Webdunia - Bharat's app for daily news and videos

Install App

ಭಾರೀ ಮಳೆಗೆ ಮನೆಗಳಿಗೆ ನುಗ್ಗಿತು ನೀರು!

Webdunia
ಶನಿವಾರ, 30 ಜುಲೈ 2022 (14:14 IST)
ಮಂಗಳೂರು : ನಗರದಲ್ಲಿ ಇಂದು ಬೆಳಗ್ಗೆ ಸತತವಾಗಿ ಸುರಿದ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳು, ಆಹಾರ ಪದಾರ್ಥಗಳು ನೀರು ಪಾಲಾಗಿದ್ದು, ರಸ್ತೆಗಳೆಲ್ಲ ನೀರು ತುಂಬಿಕೊಂಡು ಕೆರೆಯಂತಾಗಿದೆ.

ಇಂದು ಮುಂಜಾನೆಯಿಂದ ಮೂರ್ನಾಲ್ಕು ಗಂಟೆ ನಿರಂತರವಾಗಿ ಸುರಿದ ಮಳೆಗೆ ಶಿವನಗರದಲ್ಲಿ ಐವತ್ತಕ್ಕೂ ಹೆಚ್ಚು ಮನೆಗಳಿಗೆ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿದ್ದರಿಂದ ಮನೆಯಲ್ಲಿದ್ದ ವಸ್ತಗಳೆಲ್ಲಾ ನೀರಿನಲ್ಲಿ ತೇಲಿದವು.

ಎಲೆಕ್ಟ್ರಾನಿಕ್ ಉಪಕರಣಗಳು, ಹಾಸಿಗೆ, ಪಾತ್ರೆಗಳು, ಆಹಾರ ಪದಾರ್ಥಗಳೆಲ್ಲಾ ನೀರು ಪಾಲಾದವು. ಮನೆಯಿಂದ ನೀರು ಹೊರಹಾಕಲು ಇಲ್ಲಿನ ನಿವಾಸಿಗಳು ಹರಸಾಹಸಪಟ್ಟರು.

ಮನೆಗಳಿಗೆ ನೀರು ನುಗ್ಗಿದ್ದರಿಂದ ಮನೆಯಲ್ಲಿ ಇರಲಾಗದೆ ಮನೆಯಿಂದ ಹೊರ ಬಂದು ಕಾಲ ಕಳೆಯಬೇಕಾಯಿತು. ಸ್ಥಳಕ್ಕೆ ಮಹಾನಗರ ಪಾಲಿಕೆ ಸಿಬ್ಬಂದಿ ಆಗಮಿಸಿ ಕಸ ಕಟ್ಟಿಕೊಂಡಿದ್ದ ಡ್ರೈನೇಜ್, ಚರಂಡಿಗಳನ್ನು ಸ್ವಚ್ಛ ಮಾಡಿದರು. ಶಿವನಗರದ ರಸ್ತೆಗಳೆಲ್ಲೆಲ್ಲಾ ನೀರು ತುಂಬಿಕೊಂಡು ಕೆರೆಯಂತಾಗಿದ್ದರೆ, ವಾಹನಗಳು ನೀರಿನಲ್ಲಿ ತೇಲಿದವು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments