ರಸ್ತೆಯಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಬಿದ್ದಿರುವ ಹಣ ಅಥವಾ ವಸ್ತುಗಳನ್ನು ಕಂಡರೆ ಯಾರಿಗೆ ತಾನೇ ಆಸೆ ಇರುವುದಿಲ್ಲ? ಆದರೆ, ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಒಂದು ಘಟನೆಯು ಎಚ್ಚರಿಕೆಯ ಗಂಟೆ ಬಾರಿಸಿದೆ. ರಸ್ತೆಯಲ್ಲಿ ಬಿದ್ದ ಹಣವನ್ನು ಮುಟ್ಟುವ ಮುನ್ನ ಅಥವಾ ಎತ್ತುವ ಮುನ್ನ ಕನಿಷ್ಠ ಎರಡು ಬಾರಿ ಯೋಚಿಸಬೇಕು ಎಂಬುದನ್ನು ಈ ವಿಡಿಯೋ ಸಾಬೀತುಪಡಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊದ ಪ್ರಕಾರ, ವ್ಯಕ್ತಿಯೊಬ್ಬ ತನ್ನ ಬೈಕ್ ಪಕ್ಕ ನಿಂತಿದ್ದಾಗ ಆತನ ಸಮೀಪದಲ್ಲೇ ಯುವತಿಯೊಬ್ಬಳು ಅತಿ ಕಣ್ಣಿಗೆ ರಾಚುವಂತೆ ಹಣವನ್ನು ಕೆಳಗೆ ಬೀಳಿಸುತ್ತಾಳೆ.
ಇಂದಿನ ಡಿಜಿಟಲ್ ಯುಗದಲ್ಲಿ ಸ್ಮಾರ್ಟ್ಫೋನ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಸೋಷಿಯಲ್ ಮೀಡಿಯಾ ರೀಲ್ಸ್ ಸ್ಕ್ರೋಲ್ ಮಾಡುವುದು, ವಿಡಿಯೋ ನೋಡುವುದು ಅಥವಾ ಗೇಮ್ಸ್ ಆಡುವುದು ನಮಗೆ ಅಭ್ಯಾಸವಾಗಿಬಿಟ್ಟಿದೆ. ಆದರೆ, ಯಾವುದೇ ವಿರಾಮವಿಲ್ಲದೆ ನಿರಂತರವಾಗಿ ಮೊಬೈಲ್ ಪರದೆಯನ್ನು ನೋಡುವುದು ನಮ್ಮ ಕಣ್ಣು ಮತ್ತು ಒಟ್ಟಾರೆ ಆರೋಗ್ಯದ ಮೇಲೆ ಎಷ್ಟು ಭೀಕರ ಪರಿಣಾಮ ಬೀರುತ್ತದೆ ಎಂಬುದು ನಿಮಗೆ ಗೊತ್ತೇ? ಹಾಗಾದರೆ, ವೈದ್ಯಕೀಯ ವಿಜ್ಞಾನದ ಪ್ರಕಾರ ನಿರಂತರವಾಗಿ ಎಷ್ಟು ನಿಮಿಷ ಮೊಬೈಲ್ ನೋಡಬಹುದು ಮತ್ತು ಅದರಿಂದಾಗುವ ಅಡ್ಡಪರಿಣಾಮಗಳೇನು ಎಂಬುದನ್ನು ಇಲ್ಲಿ ತಿಳಿಯೋಣ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ಕೆಲವು ದಿನಗಳಿಂದ ಚಿನ್ನದ ದರ ಇಳಿಕೆಯಾಗುತ್ತಲೇ ಇತ್ತು. ಆದರೆ ಇಂದು ಮತ್ತೆ ಚಿನ್ನದ ದರದಲ್ಲಿ ವ್ಯತ್ಯಾಸ ಕಂಡುಬಂದಿದೆ. ಪರಿಶುದ್ಧ ಚಿನ್ನದ ದರಲ್ಲಿ ಮೊನ್ನೆ ಕೊಂಚ ಇಳಿಕೆಯಾಗಿತ್ತು. ಇಂದು ಚಿನ್ನದ ದರ ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳು ಭಾರತದಲ್ಲೂ ಚಿನ್ನದ ಬೆಲೆ ಮೇಲೆ ಪರಿಣಾಮ ಬೀರುತ್ತಲೇ ಇರುತ್ತವೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದ್ದು 1,48,180 ರೂ.ಗಳಾಗಿವೆ.
ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಸೋರಿಕೆ ಖಂಡಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಮುಂಚೂಣಿ ನಾಯಕ ಹಾಗೂ ಕಾಕ್ರೋಚ್ ಜನತಾ ಪಕ್ಷದ ಪ್ರಮುಖರಾದ ಅಭಿಜೀತ್ ದೀಪ್ಕೆ ಅವರಿಗೆ ಟೈಫಾಯಿಡ್ ಜ್ವರ ದೃಢಪಟ್ಟಿದೆ. ಆದಾಗ್ಯೂ, "ತಮ್ಮ ಆರೋಗ್ಯ ಏನೇ ಆದರೂ ವಿದ್ಯಾರ್ಥಿಗಳ ಹಕ್ಕಿಗಾಗಿ ನಡೆಯುತ್ತಿರುವ ಈ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ" ಎಂದು ಅವರು ದೆಹಲಿಯಿಂದ ಸ್ಪಷ್ಟ ಸಂದೇಶ ನೀಡಿದ್ದಾರೆ. ಸತತ ಹಲವು ದಿನಗಳಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿ ನಡೆಸುತ್ತಿರುವ ಕಾರಣ, ಕಲುಷಿತ ನೀರು ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಅವರ ಆರೋಗ್ಯ ಏರುಪೇರಾಗಿತ್ತು. ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ಅವರಿಗೆ ಟೈಫಾಯಿಡ್ ಇರುವುದು ದೃಢಪಟ್ಟಿದೆ.
ದೇಶಾದ್ಯಂತ ತೀವ್ರ ಬಿರುಗಾಳಿ ಎಬ್ಬಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಸೋರಿಕೆ ವಿವಾದದ ಕುರಿತು ದಕ್ಷಿಣ ಭಾರತದ ಖ್ಯಾತ ನಟಿ ಜ್ಯೋತಿಕಾ ಅವರು ಗಂಭೀರವಾಗಿ ಸ್ಪಂದಿಸಿದ್ದಾರೆ. ದೆಹಲಿಯ ಜಂತರ್ ಮಂತರ್ನಲ್ಲಿ ಜಿಎನ್ಝಿ ಯುವಜನರು ಮತ್ತು ವಿದ್ಯಾರ್ಥಿಗಳು ನಡೆಸುತ್ತಿರುವ ಸುದೀರ್ಘ ಹೋರಾಟಕ್ಕೆ ಬಹಿರಂಗ ಐಕ್ಯದಾರ್ಢ್ಯ ಪ್ರಕಟಿಸಿರುವ ಅವರು, "ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು" ಎಂದು ಖಾರವಾಗಿ ಆಗ್ರಹಿಸಿದ್ದಾರೆ.ಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ನಲ್ಲಿ ಈ ಕುರಿತು ಭಾವನಾತ್ಮಕ ಹಾಗೂ ಖಡಕ್ ಸಂದೇಶವೊಂದನ್ನು ಹಂಚಿಕೊಂಡಿರುವ ಜ್ಯೋತಿಕಾ, ವಿದ್ಯಾರ್ಥಿಗಳ ಸತತ ಶ್ರಮ ಮತ್ತು ಅವರ ಭವಿಷ್ಯದ ಜೊತೆ ಚೆಲ್ಲಾಟವಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
ಚೀನಾದ ವಿಮಾನ ನಿಲ್ದಾಣವೊಂದರಲ್ಲಿ ನಡೆದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಮಾನ ನಿಲ್ದಾಣದ ಮಹಿಳಾ ಪ್ರಯಾಣಿಕರೊಬ್ಬರು ಅಲ್ಲಿದ್ದ ಸಿಬ್ಬಂದಿಯೊಬ್ಬರ ಮೇಲೆ ಹಿಂಸಾತ್ಮಕವಾಗಿ ನಿರಂತರವಾಗಿ ಹಲ್ಲೆ ನಡೆಸಿದ್ದು, ಸುತ್ತಲೂ ಇದ್ದ ಜನರು ಮೌನ ಪ್ರೇಕ್ಷಕರಾಗಿ ನೋಡುತ್ತಿದ್ದ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ. ಕೊನೆಗೆ ಸಹನೆಯ ಗಡಿ ದಾಟಿದಾಗ, ಆ ಸಿಬ್ಬಂದಿ ತಮ್ಮ ಆತ್ಮರಕ್ಷಣೆಗಾಗಿ ತಿರುಗಿ ಪೆಟ್ಟು ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ವರದಿಗಳ ಪ್ರಕಾರ, ವಿಮಾನ ವಿಳಂಬ ಅಥವಾ ತಾಂತ್ರಿಕ ಕಾರಣಗಳ ಕುರಿತು ಗೊಂದಲ ಏರ್ಪಟ್ಟಾಗ ಕೋಪಗೊಂಡ ಮಹಿಳಾ ಪ್ರಯಾಣಿಕರೊಬ್ಬರು ವಿಮಾನ ನಿಲ್ದಾಣದ ಗ್ರೌಂಡ್ ಸಿಬ್ಬಂದಿಯ ಬಳಿ ತೆರಳಿ ಗಲಾಟೆ ಆರಂಭಿಸಿದ್ದಾರೆ.
ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಕಾಮುಕನಿಗೆ ಯುವತಿಯ ಧೈರ್ಯ ಹಾಗೂ ಬಸ್ ಚಾಲಕನ ತಕ್ಷಣದ ಸಮಯಪ್ರಜ್ಞೆಯಿಂದ ತಕ್ಕ ಶಾಸ್ತಿಯಾಗಿದೆ. ಮೌನವಾಗಿರಲು ನಿರಾಕರಿಸಿ ಗಟ್ಟಿಯಾಗಿ ಧ್ವನಿ ಎತ್ತಿದ ಯುವತಿಯ ಧೈರ್ಯ ಮತ್ತು ಆಕೆಗೆ ಬೆಂಬಲವಾಗಿ ನಿಂತು ಕಾಮುಕನಿಗೆ 'ಫ್ಲೈಯಿಂಗ್ ಕಿಕ್' ನೀಡಿದ ಬಿಎಂಟಿಸಿ ಚಾಲಕ ಪ್ರವೀಣ್ ಅವರ ಸಾಹಸಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸನ್ನಿವೇಶವು 500D ಮಾರ್ಗದ ಬಿಎಂಟಿಸಿ ಬಸ್ನಲ್ಲಿ ಹೆಬ್ಬಾಳದಿಂದ ಮಾನ್ಯತಾ ಟೆಕ್ ಪಾರ್ಕ್ ಕಡೆಗೆ ಚಲಿಸುತ್ತಿದ್ದಾಗ ನಡೆದಿದೆ.
ನವದೆಹಲಿ: ನೀಟ್ ಸೇರಿದಂತೆ ದೇಶದ ವಿವಿಧ ಪರೀಕ್ಷಾ ಅಕ್ರಮ ಹಾಗೂ ಪೇಪರ್ ಸೋರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದ ರಾಜಕೀಯ ವಿಶ್ಲೇಷಕ ಮತ್ತು ಸೋಷಿಯಲ್ ಮೀಡಿಯಾ ಆಕ್ಟಿವಿಸ್ಟ್ ಅಭಿಜೀತ್ ದೀಪ್ಕೆ ಅವರಿಗೆ ಮಾಧ್ಯಮದವರು ಕೇಳಿದ ಒಂದು ನೇರ ಪ್ರಶ್ನೆ ಕ್ಷಣಕಾಲ ತಡವರಿಸಿದ ಘಟನೆ ನಡೆದಿದೆ. ಪ್ರಶ್ನೋತ್ತರ ಹಾಗೂ ಚರ್ಚೆಯ ವೇಳೆ ಪತ್ರಕರ್ತರೊಬ್ಬರು ಎಸೆದ ಪ್ರಶ್ನೆಗೆ ಏನು ಉತ್ತರಿಸಬೇಕೆಂದು ತಿಳಿಯದೇ ಅಭಿಜೀತ್ ದೀಪ್ಕೆ ಕೆಲ ಕ್ಷಣ ತಬ್ಬಿಬ್ಬಾದರು. ಪರೀಕ್ಷಾ ಅಕ್ರಮಗಳು ಮತ್ತು ಪೇಪರ್ ಸೋರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವರು ಮತ್ತು ಸರ್ಕಾರದ ಪ್ರಮುಖರ ರಾಜೀನಾಮೆಗೆ ಅಭಿಜೀತ್ ದೀಪ್ಕೆ ಗಟ್ಟಿಯಾಗಿ ಆಗ್ರಹಿಸುತ್ತಿದ್ದರು.
ಆನ್ಲೈನ್ ಪ್ರೀತಿ ಮತ್ತು ಸಾಮಾಜಿಕ ಜಾಲತಾಣಗಳ ಭ್ರಮಲೋಕದಲ್ಲಿ ಭಾವನೆಗಳಿಗಿಂತ ವಸ್ತುವಿನ ಬೆಲೆ ಹಾಗೂ ಪ್ರದರ್ಶನಕ್ಕೇ ಹೆಚ್ಚು ಬೆಲೆ ಸಿಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿ ಹೃದಯ ವಿದ್ರಾವಕ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ತನ್ನ ತಂದೆಯ ಔಷಧಿಗಾಗಿ ಇಟ್ಟಿದ್ದ ಸಣ್ಣ ಪ್ರಮಾಣದ ಹಣವನ್ನು ಕಷ್ಟಪಟ್ಟು ಉಳಿಸಿ, ಆನ್ಲೈನ್ ಪ್ರಿಯತಮೆಗೆ ಹುಟ್ಟುಹಬ್ಬದ ಉಡುಗೊರೆಯಾಗಿ ಕೈಗಡಿಯಾರ ತಂದಿದ್ದ ಯುವಕನೊಬ್ಬನಿಗೆ ಆಕೆ ನೀಡಿದ ಆಘಾತಕಾರಿ ಪ್ರತಿಕ್ರಿಯೆ ಸಮಾಜಕ್ಕೆ ಕಟು ವಾಸ್ತವದ ಮುಖವನ್ನು ಪರಿಚಯಿಸಿದೆ.ಸಾಮಾನ್ಯ ಕುಟುಂಬದ ಯುವಕನೊಬ್ಬ ತಾನು ಇಷ್ಟಪಟ್ಟ ಆನ್ಲೈನ್ ಸ್ನೇಹಿತೆಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಲು ಆಸೆಪಟ್ಟಿದ್ದ. ಆದರೆ, ಆತನ ಬಳಿ ಹೆಚ್ಚು ಹಣವಿರಲಿಲ್ಲ.
ನವದೆಹಲಿ: ಇಂದಿನ ಜೆನ್ ಜಿ ಯುವಕರ ಗಮನ ಸೆಳೆಯಲು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಪ್ರಧಾನಿ ಮೋದಿ ಕ್ರೇಜಿ ಐಡಿಯಾ ಕೊಟ್ಟಿದ್ದಾರೆ. ನೀಟ್ ವಿಚಾರಕ್ಕೆ ಜೆನ್ ಜಿ ಯುವಕರು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಮೋದಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಯುವ ಜನಾಂಗದ ಆಕ್ರೋಶಕ್ಕೆ ಗುರಿಯಾಗಿರುವ ಮೋದಿ ಸರ್ಕಾರ ಈಗ ಅವರ ಮನವೊಲಿಸಲು ಅವರದೇ ತಂತ್ರದ ಮೊರೆ ಹೋಗಿದ್ದಾರೆ. ಇಂದಿನ ಯುವ ಜನಾಂಗ ಸೋಷಿಯಲ್ ಮೀಡಿಯಾ, ರೀಲ್ಸ್ ಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಆಕ್ಟಿವ್ ಆಗಿರುವಂತೆ ಪ್ರಧಾನಿ ಮೋದಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸಲಹೆ ನೀಡಿದ್ದಾರೆ.
ದೆಹಲಿಯ ಜನಕ್ಪುರಿ ವೆಸ್ಟ್ ಮೆಟ್ರೋ ರೈಲಿನಲ್ಲಿ ನಡೆದ ಸಣ್ಣ ಘಟನೆಯೊಂದು ಇಂದು ಇಡೀ ಸಮಾಜವು ಗಂಭೀರವಾಗಿ ಆಲೋಚಿಸುವಂತೆ ಮಾಡಿದೆ. ಮೆಟ್ರೋ ರೈಲಿನಲ್ಲಿ ಪುರುಷ ಪ್ರಯಾಣಿಕನೊಬ್ಬ ತನ್ನ ಸಾಮಾನ್ಯ ಸೀಟಿನಲ್ಲಿ ಕುಳಿತಿದ್ದಾಗ, ಆತನಿಂದ ಸೀಟು ಪಡೆಯಲು ಸಾಧ್ಯವಾಗದ ಮಹಿಳೆಯೊಬ್ಬಳು ಎಲ್ಲರ ಎದುರಲ್ಲೇ ಆತನನ್ನು ಹೀನಾಯವಾಗಿ ನಿಂದಿಸಿದ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ಸಮಾಜದಲ್ಲಿ ಪುರುಷರು ಎದುರಿಸುತ್ತಿರುವ ಮಾನಸಿಕ ಒತ್ತಡ, ಅವರ ಆತ್ಮಗೌರವ ಹಾಗೂ ಬದಲಾಗಬೇಕಾದ ಜನರ ಮಾನಸಿಕತೆಯನ್ನು ಎತ್ತಿ ತೋರಿಸುತ್ತಿದೆ.
ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಮಾರುತಗಳು ಸಕ್ರಿಯವಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಇಂದು ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದ್ದು, ಒಳನಾಡು ಜಿಲ್ಲೆಗಳಲ್ಲಿಯೂ ಮೋಡಕವಿದ ವಾತಾವರಣದೊಂದಿಗೆ ಮಳೆಯಾಗಲಿದೆ. ಕರಾವಳಿ ಕರ್ನಾಟಕಜಿಲ್ಲೆಗಳು: ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ. ಕರಾವಳಿ ಭಾಗದಲ್ಲಿ ಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಸಮುದ್ರದಲ್ಲಿ ಅಲೆಗಳ ಸೃಷ್ಟಿ ಹೆಚ್ಚಿರಲಿದ್ದು, ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ಸೂರ್ಯಾಷ್ಟಕಂ ಸ್ತೋತ್ರ ಎಂಬುದು ಸೂರ್ಯ ದೇವನನ್ನು ಪ್ರಸನ್ನಗೊಳಿಸಲು ಮತ್ತು ಆತನ ಕೃಪೆಗೆ ಪಾತ್ರರಾಗಲು ಪಠಿಸುವ ಅತ್ಯಂತ ಶಕ್ತಿಶಾಲಿ ಹಾಗೂ ಪವಿತ್ರವಾದ ಸ್ತೋತ್ರವಾಗಿದೆ ಶಾಂಬ ಉವಾಚಆದಿದೇವ ನಮಸ್ತುಭ್ಯಂ ಪ್ರಸೀದ ಮಮ ಭಾಸ್ಕರ ।ದಿವಾಕರ ನಮಸ್ತುಭ್ಯಂ ಪ್ರಭಾಕರ ನಮೋಽಸ್ತುತೇ ॥ 1 ॥ ಸಪ್ತಾಶ್ವ ರಥ ಮಾರೂಢಂ ಪ್ರಚಂಡಂ ಕಶ್ಯಪಾತ್ಮಜಮ್ ।ಶ್ವೇತ ಪದ್ಮಧರಂ ದೇವಂ ತಂ ಸೂರ್ಯಂ ಪ್ರಣಮಾಮ್ಯಹಮ್ ॥ 2॥ ಲೋಹಿತಂ ರಥಮಾರೂಢಂ ಸರ್ವ ಲೋಕ ಪಿತಾಮಹಮ್ ।ಮಹಾ ಪಾಪ ಹರಂ ದೇವಂ ತಂ ಸೂರ್ಯಂ ಪ್ರಣಮಾಮ್ಯಹಮ್ ॥ 3॥
ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಂತೆ ಶುಕ್ರವಾರ ರಾತ್ರಿ ಹಂಚಿಕೊಂಡ ವಿಡಿಯೋಗೆ ವಿದ್ಯಾರ್ಥಿಗಳು ನೀಡಿದ ಪ್ರತಿಕ್ರಿಯೆಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಸಲ್ಲಿಸಿದ್ದಾರೆ. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಹೊಸ ವಿಡಿಯೋ ಸಂದೇಶವೊಂದನ್ನು ಬಿಡುಗಡೆ ಮಾಡಿದರು. "ನಿನ್ನೆ ರಾತ್ರಿ ನಿಮ್ಮೊಂದಿಗೆ ಸಂಪರ್ಕ ಸಾಧಿಸುವ ಅವಕಾಶ ನನಗೆ ಸಿಕ್ಕಿತು. ನನ್ನ ಹಿಂದಿನ ವಿಡಿಯೋಗೆ ನೀವು ರಚನಾತ್ಮಕ ಸಲಹೆಗಳೊಂದಿಗೆ ನೀಡಿದ ಪ್ರತಿಕ್ರಿಯೆಗೆ ಧನ್ಯವಾದಗಳು," ಎಂದು ಮೋದಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು.
ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಇದರಡಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಸ್ತಾಪಿಸಲಾಗಿದೆ.ಮೂಲಗಳ ಪ್ರಕಾರ, ಪ್ರಸ್ತಾವಿತ ಕಾನೂನು ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 10 ಕೋಟಿ ರೂಪಾಯಿವರೆಗಿನ ದಂಡದ ಅವಕಾಶವನ್ನು ಕಲ್ಪಿಸುತ್ತದೆ. ಅಲ್ಲದೆ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾದವರಿಗೆ ವಿಧಿಸುವ ಕನಿಷ್ಠ ಜೈಲು ಶಿಕ್ಷೆಯನ್ನು ಪ್ರಸ್ತುತ
ನವದೆಹಲಿ: ಭವಿಷ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳನ್ನು ತಡೆಯಲು ಮತ್ತು ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಪ್ರಯತ್ನದ ಭಾಗವಾಗಿ, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಅಲ್ಲದೆ, ಇವರಲ್ಲಿ ಕೆಲವರ ವಿರುದ್ಧ ಕಾನೂನು ಮತ್ತು ಕ್ರಿಮಿನಲ್ ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ಮೂಲಗಳು ಹೇಳಿವೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದಾಗಿ ವಿವಾದಕ್ಕೀಡಾಗಿರುವ NTAಯನ್ನು ಸಂಪೂರ್ಣವಾಗಿ ಪುನರ್ವ್ಯವಸ್ಥಿತಗೊಳಿಸುವ
ನವದೆಹಲಿ: ಹಾಲಿ ಚಾಂಪಿಯನ್ ಭಾರತದ ಪುರುಷರ ಮತ್ತು ಮಹಿಳೆಯರ ತಂಡಗಳಿಗೆ ಅದೃಷ್ಟ ಖುಲಾಯಿಸಿದೆ. ಏಷ್ಯನ್ ಗೇಮ್ಸ್ ಕ್ರಿಕೆಟ್ ಸ್ಪರ್ಧೆಗಳಲ್ಲಿ ನೇರವಾಗಿ ಕ್ವಾರ್ಟರ್ಫೈನಲ್ಗೆ ಪ್ರವೇಶ ನೀಡಲಾಗಿದೆ. ಪುರುಷರ ವಿಭಾಗದ ಕ್ರಿಕೆಟ್ ಸ್ಪರ್ಧೆಗಳು ಸೆಪ್ಟೆಂಬರ್ 24ರಂದು ಆರಂಭವಾಗಲಿದ್ದು, ಅಕ್ಟೋಬರ್ 1ರಂದು ಕೊನೆಗೊಳ್ಳಲಿದೆ. ಪುರುಷರ ತಂಡಕ್ಕೆ ಸೆಮಿಫೈನಲ್ನಲ್ಲಿ ಪಾಕಿಸ್ತಾನ ಸಂಭವನೀಯ ಎದುರಾಳಿಯಾಗಬಹುದು.ಪುರುಷರ ವಿಭಾಗದಲ್ಲಿ ಭಾರತದ ಎದುರಾಳಿ ಯಾರೆಂಬುದು ಪೂರ್ವಭಾವಿ ಹಂತದ ನಂತರ ನಿರ್ಧಾರವಾಗಲಿದೆ. ಭಾರತ
ದೆಹಲಿಯ ಜಂತರ್ ಮಂತರ್ನಲ್ಲಿ ನೀಟ್ ಪರೀಕ್ಷೆ ಅಕ್ರಮಗಳನ್ನು ವಿರೋಧಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಿ ಹಲ್ಲೆ ನಡೆಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಲು ನಿಜವಾದ ಕಾರಣ ಏನೆಂಬುದಕ್ಕೆ ವಿಡಿಯೋವೊಂದು ಹರಿದಾಡುತ್ತಿದೆ. ಪಾರ್ಲಿಮೆಂಟ್ಗೆ ಒಳನುಗ್ಗಲು ಯತ್ನಿಸಿದ ವಿದ್ಯಾರ್ಥಿಗಳನ್ನು ತಡೆಯಲು ಹೋದ ಪೊಲೀಸರನ್ನು ಲೆಕ್ಕಿಸದೆ ಬ್ಯಾರಿಕೇಡ್ ಹಾರಿದ್ದಾರೆ. ಪೊಲೀಸರು ತಡೆಯಲು ಯತ್ನಿಸಿದರು ಪ್ರಯಜನವಾಗಲಿಲ್ಲ. ಈ ಸಂದರ್ಭದಲ್ಲಿ ಪೊಲೀಸರು ಲಾಠಿಯನ್ನು
ಚಂಬಾ: ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿ ಜಿಲ್ಲೆಯಲ್ಲಿ ಟ್ಯಾಕ್ಸಿ ಮೇಲೆ ಬೃಹತ್ ಬಂಡೆಗಳು ಬಿದ್ದ ಪರಿಣಾಮ ಕನಿಷ್ಠ 13 ಮಂದಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.ಕುಲ್ಲುದಿಂದ ಪಂಗಿಗೆ ತೆರಳುತ್ತಿದ್ದ ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆಗಳು ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅವಶೇಷಗಳ ರಾಶಿಯಡಿ ಸಿಲುಕಿ ಜಜ್ಜಿದ ಸ್ಥಿತಿಯಲ್ಲಿದ್ದ ಕಾರಿನ ದೃಶ್ಯಗಳು ಕಂಡುಬಂದವು. ಚಾಲಕನನ್ನು ಬಿರ್ ಸಿಂಗ್ ಎಂದು ಗುರುತಿಸಲಾಗಿದೆ.
