ನಡೆದಾಡೋ ದೇವರ ಜನ್ಮ ದಿನಾಚರಣೆ ಪೂರ್ತಿ ಅಪ್ಡೇಟ್

Webdunia
ಗುರುವಾರ, 31 ಮಾರ್ಚ್ 2022 (07:58 IST)
ತುಮಕೂರು : ಕಾಯಕಯೋಗಿ, ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮಿಗಳು ಲಿಂಗೈಕ್ಯರಾಗಿ ಮೂರು ವರ್ಷ ಕಳೆದಿವೆ.

ಶ್ರೀಗಳ 115ನೇ ಜನ್ಮ ದಿನೋತ್ಸವಕ್ಕೆ ಸಿದ್ದಗಂಗಾ ಮಠದಲ್ಲಿ ಭರ್ಜರಿ ಸಿದ್ದತೆ ನಡೆಯುತ್ತಿದೆ.

ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯರಾದಾಗ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯ ಯಾವೊಬ್ಬ ರಾಷ್ಟ್ರೀಯ ನಾಯಕರೂ ಶ್ರೀಗಳ ಅಂತಿಮ ದರ್ಶನ ಪಡೆದಿರಲಿಲ್ಲ.

ಸಿದ್ದಗಂಗಾ ಮಠದಲ್ಲಿ ಶ್ರೀಗಳ ಜಯಂತ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ರೀಗಳ 115ನೇ ಜನ್ಮ ದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸರಿಸುಮಾರು 2-3 ಲಕ್ಷ ಜನ ಸೇರುವ ನಿರೀಕ್ಷೆ ಇದೆ.

ವೇದಿಕೆಗೆ ‘ನಡೆದಾಡುವ ಬಸವ ಭಾರತ’ ಅಂತ ಹೆಸರಿಡಲಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದು, ಸುತ್ತೂರು ಶ್ರೀಗಳು, ಸಿಎಂ ಬೊಮ್ಮಾಯಿ ಸೇರಿ ಹಲವರು ಭಾಗಿ ಆಗಲಿದ್ದಾರೆ.

ಕಾರ್ಯಕ್ರಮದಲ್ಲಿ 100 ಜನ ಗಾಯಕರು, 150 ಮಂದಿ ಕಲಾವಿದರು ಸೇರಲಿದ್ದಾರೆ. ಮಠದ ಆವರಣದಲ್ಲಿ ಬ್ಯಾನರ್, ಕಟೌಟ್ಗಳು ರಾರಾಜಿಸುತ್ತಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಗಣಕ್ಕಾಗಿಯೇ ಬಗೆ ಬಗೆಯ ಖಾದ್ಯಗಳು ತಯಾರಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ಮುಂದಿನ ಸುದ್ದಿ
Show comments