ಮುಂಬೈ: ಭಾರತ ತಂಡದ ವೇಗಿ ಮೊಹಮ್ಮದ್ ಶಮಿ ಅವರು ದೇಶಕ್ಕಾಗಿ ತಮ್ಮ ರಂಜಾನ್ ಉಪವಾಸ ಮುರಿದಿದ್ದಾರೆ. ಮೊಹಮ್ಮದ್ ಶಮಿ ನಡಗೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ, ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷರು ಶಮಿ ನಡೆಯನ್ನು ಟೀಕಿಸುವ ಭರದಲ್ಲಿ ವಿವಾದ ಸೃಷ್ಟಿಸಿದ್ದಾರೆ.ರಂಜಾನ್ ಸಮಯದಲ್ಲಿ ರೋಜಾ ಆಚರಿಸದ ಭಾರತೀಯ ಕ್ರಿಕೆಟರ್ ಮೊಹಮ್ಮದ್ ಶಮಿಯನ್ನು ಅಪರಾಧಿ ಎಂದು ಕರೆಯುವ ಮೂಲಕ ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ವಿವಾದವನ್ನು ಹುಟ್ಟುಹಾಕಿದ್ದಾರೆ.ರೋಜಾ ಇಟ್ಟುಕೊಳ್ಳದೆ ಅವರು (ಮೊಹಮ್ಮದ್ ಶಮಿ) ಅಪರಾಧ ಮಾಡಿದ್ದಾರೆ, ಅವರು ಇದನ್ನು ಮಾಡಬಾರದು. ಶರಿಯತ್ ದೃಷ್ಟಿಯಲ್ಲಿ ಅವರು ಅಪರಾಧಿ, ಅವರು ದೇವರಿಗೆ ಉತ್ತರಿಸಬೇಕಾಗುತ್ತದೆ ಎಂದು ಮೌಲಾನಾ ಬರೇಲ್ವಿ ಹೇಳಿದ್ದಾರೆ.

ನವದೆಹಲಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ಅವರ ಬಂಧನದ ಬೆನ್ನಲ್ಲೇ ಎಸ್‌ಡಿಪಿಐ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ.ನಿಷೇಧಿತ ಪಿಎಫ್‌ಐ ನಂಟು ಹೊಂದಿರುವ ಎಸ್‌ಡಿಪಿಐ ವಿರುದ್ದ ಇರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ 12ಕ್ಕೂ ಅಧಿಕ ಕಡೆಗಳಲ್ಲಿ ಇಡಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.ಉಗ್ರ ಚಟುವಟಿಕೆ ಸೇರಿ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ 2022ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಪಿಎಫ್‌ಐ ಅನ್ನು ನಿಷೇಧಿಸಿತ್ತು. 2009ರಲ್ಲಿ ಎಸ್‌ಡಿಪಿಐ ಸ್ಥಾಪನೆಯಾಗಿತ್ತು. ಇದು ದೆಹಲಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಇದು ಪಿಎಫ್‌ಐನ ರಾಜಕೀಯ ಪಕ್ಷ ಎಂದು ಹೇಳಲಾಗುತ್ತದೆ.

ರಾಘವೇಂದ್ರ ಸ್ವಾಮಿಗಳ ಕುರಿತಾದ ಅಪ್ಪಣಾಚಾರ್ಯ ವಿರಚಿತ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ. ಇದನ್ನು ಗುರುವಾರಗಳಂದು ತಪ್ಪದೇ ಓದಿ. ಇದರಿಂದ ನಿಮಗೆ ಸಕಲವೂ ಒಳಿತಾಗುವುದು. ಶ್ರೀಪೂರ್ಣಬೋಧ-ಗುರು-ತೀರ್ಥ-ಪಯೋಽಬ್ಧಿ-ಪಾರಾಕಾಮಾರಿ-ಮಾಽಕ್ಷ-ವಿಷಮಾಕ್ಷ-ಶಿರಃ ಸ್ಪೃಶಂತೀ |ಪೂರ್ವೋತ್ತರಾಮಿತ-ತರಂಗ-ಚರತ್-ಸು-ಹಂಸಾದೇವಾಲಿ-ಸೇವಿತ-ಪರಾಂಘ್ರಿ-ಪಯೋಜ-ಲಗ್ನಾ || ೧ ||ಜೀವೇಶ-ಭೇದ-ಗುಣ-ಪೂರ್ತಿ-ಜಗತ್-ಸು-ಸತ್ತ್ವ-ನೀಚೋಚ್ಚ-ಭಾವ-ಮುಖ-ನಕ್ರ-ಗಣೈಃ ಸಮೇತಾ |ದುರ್ವಾದ್ಯಜಾ-ಪತಿ-ಗಿಲೈರ್ಗುರು-ರಾಘವೇಂದ್ರ-ವಾಗ್-ದೇವತಾ-ಸರಿದಮುಂ ವಿಮಲೀಕರೋತು || ೨ ||ಶ್ರೀ-ರಾಘವೇಂದ್ರಃ ಸಕಲ-ಪ್ರದಾತಾಸ್ವ-ಪಾದ-ಕಂಜ-ದ್ವಯ-ಭಕ್ತಿಮದ್ಭ್ಯಃ |ಅಘಾದ್ರಿ-ಸಂಭೇದನ-ದೃಷ್ಟಿ-ವಜ್ರಃಕ್ಷಮಾ-ಸುರೇಂದ್ರೋಽವತು ಮಾಂ ಸದಾಽಯಮ್ || ೩ || ಶ್ರೀ-ರಾಘವೇಂದ್ರೋ ಹರಿ-ಪಾದ-ಕಂಜ-ನಿಷೇವಣಾಲ್ಲಬ್ಧ-ಸಮಸ್ತ-ಸಂಪತ್ |ದೇವ-ಸ್ವಭಾವೋ ದಿವಿಜ-ದ್ರುಮೋಽಯ-ಮಿಷ್ಟಪ್ರದೋ ಮೇ ಸತತಂ ಸ ಭೂಯಾತ್ || ೪ ||ಭವ್ಯ-ಸ್ವರೂಪೋ ಭವ-ದುಃಖ-ತೂಲ-ಸಂಘಾಗ್ನಿ-ಚರ್ಯಃ ಸುಖ-ಧೈರ್ಯ-ಶಾಲೀ |ಸಮಸ್ತ-ದುಷ್ಟ-ಗ್ರಹ-ನಿಗ್ರಹೇಶೋದುರತ್ಯಯೋಪಪ್ಲವ-ಸಿಂಧು-ಸೇತುಃ || ೫ ||ನಿರಸ್ತ-ದೋಷೋ ನಿರವದ್ಯ-ವೇಷಃಪ್ರತ್ಯರ್ಥಿ-ಮೂಕತ್ವ-ನಿದಾನ-ಭಾಷಃ |ವಿದ್ವತ್-ಪರಿಜ್ಞೇಯ-ಮಹಾ-ವಿಶೇಷೋವಾಗ್-ವೈಖರೀ-ನಿರ್ಜಿತ-ಭವ್ಯ-ಶೇಷಃ || ೬ ||ಸಂತಾನ-ಸಂಪತ್-ಪರಿಶುದ್ಧ-ಭಕ್ತಿ-ವಿಜ್ಞಾನ-ವಾಗ್-ದೇಹ-ಸು-ಪಾಟವಾದೀನ್ |ದತ್ವಾ ಶರೀರೋತ್ಥ-ಸಮಸ್ತ-ದೋಷಾನ್ಹತ್ವಾ ಸ ನೋಽವ್ಯಾದ್ ಗುರು-ರಾಘವೇಂದ್ರಃ || ೭ ||