ಕಳೆದ ವರ್ಷ ಲಂಡನ್ನ ಪ್ರತಿಷ್ಠಿತ ಹೋಟೆಲ್ವೊಂದರ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಅರೇಬಿಯಾದ ಯುವ ರಾಜಕುಮಾರನ ಸಾವಿಗೆ ಕಾರಣ ಏನೆಂಬುದು ಇದೀಗ ಹೊರಬಿದ್ದಿದೆ. ರಾಜಕುಮಾರನ ಸಾವು ಪ್ರಕರಣ ಭಾರೀ ಚರ್ಚೆಯನ್ನು ಹುಟ್ಟುಹಾಕಿತ್ತು. ಈಗ ತನಿಖೆ ಪೂರ್ಣಗೊಂಡಿದ್ದು, ಅಲ್ಲಿ ನಿಖರವಾಗಿ ಏನಾಯಿತು ಎಂಬುದು ತಿಳಿದುಬಂದಿದೆ. ಸೌದಿ ಅರೇಬಿಯಾದ ರಾಜಮನೆತನದ ಸದಸ್ಯರಾಗಿದ್ದ, ಕೇವಲ 29 ವರ್ಷ ವಯಸ್ಸಿನ ರಾಜಕುಮಾರ ಅಬ್ದುಲ್ಲಾ ಬಿನ್ ಫಹಾದ್
ತಮಿಳು ಸಿಎಂ ವಿಜಯ್ ಅವರು ದೊಡ್ಡ ಪರದೆ ಮೇಲೆ ಕಾಣಿಸುತ್ತಿರುವ ಕೊನೆಯ ಸಿನಿಮಾವಾದ 'ಜನ ನಾಯಕನ್' ಬಾಕ್ಸ್ ಆಫೀಸ್ನಲ್ಲಿ ಉತ್ತಮ ಆರಂಭದೊಂದಿಗೆ ಪ್ರದರ್ಶನಕಾಣುತ್ತಿದೆ. ವಿಜಯ್ ಅವರ ಕೊನೆಯ ಚಿತ್ರವಾದ 'ಜನ ನಾಯಕನ್', ಜುಲೈ 23 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆಯನ್ನು ಪಡೆಯಿತು. ಆದಾಗ್ಯೂ, ಬಾಕ್ಸ್ ಆಫೀಸ್ನಲ್ಲಿ ಈ ಚಿತ್ರವು ಭರವಸೆಯ ಆರಂಭವನ್ನು ಕಂಡಿದೆ.ವ್ಯಾಪಾರ ವಿಶ್ಲೇಷಣಾ ಸಂಸ್ಥೆ 'ಸ್ಯಾಕ್ನಿಲ್ಕ್' (Sacnilk) ಪ್ರಕಾರ, 'ಜನ ನಾಯಕನ್' ಮೊದಲ ದಿನವೇ ಬಲವಾದ ಆರಂಭವನ್ನು
ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂತರ್ ಮಂತರ್ ಮತ್ತು ದೇಶದ ಇತರ ಕಡೆಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂದು ಆರೋಪಿಸುವ ಅರ್ಜಿಗಳ ವಿಚಾರಣೆಯನ್ನು ಜುಲೈ 27 ರಂದು ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ಸೂಚಿಸಿತು. ಪ್ರತಿಭಟನಾಕಾರರ ವಿರುದ್ಧದ ಹಿಂಸಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠದ ಮುಂದೆ ವಿಷಯವನ್ನು ಪ್ರಸ್ತಾಪಿಸಿದರು.
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಬಿಗ್ ಶಾಕ್ ಒಂದು ಕಾದಿದೆ. ಹೌದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್(ಬಿಎಂಆರ್ ಸಿಎಲ್) ನಮ್ಮ ಮೆಟ್ರೋ ಪ್ರಯಾಣಿಕರ ದರದಲ್ಲಿ ಮತ್ತೇ ಏರಿಕೆ ಮಾಡಲು ಚಿಂತಿಸಿದೆ ಎಂದು ತಿಳಿದುಬಂದಿದೆ. ಬಿಎಂಆರ್ಸಿಎಲ್ ಹೊಸ ಮಾದರಿಯಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ಮೂರು ವರ್ಷಗಳಿಗೊಮ್ಮೆ ಶೇ.12ರಷ್ಟು ದರ ಏರಿಕೆ ಮಾಡುವ ಬಗ್ಗೆ ಪ್ರಸ್ತಾಪಿಸಿದೆ.
NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವ ಸಾಧ್ಯತೆಯನ್ನು ಸರ್ಕಾರ ತಳ್ಳಿಹಾಕಿದೆ. ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭದ ಕೆಲಸವಾಗಿದ್ದು, ಅದು ಜವಾಬ್ದಾರಿಯಿಂದ ಪಲಾಯನ ಮಾಡಿದಂತಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.ಸರ್ಕಾರದ ಮೂಲಗಳ ಪ್ರಕಾರ, ಪ್ರಧಾನ್ ಅವರ ರಾಜೀನಾಮೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. "ರಾಜೀನಾಮೆ ನೀಡಿ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಸುಲಭದ ಮಾರ್ಗ. ಜನರು ನಮಗೆ ಜನಾದೇಶ ನೀಡಿದ್ದಾರೆ ಮತ್ತು ನಾವು ಅದನ್ನು ಸಮರ್ಥವಾಗಿ ನಿರ್ವಹಿಸುತ್ತೇವೆ," ಎಂದು ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಓಡಿಲ್ನಳ (ಸಂಬೋಳ್ಯ) ಗ್ರಾಮದ 15 ವರ್ಷದ ಶಾಲಾ ವಿದ್ಯಾರ್ಥಿ ಸುಮಂತ್ ಎಂಬಾತನ ಅಸಹಜ ಸಾವು ಪ್ರಕರಣ ಸಂಬಂಧ ಶಂಕಿತ ಆರೋಪಿಗಳ ಬ್ರೈನ್ ಮಾಪಿಂಗ್ಗೆ ಕೋರ್ಟ್ ಅನುಮತಿ ನೀಡಿದೆ. ಈ ಮೂಲಕ ತನಿಖೆಗೆ ಮತ್ತೇ ಮರುಜೀವ ಸಿಕ್ಕಿದ ಹಾಗಾಗಿದೆ. ಧನುರ್ಮಾಸ ಪೂಜೆಯ ಹಿನ್ನೆಲೆಯಲ್ಲಿ ಬೆಳಿಗ್ಗೆ ದೇವಸ್ಥಾನಕ್ಕೆಂದು ತೆರಳಿದ್ದ ಸುಮಂತ್ ಮನೆಗೆ ಹಿಂತಿರುಗಿರಲಿಲ್ಲ. ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ ಮನೆಯ ಬಳಿಯ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಚಿರತೆ ದಾಳಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು.
ನವದೆಹಲಿ: ನೀಟ್ ಅಕ್ರಮದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಪ್ರಮಖ ಬೇಡಿಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ. ಇದೀಗ ಶಿಕ್ಷಣ ಸಚಿವರ ರಾಜೀನಾಮೆಗೆ ಕೇಂದ್ರ ನಾಳೆಯವರೆಗೆ ಸಮಯ ಕೇಳಿದೆ ಎನ್ನಲಾಗಿದ್ದು, ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಮಣಿಯೇ ಎಂಬ ಸೂಚನೆ ಕಂಡುಬಂದಿದೆ. ಕಳೆದ ಒಂದು ವಾರದಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಪಾರ್ಟಿ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ದೇಶದ ನಾನಾ ಭಾಗಗಳಿಂದ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಿವೆ. ಇಂದು ಕಾಕ್ರೋಚ್ ಪಕ್ಷದ ವಕ್ತಾರ ಸೌರವ್ ದಾಸ್ ನೇತೃತ್ವದ ನಿಯೋಗ ಎರಡನೇ ಬಾರಿಗೆ ಕೇಂದ್ರ ಸಚಿವ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಜೊತೆ ಮಾತುಕತೆ ನಡೆಸಿದೆ.
