Shorts

ಬೆಂಗಳೂರು: ಬೆಂಗಳೂರಿನ ಘನತ್ಯಾಜ್ಯ ವಿಲೇವಾರಿ ಯೋಜನೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಮಾಡುತ್ತಿರುವ ₹39,000 ಕೋಟಿ ಅಕ್ರಮ ಹಾಗೂ ಲೂಟಿ ಆರೋಪಗಳು ಸಂಪೂರ್ಣ ಆಧಾರರಹಿತವಾಗಿದ್ದು, ಜನರನ್ನು ದಾರಿ ತಪ್ಪಿಸುವ ಪ್ರಯತ್ನವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದರು.ಘನತ್ಯಾಜ್ಯ ವಿಲೇವಾರಿ ಯೋಜನೆಗೆ 30 ವರ್ಷಗಳ ಅವಧಿಯ ಗುತ್ತಿಗೆ ನೀಡಿರುವುದು ಮೂಲಸೌಕರ್ಯ ಅಭಿವೃದ್ಧಿ, ಸಂಸ್ಕರಣಾ ಘಟಕಗಳ ನಿರ್ಮಾಣ ಹಾಗೂ ದೀರ್ಘಾವಧಿಯ ಹೂಡಿಕೆಯನ್ನು ಗಮನದಲ್ಲಿಟ್ಟುಕೊಂಡು. ಕಸ ಸಂಗ್ರಹಣೆ, ಸಾಗಣೆ ಹಾಗೂ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯನ್ನು ಗುತ್ತಿಗೆ ಪಡೆಯುವ ಸಂಸ್ಥೆ ನಿರ್ವಹಿಸಲಿದೆ. ಪೌರಕಾರ್ಮಿಕರ ವೇತನವನ್ನು ಬಿಬಿಎಂಪಿಯೇ ಪ್ರತ್ಯೇಕವಾಗಿ ಭರಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ನಿಧನ ಹೊಂದಿದ್ದಾರೆ ಎನ್ನುವ ಸುಳ್ಳು ಸುದ್ದಿ ವೈರಲ್ ಆಗುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ದೊಡ್ಡಣ್ಣ, ನಾನು ಆರೋಗ್ಯವಾಗಿದ್ದೀನಿ. ಅದು ಅವಿವೇಕಿಗಳ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೋ ಕಿಡಿಗೇಡಿಗಳು ಸೃಷ್ಟಿಸಿದ ಒಂದು ಸುಳ್ಳು ಪೋಸ್ಟ್ ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸಿತ್ತು. ದೊಡ್ಡಣ್ಣ ಅವರು ಇನ್ನಿಲ್ಲ ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬುತ್ತಿದ್ದಂತೆಯೇ, ಅವರ ಅಭಿಮಾನಿಗಳು ಮತ್ತು ಚಿತ್ರರಂಗದ ಆಪ್ತರು ಆತಂಕಕ್ಕೊಳಗಾಗಿದ್ದರು. ಆದರೆ, ಈ ಎಲ್ಲಾ ವದಂತಿಗಳಿಗೆ ಸ್ವತಃ ದೊಡ್ಡಣ್ಣ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸತ್ತಿಲ್ಲ, ಬದುಕಿದ್ದೀನಿ. ತುಂಬಾ ಆರೋಗ್ಯವಾಗಿದ್ದೇನೆ ಮತ್ತು ನೆಮ್ಮದಿಯಾಗಿದ್ದೇನೆ. ಇಂದು ಬೆಳಗ್ಗೆ ನಿದ್ದೆಯಿಂದ ಎದ್ದು ಮುಖ ತೊಳೆಯುವುದಕ್ಕೂ ನನಗೆ ಪುರುಸೊತ್ತಿಲ್ಲದಂತೆ ಸತತವಾಗಿ ಫೋನ್ ಕರೆಗಳು ಬರುತ್ತಿವೆ.