ಬೆಂಗಳೂರು: ನಿಮ್ಮ ಇಂದಿನ ಭವಿಷ್ಯ, ರಾಶಿ ಫಲ ಹೇಗಿದೆ ಎಂದು ತಿಳಿದುಕೊಳ್ಳಿ.ಮೇಷ: ಕುಟುಂಬದ ಬಗ್ಗೆ ಚಿಂತೆ ಇರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಕಾನೂನು ಅಡೆತಡೆಗಳು ನಿವಾರಣೆಯಾಗಲಿವೆ. ವ್ಯಾಪಾರ ಚೆನ್ನಾಗಿ ನಡೆಯುತ್ತದೆ. ಸುಸ್ತು ಇರುತ್ತದೆ. ತಂದೆಯ ಆರೋಗ್ಯ ತೃಪ್ತಿ ನೀಡಲಿದೆ. ಅಹಂಕಾರದ ಭಾವನೆಗಳು ನಿಮ್ಮ ಮನಸ್ಸಿನಲ್ಲಿ ಬರಲು ಬಿಡಬೇಡಿ. ವ್ಯಾಪಾರದಲ್ಲಿ ಹೊಸ ಯೋಜನೆಗಳಿಂದ ಲಾಭವಿದೆ. ಹಣಕಾಸಿನ ಪರಿಸ್ಥಿತಿಯು ತೃಪ್ತಿಕರವಾಗಿರುತ್ತದೆ.ವೃಷಭ: ವಿವಿಧ ಮೂಲಗಳಿಂದ ಆದಾಯವಿರುತ್ತದೆ. ಭೂಮಿ ಮತ್ತು ಕಟ್ಟಡಕ್ಕೆ ಸಂಬಂಧಿಸಿದ ಯೋಜನೆ ರೂಪಿಸಲಾಗುವುದು. ಉದ್ಯೋಗ ಸಿಗಲಿದೆ. ಕೆಲಸ ಹೆಚ್ಚಲಿದೆ. ಯಾವುದೇ ಆತುರ ಬೇಡ. ಉದ್ಯೋಗದಲ್ಲಿ ಸ್ವಯಂಪ್ರೇರಿತ ವರ್ಗಾವಣೆ ಮತ್ತು ಬಡ್ತಿಯ ಸಾಧ್ಯತೆಗಳಿವೆ.

ಆಂಧ್ರಪ್ರದೇಶ: ತೆಲುಗಿನ ಜನಪ್ರಿಯ ಗಾಯಕಿ ಕಲ್ಪನಾ ರಾಘವೇಂದ್ರ ಅವರು ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದ ನಂತರ ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹಗಳು ಹರಿದಾಡುತ್ತಿದೆ. ಖ್ಯಾತ ಗಾಯಕಿ ಆತ್ಮಹತ್ಯೆಗೆ ಯತ್ನಿಸಿದ್ದು ಎಂದು ಸುದ್ದಿ ಹರಿದಾಡಿತ್ತು.ಇದೀಗ ಕಲ್ಪನಾ ಅವರ ಮಗಳು ತಾಯಿಯ ಆತ್ಮಹತ್ಯೆ ಪ್ರಯತ್ನದ ವರದಿಗಳನ್ನು ತಳ್ಳಿಹಾಕಿದರುಮಾಧ್ಯಮದೊಂದಿಗಿನ ಸಂಭಾಷಣೆಯ ಸಮಯದಲ್ಲಿ, ಕಲ್ಪನಾ ಅವರ ಮಗಳು ತನ್ನ ತಾಯಿಯ ಆತ್ಮಹತ್ಯೆ ಪ್ರಯತ್ನದ ಹಕ್ಕುಗಳನ್ನು ನಿರಾಕರಿಸಿದರು ಮತ್ತು "ನನ್ನ ತಾಯಿಗೆ ಯಾವುದೇ ಸಮಸ್ಯೆಗಳಿಲ್ಲ. ಅವಳು ಸಂಪೂರ್ಣವಾಗಿ ಉತ್ತಮ, ಸಂತೋಷ ಮತ್ತು ಆರೋಗ್ಯಕರವಾಗಿದ್ದಾರೆ. ಆಕೆ ಗಾಯಕಿ ಅದರ ಜತೆಗೆ ಪಿಎಚ್‌ಡಿ ಮತ್ತು ಎಲ್‌ಎಲ್‌ಬಿಯನ್ನು ಸಹ ಮಾಡುತ್ತಿದ್ದಾರೆ. ಇದರಿಂದ ನಿದ್ರಾಹೀನತೆ