ನವದೆಹಲಿ: ಸಿಜೆಪಿ ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ವಿರುದ್ಧ ಪೆಲೆಟ್ ಗನ್ಗಳನ್ನು (ಚೆರ್ರವ ಗುಂಡುಗಳನ್ನು ಹಾರಿಸುವ ಬಂದೂಕುಗಳು) ಬಳಸಲಾಗಿದೆ ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. 19 ವರ್ಷದ ಪ್ರತಿಭಟನಾಕಾರರೊಬ್ಬರಿಗೆ ಆಗಿರುವ ಗಾಯಗಳನ್ನು ಮಾಧ್ಯಮದವರ ಮುಂದೆ ತೋರಿಸಿ, ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಕ್ಷಮೆಯಾಚನೆ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಭದ್ರತಾ
ಆಂಧ್ರಪ್ರದೇಶದಲ್ಲಿ ಗ್ರಾಮಸ್ಥರ ಸಮಯಪ್ರಜ್ಞೆ ಮತ್ತು ಜೀವದಯೆಯಿಂದಾಗಿ ದೊಡ್ಡದೊಂದು ರೈಲು ಅಪಘಾತ ಹಾಗೂ ಮೂಕಪ್ರಾಣಿಗಳ ಪ್ರಾಣಾಪಾಯ ತಪ್ಪಿದೆ. ರೈಲ್ವೆ ಹಳಿಯ ಮೇಲೆ ಗೋವುಗಳು ಮತ್ತು ಗೂಳಿಗಳು ಸಿಲುಕಿಕೊಂಡಿರುವುದನ್ನು ಕಂಡ ಸ್ಥಳೀಯರು, ತಕ್ಷಣವೇ ಚಲಿಸುತ್ತಿದ್ದ ರೈಲನ್ನು ತಡೆದು ಪ್ರಾಣಿಗಳನ್ನು ರಕ್ಷಿಸಿದ್ದಾರೆ. ಆಂಧ್ರಪ್ರದೇಶದ ರೈಲ್ವೆ ಮಾರ್ಗವೊಂದರಲ್ಲಿ ಸಾಗುತ್ತಿದ್ದ ಹಳಿಗಳ ಮೇಲೆ ಇದ್ದಕ್ಕಿದ್ದಂತೆ ದನ-ಗೂಳಿಗಳ ಹಿಂಡು ಬಂದು ಸಿಲುಕಿಕೊಂಡಿತ್ತು. ದೂರದಿಂದ ವೇಗವಾಗಿ ಬರುವ ರೈಲನ್ನು ಮತ್ತು ಹಳಿಯ ಮೇಲಿದ್ದ ಮೂಕಪ್ರಾಣಿಗಳನ್ನು ಗಮನಿಸಿದ ಸ್ಥಳೀಯರು, ತಕ್ಷಣವೇ ಎಚ್ಚೆತ್ತುಕೊಂಡಿದ್ದಾರೆ. ಸಮಯಪ್ರಜ್ಞೆ ಮೆರೆದ ಸಾರ್ವಜನಿಕರು ಕೆಂಪು ಬಟ್ಟೆ ಹಾಗೂ ಸೈನ್ ಮಾಡಿ ಚಾಲಕನಿಗೆ ಸುಳಿವು ನೀಡಿ, ಬರುವ ರೈಲನ್ನು ಸುರಕ್ಷಿತವಾಗಿ ನಿಲ್ಲಿಸುವಲ್ಲಿ ಯಶಸ್ವಿಯಾದರು.
ಶಿವಾಜಿನಗರದಲ್ಲಿ ಬೀದಿಬದಿ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಕಿಡಿಗೇಡಿಗಳಿಂದ ಹಲ್ಲೆಗೊಳಗಾಗಿದ್ದ ಅಧಿಕಾರಿಗಳನ್ನು ಸಚಿವ ಕೃಷ್ಣ ಭೈರೇಗೌಡ ಭೇಟಿಯಾಗಿ ಅವರನ್ನು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ. ಕರ್ತವ್ಯನಿಷ್ಠೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ ಅಧಿಕಾರಿಗಳನ್ನು ಕೃಷ್ಣ ಬೈರೇಗೌಡ ಅವರು ತಮ್ಮ ಕಚೇರಿಯಲ್ಲಿ ಆಹ್ವಾನಿಸಿ ಸನ್ಮಾನಿಸಿದರು. ಕರ್ತವ್ಯನಿಷ್ಠೆ, ಧೈರ್ಯ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಬದ್ಧತೆಯಿಂದ ಸೇವೆ ಸಲ್ಲಿಸಿದ ಅಧಿಕಾರಿಗಳ ಕಾರ್ಯವನ್ನು ಸಚಿವರು ಶ್ಲಾಘಿಸಿ, ನಗರದ ಸುಗಮ ಸಂಚಾರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ತಿಳಿಸಿದರು.
ಹೈದರಾಬಾದ್: ತೆಲುಗು ಚಿತ್ರರಂಗದ ಹಿರಿಯ ನಟ ಮತ್ತು ಶಾಸಕ ನಂದಮೂರಿ ಬಾಲಕೃಷ್ಣ ಅವರಿಗೆ ಇತ್ತೀಚೆಗೆ ತಮ್ಮ ಮುಂಬರುವ ಚಿತ್ರದ ಸಾಹಸ ಸನ್ನಿವೇಶದ ಚಿತ್ರೀಕರಣದ ವೇಳೆ ಸಣ್ಣಪುಟ್ಟ ಗಾಯಗಳಾಗಿದೆ. ಇದೀಗ ಬಾಲಯ್ಯ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ.ಆಂಧ್ರಪ್ರದೇಶದ ಕಾಕಿನಾಡ ಪೋರ್ಟ್ ಬಳಿ ಬಾಲಯ್ಯ ನಟನೆಯ ಮುಂಬರುವ ಹೆಸರಿಡದ ಎನ್ಬಿಕೆ 111 ಚಿತ್ರದ ಸಾಹಸ ಚಿತ್ರೀಕರಣ ನಡೆದಿತ್ತು. ಈ ವೇಳೆ ಬಾಲಯ್ಯಗೆ ಸಣ್ಣ ಅಪಘಾತವಾಗಿದೆ. ಈ ವೇಳೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ 66 ವರ್ಷದ ಬಾಲಯ್ಯ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಸಿನಿಮಾ ಹಾಗೂ ರಾಜಕೀಯದಲ್ಲಿ ಬ್ಯುಸಿ ಇರೋ ಬಾಲಯ್ಯ ಹೆಸರಿಡದ ಚಿತ್ರ ಗೋಪಿಚಂದ್ ಮಾನಿನೇನಿ ನಿರ್ದೇಶನದ ಸಿನಿಮಾದಲ್ಲಿ ತೊಡಗಿದ್ದರು. ಚಿತ್ರೀಕರಣ ಪ್ರಾರಂಭವಾಗಿ ತಿಂಗಳುಗಳೇ ಉರುಳಿದೆ.
ನವದೆಹಲಿ: ಸಂಸತ್ ಮುಂಗಾರು ಅಧಿವೇಶನದ 5ನೇ ದಿನವೂ ಯಾವುದೇ ಮಹತ್ವದ ಕಲಾಪ ನಡೆಯದೆ ಲೋಕಸಭೆಯನ್ನು ಸೋಮವಾರದವರೆಗೆ ಮುಂದೂಡಲಾಗಿದೆ. ಇದೇ ವೇಳೆ ರಾಜ್ಯಸಭೆ ಕಲಾಪವನ್ನೂ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಲೋಕಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ಶುಕ್ರವಾರವೂ ಮುಂದುವರಿಸಿದವು. ಈ ನಡುವೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷಗಳಿಗೆ ಮನವಿ ಮಾಡಿದರು.ಪ್ರಧಾನಿ ಮೋದಿ ಅವರು ಈಗಾಗಲೇ ಈ ವಿಚಾರದಲ್ಲಿ ದೇಶಕ್ಕೆ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಮತ್ತೊಮ್ಮೆ ಚರ್ಚಿಸಿ, ಸದನದಲ್ಲಿ ಚರ್ಚೆಗೆ ಸಹಕರಿಸುವಂತೆ ಮನವಿ ಮಾಡಿರುವುದಾಗಿ ರಿಜಿಜು ಹೇಳಿದರು.
ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಜರ್ಜರಿತಗೊಂಡಿದ್ದ ಹೈ-ಟೆನ್ಷನ್ ವಿದ್ಯುತ್ ತಂತಿ ತಾಗಿ ತಂದೆ ಮತ್ತು ಮಗ ಇಬ್ಬರೂ ದಾರುಣವಾಗಿ ಜೀವ ಕಳೆದುಕೊಂಡ ಭೀಕರ ಘಟನೆ ನಡೆದಿದೆ. ವಿದ್ಯುತ್ ಇಲಾಖೆಯ ತೀವ್ರ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಸ್ಥಳೀಯ ಶಾಸಕಿ ಕೇತ್ಕಿ ಸಿಂಗ್ ಅವರು ತಕ್ಷಣವೇ ಸ್ಪಂದಿಸಿದ ರೀತಿ ಇಡೀ ದೇಶದ ಗಮನ ಸೆಳೆದಿದೆ.ಬಲ್ಲಿಯಾ ವ್ಯಾಪ್ತಿಯಲ್ಲಿ ರಸ್ತೆ ಬದಿ ನೇತಾಡುತ್ತಿದ್ದ ಹಳೆಯ ಹಾಗೂ ಜರ್ಜರಿತಗೊಂಡ ಹೈ-ಟೆನ್ಷನ್ ತಂತಿಯ ಸ್ಪರ್ಶವಾಗಿ ತಂದೆ ಮತ್ತು ಮಗ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆಕಳೆದ ಕೆಲವು ದಿನಗಳಿಂದ ಚಿನ್ನದ ದರ ಇಳಿಕೆಯಾಗುತ್ತಲೇ ಇತ್ತು. ಆದರೆ ಇಂದು ಮತ್ತೆ ಚಿನ್ನದ ದರದಲ್ಲಿ ವ್ಯತ್ಯಾಸ ಕಂಡುಬಂದಿದೆ. ಪರಿಶುದ್ಧ ಚಿನ್ನದ ದರಲ್ಲಿ ಮೊನ್ನೆ ಕೊಂಚ ಏರಿಕೆಯಾಗಿತ್ತು. ಇಂದು ಚಿನ್ನದ ದರ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳು ಭಾರತದಲ್ಲೂ ಚಿನ್ನದ ಬೆಲೆ ಮೇಲೆ ಪರಿಣಾಮ ಬೀರುತ್ತಲೇ ಇರುತ್ತವೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದು 1,47,310 ರೂ.ಗಳಾಗಿವೆ.
ಬೆಂಗಳೂರು: ಸೂಕ್ತ ವ್ಯಕ್ತಿಗೆ ಸೂಕ್ತ ಸ್ಥಾನ ಕೊಡುವುದು ಸರಕಾರದ ಬದ್ಧತೆಯಾಗಿರಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.ಅವರು ಇಂದು ಜಿ.ಕೆ.ವಿ.ಕೆ. ಯಲ್ಲಿ ನಡೆಯುವ ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಇಲ್ಲಿವರೆಗೆ ವೈದ್ಯಕೀಯ, ಎಂಜಿನಿಯರಿಂಗ್ ಸೀಟುಗಳು ಮಾರಾಟವಾಗುತ್ತಿದ್ದವು. ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ಸರಕಾರವು ನಿಮಗೆ ದ್ರೋಹ ಮಾಡುವುದನ್ನು ಯಾರಿಂದಲೂ ಸಹಿಸಲಸಾಧ್ಯ ಎಂದು ತಿಳಿಸಿದರು.ಸರಕಾರ ಅತಿ ಶೀಘ್ರವಾಗಿ ಧಾವಿಸಿ ಬಂದು ನಿಮ್ಮ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು. ಸರಕಾರ ಬೆಂಗಳೂರಲ್ಲಿ ಇಲ್ಲದಿರುವುದು ವಿಪರ್ಯಾಸ ಎಂದು ಟೀಕಿಸಿದರು.
ಬೆಂಗಳೂರು: ಎದೆ ಸೀಳಿದ್ರೂ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೆಹಲಿಯ ಪ್ರತಿಭಟನೆಯಲ್ಲಿ ಮುಸ್ಲಿಂ ಸಮುದಾಯದ ಯುವಕರು ಪಾಲ್ಗೊಂಡಿರುವ ಬಗ್ಗೆ ಸಿಟಿ ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿದ್ಯಾರ್ಥಿಗಳೇ ಅಲ್ಲದವರು ಪಾಲ್ಗೊಂಡಿದ್ದಾರೆ ಎನ್ನಲು ಹೋಗಿ ಧರ್ಮದ ವಿಚಾರ ತಂದು ವಿವಾದ ಸೃಷ್ಟಿಸಿದ್ದಾರೆ. ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಎನು ಸಂಬಂಧ? ಮುಲ್ಲಾಗಳ ಎದೆ ಸೀಳದರೆ ಮೂರು ಅಕ್ಷರ ಇಲ್ಲ. ಆತ ಬಂದು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದರೆ ಏನರ್ಥ?
ಪಾಕಿಸ್ತಾನದಲ್ಲಿ ನಡೆದಿದ್ದ ಮದುವೆಯೊಂದರಲ್ಲಿ ಟೀಂ ಇಂಡಿಯಾ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಓಡಾಡಿದ್ದಾರಾ.. ಹೀಗೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು ಇದರ ಹಿಂದಿನ ಅಸಲಿ ಕಹಾನಿ ಇಲ್ಲಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಸಂಬಂಧ ಸಂಪೂರ್ಣ ಮುರಿದು ಬಿದ್ದಿದೆ. ಭಾರತದ ಕ್ರಿಕೆಟಿಗರು ಪಾಕಿಸ್ತಾನಕ್ಕೆ ಹೋಗುವುದೂ ಇಲ್ಲ. ಹೀಗಿರುವಾಗ ಬುಮ್ರಾ ಪಾಕಿಸ್ತಾನದಲ್ಲಿ ನಡೆದ ಮದುವೆಯೊಂದರಲ್ಲಿ ಭಾಗಿಯಾಗುವುದೇ? ಇಲ್ಲಿ ಅಸಲಿ ಕತೆ ಬೇರೆಯೇ ಇದೆ. ಒಬ್ಬರನ್ನೇ ಹೋಲುವ ಏಳು ಮಂದಿ ಪ್ರಪಂಚದಲ್ಲಿರುತ್ತಾರಂತೆ. ಇಲ್ಲಿ ಆಗಿದ್ದೂ ಇದೇ ಕತೆ.
ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ನಡುವೆ ಮಾನವೀಯತೆ ಮತ್ತು ಸಮಯಪ್ರಜ್ಞೆಯನ್ನು ಸಾರುವ ಹೃದಯಸ್ಪರ್ಶಿ ಘಟನೆಯೊಂದು ನಡೆದಿದೆ. ಪ್ರತಿಭಟನೆಯ ಬಿಸಿ ಮತ್ತು ಗೊಂದಲದ ವಾತಾವರಣದ ನಡುವೆಯೇ ಇದ್ದಕ್ಕಿದ್ದಂತೆ ಮುಟ್ಟಾಗಿದ್ದ ಯುವತಿಯೊಬ್ಬಳಿಗೆ ತಕ್ಷಣವೇ ಸ್ಯಾನಿಟರಿ ಪ್ಯಾಡ್ ಮತ್ತು ಬಟ್ಟೆಯ ಮೇಲಿನ ಕರೆಯನ್ನು ತೊಳೆಯಲು ಟಿಶ್ಯೂ ನೀಡಿ ನೆರವಾದ ಯುವಕನ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವತಿಗೆ ಅನಿರೀಕ್ಷಿತವಾಗಿ ಮುಟ್ಟು ಪ್ರಾರಂಭವಾಗಿ, ಆಕೆಯ ಉಡುಪು ಸಂಪೂರ್ಣವಾಗಿ ಹಾಳಾಗಿತ್ತು.
ನೀಟ್ ಪೇಪರ್ ಸೋರಿಕೆ ಖಂಡಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ನಡುವೆಯೇ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ತೀವ್ರ ವೈರಲ್ ಆಗುತ್ತಿದೆ. ದೆಹಲಿ ಪೊಲೀಸರು ಪ್ರತಿಭಟನಾ ಸ್ಥಳದಲ್ಲಿ ಅತೀ ಸುಧಾರಿತ 'ಫೇಸಿಯಲ್ ರೆಕಗ್ನಿಷನ್ ಸಿಸ್ಟಮ್' ತಂತ್ರಜ್ಞಾನ ಹೊಂದಿರುವ ವ್ಯಾನ್ ಒಂದನ್ನು ನಿಯೋಜಿಸಿದ್ದು, ಅದು ಕ್ಯಾಮೆರಾ ಕಣ್ಣಿಗೆ ಬೀಳುವ ಪ್ರತಿಯೊಬ್ಬ ವ್ಯಕ್ತಿಯ ಹೆಸರು, ವಿಳಾಸ ಹಾಗೂ ಹಿನ್ನೆಲೆಯನ್ನು ಪರದೆಯ ಮೇಲೆ ಕ್ಷಣಾರ್ಧದಲ್ಲಿ ಪ್ರದರ್ಶಿಸುತ್ತಿದೆ ಎಂದು ಈ ವಿಡಿಯೋದಲ್ಲಿ ಪ್ರತಿಪಾದಿಸಲಾಗಿದೆ. ಸಾಮಾಜಿಕ ಜಾಲತಾಣ 'X' ಮತ್ತು ಇನ್ಸ್ಟಾಗ್ರಾಮ್ನಲ್ಲಿ ಹರಿದಾಡುತ್ತಿರುವ ಈ ವಿಡಿಯೋದಲ್ಲಿ, ಜಂತರ್ ಮಂತರ್ ಬಳಿ ನಿಲ್ಲಿಸಲಾದ ಪೊಲೀಸ್ ವಾಹನವೊಂದರ ಒಳಗಿನ ಡಿಜಿಟಲ್ ಪರದೆಯನ್ನು ತೋರಿಸಲಾಗಿದೆ.
