಿ-80, ಬದನೆಕಾಯಿ-50, ಹಸಿಮೆಣಸಿನಕಾಯಿ-100 ರಿಂದ 120 ರೂಪಾಯಿ, ಎಲೆಕೋಸು-40, ಸವತಿಕಾಯಿ-60 ರೂ ಹೀಗೆ ಕಾಯಿಪಲ್ಲೆಗಳ ಬೆಲೆಗಳಲ್ಲಿ ಭಾರೀ ಹೆಚ್ಚಳ ಕಂಡಿವೆ. ಇದರ ಜತೆಗೆ ಸೊಪ್ಪುಗಳ ಬೆಲೆಯಲ್ಲೂ ಭಾರೀ ಏರಿಕೆ ಕಾಣುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಮುಂದಿನ ಸುದ್ದಿ
Show comments