ಲಕ್ನೋ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧದ ಪ್ರಕರಣದ ವಿಚಾರಣೆಗೆ ಗೈರು ಹಾಜರಾಗಿದ್ದಕ್ಕಾಗಿ ಲಕ್ನೋ ಕೋರ್ಟ್‌ ಅವರಿಗೆ ₹200 ದಂಡ ವಿಧಿಸಿದೆ. 2022 ರಲ್ಲಿ ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ವಿರುದ್ಧ ಹೇಳಿಕೆಗೆ ಸಂಬಂಧ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ದೂರುದಾರರ ವಕೀಲರಿಗೆ ಹಣವನ್ನು ನೀಡುವಂತೆ ಸೂಚಿಸಿದೆ.ರಾಹುಲ್ ಸಾವರ್ಕರ್ ಅವರನ್ನು ‘ಬ್ರಿಟಿಷರ ಸೇವಕ’ ಎಂದು ಕರೆದಿದ್ದಾರೆ ಎಂದು ದೂರುದಾರ ನೃಪೇಂದ್ರ ಪಾಂಡೆ ಪರ ವಕೀಲರು ಹೇಳಿದ್ದಾರೆ. ರಾಹುಲ್ ಪತ್ರಿಕಾಗೋಷ್ಠಿಗೂ ಮುನ್ನ ಸಾವರ್ಕರ್ ಅವರನ್ನು ಕೀಳಾಗಿ ಹೇಳುವ ಕರಪತ್ರಗಳನ್ನು ಹಂಚಲಾಗಿತ್ತು ಎಂದು ಅವರು ಹೇಳಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಬೆಂಗಳೂರು ಚಿತ್ರೋತ್ಸವಕ್ಕೆ ಗೈರಾದ ಸ್ಟಾರ್ ಕಲಾವಿದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಮುಂದೆ ಏನೇ ಕೆಲಸವಾಗಬೇಕಿದ್ರೂ ನಮ್ಮ ಬಳಿಗೆ ಬರಬೇಕಲ್ಲ. ಆಗ ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂದು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ನಿರ್ದೇಶಕ ತರುಣ್ ಸುಧೀರ್ ಚಿತ್ರತಂಡದ ಮೇಲೆ ಅರಣ್ಯ ಅಧಿಕಾರಿಗಳಿಂದ ದಾಳಿ ನಡೆಸಿದ್ದು, ಇದು ನಟ್ಟು ಬೋಲ್ಟ್ ಹೇಳಿಕೆಯ ಪರಿಣಾಮವೇ ಎಂದು ಅನುಮಾನ ಮೂಡಿದೆ. ನಿರ್ದೇಶಕ ತರುಣ್ ಸುಧೀರ್ ಈಗ ಹೊಸಬರ ತಂಡ ಕಟ್ಟಿಕೊಂಡು ಸಿನಿಮಾವೊಂದರ ಚಿತ್ರೀಕರಣ ನಡೆಸುತ್ತಿದ್ದಾರೆ. ರಕ್ಷಿತಾ ಪ್ರೇಮ್ ಸಹೋದರ ರಾಣಾ ಈ ಸಿನಿಮಾದ ನಾಯಕ. ಇದೀಗ ಸಿನಿಮಾ ಚಿತ್ರೀಕರಣ ಮಾಡುತ್ತಿದ್ದಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ.

ನವದೆಹಲಿ: ಮಂಗಳವಾರ ರಾತ್ರಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಫಿಟ್‌ನೆಸ್ ಕುರಿತು ತಮ್ಮ ಕಾಮೆಂಟ್‌ಗಳ ನಂತರ ರಾಜಕೀಯ ಗದ್ದಲ ಎಬ್ಬಿಸಿರುವ ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ ಅವರು ಪುರುಷರ ರಾಷ್ಟ್ರೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯವನ್ನು ಗೆದ್ದಿರುವುದಕ್ಕೆ ಇಂದು ನನಗೆ ತುಂಬಾ ಸಂತೋಷವಾಗಿದೆ. 84 ರನ್ ಗಳಿಸಿದ್ದಕ್ಕಾಗಿ ನಾನು ವಿರಾಟ್ ಕೊಹ್ಲಿಯನ್ನು ಅಭಿನಂದಿಸುತ್ತೇನೆ. ನಾನು ತುಂಬಾ ಉತ್ಸುಕನಾಗಿದ್ದೇನೆ ಮತ್ತು ಫೈನಲ್‌ಗಾಗಿ ಎದುರು ನೋಡುತ್ತಿದ್ದೇನೆ ಎಂದು ಮೊಹಮ್ಮದ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.ಕಾಂಗ್ರೆಸ್ ವಕ್ತಾರರು ವಿರಾಟ್ ಕೊಹ್ಲಿ ಅವರ ಪ್ರದರ್ಶನವನ್ನು ಉಲ್ಲೇಖಿಸಿ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ

ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಉಳ್ಳವರು ಸ್ವ ಇಚ್ಛೆಯಿಂದ ಬಿಟ್ಟುಕೊಡಲಿ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣಗೆ ನೆಟ್ಟಿಗರು ನೀವು ಸರ್ಕಾರೀ ಸವಲತ್ತುಗಳನ್ನು ಬಿಡ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳು ಇತ್ತೀಚೆಗೆ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸುತ್ತಿದೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಹಾಗಿದ್ದರೂ ಕೊಟ್ಟ ಮಾತಿನಂತೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡೇ ಹೋಗಬೇಕಾದ ಅನಿವಾರ್ಯತೆ ಸರ್ಕಾರದ್ದಾಗಿದೆ. ಈ ನಡುವೆ ಕೆಲವು ಶ್ರೀಮಂತರೂ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿ ಯೋಜನೆ ಲಾಭ ಪಡೆದುಕೊಳ್ಳುತ್ತಿರುವುದರ ಬಗ್ಗೆ ಎಚ್.ಎಂ. ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದು, ಉಳ್ಳವರು ಗ್ಯಾರಂಟಿಯನ್ನು ತಾವಾಗಿಯೇ ಬಿಟ್ಟುಕೊಡಲಿ ಎಂದಿದ್ದಾರೆ.

ಲಾಹೋರ್‌: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಎರಡನೇ ಸೆಮಿಫೈನಲ್‌ನಲ್ಲಿ ಇಂದು ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಲಿವೆ.ಟಾಸ್‌ ಗೆದ್ದ ನ್ಯೂಜಿಲೆಂಡ್‌ ನಾಯಕ ಮಿಚೆಲ್‌ ಸ್ಯಾಂಟನರ್‌ ಬ್ಯಾಟಿಂಗ್‌ ಆಯ್ದುಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ತಂಡವು ಮೊದಲು ಫೀಲ್ಡಿಂಗ್‌ಗೆ ಇಳಿಯಲಿದೆ. ಈ ಬಾರಿಯಾದರೂ ದಕ್ಷಿಣ ಆಫ್ರಿಕಾ ತಂಡವು ಚೋಕರ್‌ ಹಣೆಪಟ್ಟಿಯನ್ನು ಕಳೆದುಕೊಳ್ಳುತ್ತಾ ಎಂಬ ಪ್ರಶ್ನೆ ಮತ್ತೆ ಮೂಡಿದೆ.ಈ ಪಂದ್ಯವನ್ನು ಗೆಲ್ಲುವ ತಂಡವು ಭಾನುವಾರ ದುಬೈನಲ್ಲಿ ನಡೆಯುವ ಫೈನಲ್‌ನಲ್ಲಿ ಭಾರತ ತಂಡವನ್ನು ಎದುರಿಸಲಿದೆ. ಮಂಗಳವಾರ ನಡೆದ ಮೊದಲ ಸೆಮಿಫೈನಲ್‌ನಲ್ಲಿ ಭಾರತ ತಂಡವು 4 ವಿಕೆಟ್‌ಗಳಿಂದ ಆಸ್ಟ್ರೇಲಿಯಾ ತಂಡವನ್ನು ಫೈನಲ್‌ ಪ್ರವೇಶಿಸಿದೆ.

ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಕಾಯಕ ಸಮುದಾಯಗಳಿಗೆ ಆರ್ಥಿಕ ಶಕ್ತಿ ಕೊಟ್ಟು ಅವರನ್ನು ಮುಂದಕ್ಕೆ ತರುವ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸ್ಲಿಮರನ್ನು ಓಲೈಸಲು ಹೊರಟ ಕಾಂಗ್ರೆಸ್ ಸರಕಾರವು, ಇತರರೆಲ್ಲರಿಗೂ ಅನ್ಯಾಯ ಮಾಡಲು ಹೊರಟಿದೆ ಎಂದು ಆಕ್ಷೇಪಿಸಿದರು. ಸಿದ್ದರಾಮಯ್ಯನವರು ನಿಜವಾಗಿಯೂ ಅಹಿಂದ ನಾಯಕರೇ ಆಗಿದ್ದರೆ ಇಷ್ಟೊತ್ತಿಗೆ ಅನೇಕ ಹಿಂದುಳಿದ ಸಮಾಜಗಳಿಗೆ ಆರ್ಥಿಕ ಶಕ್ತಿ ತುಂಬಬೇಕಿತ್ತು. ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ನೀವು ಕೈ ಜೋಡಿಸಬೇಕಿತ್ತು ಎಂದು ತಿಳಿಸಿದರು. ಮಡಿವಾಳರು, ಸವಿತಾ ಸಮಾಜ ಸೇರಿ ಅನೇಕ ಕಾಯಕ ಸಮುದಾಯಗಳು ನಾಡಿನಲ್ಲಿವೆ ಎಂದರು.