ಟೀಮ್ ಇಂಡಿಯಾದ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರ ಸಮ್ಮುಖದಲ್ಲಿ ಭಾರತ ತಂಡ ಸತತ ಸೋಲು ಮತ್ತು ಕಳಪೆ ಪ್ರದರ್ಶನದಿಂದ ಕಂಗಾಲಾಗಿತ್ತು. ಆದರೆ, ವೈಯಕ್ತಿಕ ಕಾರಣಗಳಿಂದಾಗಿ ಗೌತಮ್ ಗಂಭೀರ್ ಅವರ ಅನುಪಸ್ಥಿತಿಯಲ್ಲಿ ಪಂದ್ಯಗಳನ್ನು ಆಡಿದ ಟೀಮ್ ಇಂಡಿಯಾ ಭರ್ಜರಿ ಜಯ ಬಾರಿಸುತ್ತಿದ್ದಂತೆ, ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಗೌತಮ್ ಗಂಭೀರ್ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ.ಗಂಭೀರ್ ಗೈರಾಗಿದ್ದೇ ಭಾರತದ ಗೆಲುವಿಗೆ ಮುಖ್ಯ ಕಾರಣ!" ಎಂದು ಕ್ರೀಡಾಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯವಾಡುತ್ತಿದ್ದಾರೆ. ಗೌತಮ್ ಗಂಭೀರ್ ಅವರು ಟೀಮ್ ಇಂಡಿಯಾ ಕೋಚ್ ಆಗಿ ಅಧಿಕಾರ ವಹಿಸಿಕೊಂಡ ನಂತರ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದ್ದರು.
ನಿಜವಾದ ಹೀರೋಗಳೂ ಯಾವಾಗಲೂ ಸೂಪರ್ ಹೀರೋಗಳಂತೆ ಕ್ಯಾಪ್ ಧರಿಸಿ ಬರುವುದಿಲ್ಲ. ಅವರ ಹತ್ತಿರ ಇರುವುದು ಕೇವಲ ಧೈರ್ಯ, ಕರುಣೆ ಮತ್ತು ತಮ್ಮ ಕರ್ತವ್ಯದ ಮೇಲಿರುವ ಅಪಾರ ನಿಷ್ಠೆ! ಇದಕ್ಕೆ ಜೀವಂತ ಸಾಕ್ಷಿಯಂತೆ ನಿಲ್ಲುತ್ತದೆ ಹಿಮಾಚಲ ಪ್ರದೇಶದಲ್ಲಿ ನಡೆದ ಈ ರೋಮಾಂಚಕಾರಿ ಹಾಗೂ ಕಣ್ಣೀರು ತರಿಸುವ ಘಟನೆ. ತಮ್ಮ ಜೀವವನ್ನೇ ಪಣಕ್ಕಿಟ್ಟು, ಬೃಹತ್ ಬೆಟ್ಟ ಕುಸಿದು ಕಲ್ಲುಗಳು ಬೀಳುತ್ತಿದ್ದ ಅಪಾಯಕಾರಿ ಹಾದಿಯಲ್ಲಿ 7 ತಿಂಗಳ ಕಂದಮ್ಮನನ್ನು ಎದೆಗೆ ಅಪ್ಪಿಕೊಂಡು ಸುರಕ್ಷಿತವಾಗಿ ದಡ ತಲುಪಿಸಿದ ಆಂಬ್ಯುಲೆನ್ಸ್ ಸಿಬ್ಬಂದಿಯ ಸಾಹಸಕ್ಕೆ ಇಡೀ ದೇಶವೇ ಸಾಷ್ಟಾಂಗ ನಮಸ್ಕಾರ ಹೇಳುತ್ತಿದೆ.
ರಸ್ತೆಯಲ್ಲಿ ಸಂಚಾರ ನಿಯಮಗಳನ್ನು ಪಾಲಿಸಬೇಕಾದ ಪೊಲೀಸರೇ ನಿರ್ಲಕ್ಷ್ಯ ವಹಿಸಿ ಅಪಘಾತಕ್ಕೆ ಕಾರಣವಾದಲ್ಲದೆ, ಸಂತ್ರಸ್ತ ಸವಾರರ ಮೇಲೆಯೇ ಹಲ್ಲೆ ನಡೆಸಿದ ಅತ್ಯಂತ ಖಂಡನೀಯ ಘಟನೆಯೊಂದು ವರದಿಯಾಗಿದೆ.ಹಿಂಬದಿಯಿಂದ ಬರುವ ವಾಹನಗಳನ್ನು ಗಮನಿಸದೇ ಪೊಲೀಸ್ ಅಧಿಕಾರಿಯೊಬ್ಬರು ಕಾರಿನ ಬಾಗಿಲನ್ನು ಥಟ್ಟನೆ ತೆರೆದ ಪರಿಣಾಮ, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಯುವಕರು ಕಾರಿನ ಡೋರ್ಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಯುವಕರನ್ನು ಉಪಚರಿಸಿ, ಆಸ್ಪತ್ರೆಗೆ ಸೇರಿಸುವ ಬದಲು, ಆ ಪೊಲೀಸ್ ಸಿಬ್ಬಂದಿ ಅವರ ಮೇಲೆಯೇ ದೌರ್ಜನ್ಯ ಎಸಗಲು ಮುಂದಾಗಿದ್ದಾರೆ.
ಬಾಲಿವುಡ್ನ ಖ್ಯಾತ ನಟಿ ಕಾಜೋಲ್ ಅವರ ವಿಡಿಯೋವೊಂದು ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಟಿಯನ್ನು ಕರೆಯುವಾಗ ಅಥವಾ ಅವರ ಗಮನ ಸೆಳೆಯುವಾಗ ವ್ಯಕ್ತಿಯೊಬ್ಬರ ಕೈ ಆಕಸ್ಮಿಕವಾಗಿ ಸ್ಪರ್ಶಿಸಿದ್ದು, ಈ ಘಟನೆಯ ತುಣುಕು ವೈರಲ್ ಆಗಿದೆ. ಜನನಿಬಿಡ ಕಾರ್ಯಕ್ರಮವೊಂದರಲ್ಲಿ ನಟಿ ಕಾಜೋಲ್ ಭಾಗವಹಿಸಿದ್ದಾಗ ಈ ಘಟನೆ ಸಂಭವಿಸಿದೆ. ಕಾಜೋಲ್ ಅವರನ್ನು ಕರೆಯಲು ಅಥವಾ ಅವರ ಗಮನ ಸೆಳೆಯಲು ಯತ್ನಿಸಿದ ವ್ಯಕ್ತಿಯೊಬ್ಬರ ಕೈ ಆಕಸ್ಮಿಕವಾಗಿ ಅವರ ದೇಹಕ್ಕೆ ತಾಗಿದೆ. ಈ ಅನಿರೀಕ್ಷಿತ ಸ್ಪರ್ಶದಿಂದ ನಟಿ ಕ್ಷಣಕಾಲ ಆಶ್ಚರ್ಯಚಕಿತರಾಗಿದ್ದು, ಮುಜುಗರಕ್ಕೊಳಗಾದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ತಕ್ಷಣವೇ ಸುತ್ತಮುತ್ತಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಜನರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ನೀಟ್ ಪೇಪರ್ ಸೋರಿಕೆ ಪ್ರಕರಣ ಖಂಡಿಸಿ ಮತ್ತು ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆ ತರಬೇಕೆಂದು ಆಗ್ರಹಿಸಿ ಕಳೆದೆರಡು ತಿಂಗಳಿನಿಂದ ನಿರಂತರ ಹೋರಾಟ ನಡೆಸುತ್ತಿದ್ದ ಪ್ರಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ ಪ್ರೇಮಿ ಸೋನಮ್ ವಾಂಗ್ಚುಕ್ (Sonam Wangchuk) ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.ಕೇಂದ್ರ ಸರ್ಕಾರದ ಲಿಖಿತ ಭರವಸೆ ಹಾಗೂ ವಿವಿಧ ರಾಜಕೀಯ ಪಕ್ಷಗಳ ಸಂಸದರ ಮನವಿಯ ನಂತರ ಅವರು ತಮ್ಮ ಸತ್ಯಾಗ್ರಹವನ್ನು ಹಿಂಪಡೆದಿದ್ದಾರೆ.
ದೇಶಾದ್ಯಂತ ನೀಟ್ ಪರೀಕ್ಷೆ ಅಕ್ರಮ ಹಾಗೂ ಪೇಪರ್ ಸೋರಿಕೆ ಖಂಡಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯರಾತ್ರಿ ಸೆಲ್ಫಿ ವಿಡಿಯೋ ಸಂದೇಶವೊಂದನ್ನು ಬಿಡುಗಡೆ ಮಾಡಿದ್ದಾರೆ. "ಯುವಜನತೆಯ ಭವಿಷ್ಯ ಮತ್ತು ಕ್ಷೇಮಕ್ಕಿಂತ ಬೇರೆ ಯಾವುದೂ ಮುಖ್ಯವಲ್ಲ" ಎಂದು ಹೇಳಿರುವ ಪ್ರಧಾನಿಯವರು, ಪೇಪರ್ ಸೋರಿಕೆ ತಡೆಯಲು ನಾಳೆಯ ಕ್ಯಾಬಿನೆಟ್ ಸಭೆಯಲ್ಲಿ ಮತ್ತಷ್ಟು ಕಠಿಣ ಕಾನೂನು ತರುವುದಾಗಿ ಭರವಸೆ ನೀಡಿದ್ದಾರೆ.ಪೇಪರ್ ಸೋರಿಕೆ ಸಾಮಾನ್ಯ ವಿಚಾರವಲ್ಲವಿಡಿಯೋದಲ್ಲಿ ಮಾತನಾಡಿದ ಪ್ರಧಾನಿ ಮೋದಿ, "ಸ್ನೇಹಿತರೇ, ಪೇಪರ್ ಸೋರಿಕೆ ಎಂಬುದು ಸಣ್ಣ ವಿಷಯವಲ್ಲ ಎಂಬ ಅರಿವು ನನಗಿದೆ.
ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ತಾಣ ಮತ್ತು ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಕರ್ನಾಟಕಜಿಲ್ಲೆಗಳು: ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ. ಸಾಧ್ಯತೆ: ಕರಾವಳಿ ಭಾಗದಲ್ಲಿ ಮುಂಗಾರು ಮಾರುತಗಳು ಬಲಗೊಂಡಿರುವುದರಿಂದ ಇಡೀ ದಿನ ಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಇಂದು ಶುಕ್ರವಾರವಾಗಿದ್ದು ದೇವಿಯ ಆರಾಧನೆಗೆ ಸೂಕ್ತವಾದ ದಿನವಾಗಿದೆ. ಇಂದು ಪದ್ಮಾವತಿ ನವರತ್ನ ಮಾಲಿಕಾ ಸ್ತುತಿಯನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.ಶ್ರೀಮಾನ್ ಯಸ್ಯಾಃ ಪ್ರಿಯಸ್ಸನ್ ಸಕಲಮಪಿ ಜಗಜ್ಜಂಗಮಸ್ಥಾವರಾದ್ಯಂಸ್ವರ್ಭೂಪಾತಾಲಭೇದಂ ವಿವಿಧವಿಧಮಹಾಶಿಲ್ಪಸಾಮರ್ಥ್ಯಸಿದ್ಧಮ್ ।ರಂಜನ್ ಬ್ರಹ್ಮಾಮರೇಂದ್ರೈಸ್ತ್ರಿಭುವನಜನಕಃ ಸ್ತೂಯತೇ ಭೂರಿಶೋ ಯಃಸಾ ವಿಷ್ಣೋರೇಕಪತ್ನೀ ತ್ರಿಭುವನಜನನೀ ಪಾತು ಪದ್ಮಾವತೀ ನಃ ॥ 1 ॥ ಶ್ರೀಶೃಂಗಾರೈಕದೇವೀಂ ವಿಧಿಮುಖಸುಮನಃಕೋಟಿಕೋಟೀರಜಾಗ್ರ-ದ್ರತ್ನಜ್ಯೋತ್ಸ್ನಾಪ್ರಸಾರಪ್ರಕಟಿತಚರಣಾಂಭೋಜನೀರಾಜಿತಾರ್ಚಾಮ್ ।ಗೀರ್ವಾಣಸ್ತ್ರೈಣವಾಣೀಪರಿಫಣಿತಮಹಾಕೀರ್ತಿಸೌಭಾಗ್ಯಭಾಗ್ಯಾಂಹೇಲಾನಿರ್ದಗ್ಧದೈನ್ಯಶ್ರಮವಿಷಮಮಹಾರಣ್ಯಗಣ್ಯಾಂ ನಮಾಮಿ ॥ 2 ॥ ವಿದ್ಯುತ್ಕೋಟಿಪ್ರಕಾಶಾಂ ವಿವಿಧಮಣಿಗಣೋನ್ನಿದ್ರಸುಸ್ನಿಗ್ಧಶೋಭಾ-ಸಂಪತ್ಸಂಪೂರ್ಣಹಾರಾದ್ಯಭಿನವವಿಭವಾಲಂಕ್ರಿಯೋಲ್ಲಾಸಿಕಂಠಾಮ್ ।ಆದ್ಯಾಂ ವಿದ್ಯೋತಮಾನಸ್ಮಿತರುಚಿರಚಿತಾನಲ್ಪಚಂದ್ರಪ್ರಕಾಶಾಂಪದ್ಮಾಂ ಪದ್ಮಾಯತಾಕ್ಷೀಂ ಪದನಲಿನನಮತ್ಪದ್ಮಸದ್ಮಾಂ ನಮಾಮಿ ॥ 3 ॥
ಪದೇ ಪದೇ ನಡೆಯುತ್ತಿರುವ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳಿಗೆ ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಗುರುವಾರ ಬೆಂಬಲ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ನಿರಾಶೆ ಅರ್ಥವಾಗುವಂತಹದ್ದು ಮತ್ತು ಅವರಿಗೆ "ಮತ್ತೆ ಇಂತಹ ಪರಿಸ್ಥಿತಿ ಎದುರಾಗದಂತೆ" ನೋಡಿಕೊಳ್ಳುವುದು ಸಮಾಜದ ಜವಾಬ್ದಾರಿ ಎಂದು ಅವರು ಹೇಳಿದರು.'X' (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ ತೆಂಡೂಲ್ಕರ್, ಪ್ರಾಧ್ಯಾಪಕರಾಗಿದ್ದ ತಮ್ಮ ದಿವಂಗತ ತಂದೆ ರಮೇಶ್ ತೆಂಡೂಲ್ಕರ್
'ಕಾಕ್ರೋಚ್ ಜನತಾ ಪಾರ್ಟಿ'ಯ (CJP) ಸ್ಥಾಪಕ ಅಭಿಜೀತ್ ಡಿಪ್ಕೆ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.ಜಂತರ್ ಮಂತರ್ನಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಬೋಸ್ಟನ್ ವಿಶ್ವವಿದ್ಯಾಲಯದ ಪದವೀಧರರಾದ ಡಿಪ್ಕೆ, ಒಂದು ವೇಳೆ ಪ್ರಧಾನ್ ಅವರನ್ನು ಹುದ್ದೆಯಿಂದ ಕೆಳಗಿಳಿಸದಿದ್ದರೆ, ಯುವಜನತೆಯ ಮುಂದಿನ ಬೇಡಿಕೆಯು ಪ್ರಧಾನಿಯವರ ರಾಜೀನಾಮೆಯಾಗಿರುತ್ತದೆ ಎಂದು ಹೇಳಿದರು.ಜ್ಯಾಮರ್ಗಳನ್ನು ಅಳವಡಿಸಲು ಮತ್ತು ಪ್ರತಿಭಟನೆಯನ್ನು ತಡೆಯಲು ಬ್ಯಾರಿಕೇಡ್ಗಳನ್ನು ಹಾಕಲು ವಹಿಸಿದಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಸರ್ಕಾರ ವಹಿಸಿದ್ದರೆ, 22 ವಿದ್ಯಾರ್ಥಿಗಳ ಜೀವ
ಬೆಂಗಳೂರು: ಈಗ ರಾಹುಲ್ ಗಾಂಧಿಯವರು ತುಕ್ಡೆ ತುಕ್ಡೆ ಗ್ಯಾಂಗಿನ ನಾಯಕರಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ.ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಬಿಜೆಪಿ ಶಾಸಕರ ಮೇಲೆ ನಿನ್ನೆ ನಡೆದ ಹಲ್ಲೆಯನ್ನು ಖಂಡಿಸಿ ಇಂದು ಪಕ್ಷದ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮದುವೆ ಆದವರು ಹನಿಮೂನ್ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿಯವರು ಪದೇಪದೇ ಹೊರದೇಶಕ್ಕೆ ತೆರಳುತ್ತಾರೆ ಎಂದು ವ್ಯಂಗ್ಯವಾಗಿ ನುಡಿದರು.
ಬೆಂಗಳೂರು: ವಿಪಕ್ಷ ನಾಯಕ ಆರ್ ಅಶೋಕ್ ಅವರಿಗೆ ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಸ್ವಲ್ಪ ಬುದ್ದಿ ಭ್ರಮಣೆ ಆದಂತೆ ಕಾಣುತ್ತಿದೆ. ಅವರ ಭಾಷೆಯ ಪ್ರಯೋಗ ಹಳಿ ತಪ್ಪಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಹರಿಹಾಯ್ದಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ನಾಯಕರು ಮಾತನಾಡಿರುವ ಅಣಿಮುತ್ತು ನೋಡಿದಾಗ ಇವರಿಗೆ ಬುದ್ಧಿಭ್ರಮಣೆಯಾಗಿರುವುದರಲ್ಲಿ ಯಾವುದೇ ಸಂದೇಹವಿಲ್ಲ.