ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಮಾರ್ಚ್ 9 ರಂದು ದುಬೈ ಇಂಟರ್ನ್ಯಾಶನಲ್ಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಬಹುನಿರೀಕ್ಷಿತ ಫೈನಲ್ ಪಂದ್ಯಾಟಕ್ಕೆ ಮಳೆ ಅಡ್ಡಿಯಾದರೆ, ಮಾರ್ಚ್ 10 ರಂದು ಮೀಸಲು ದಿನವನ್ನು ನಿಗದಿಪಡಿಸಲಾಗಿದೆ.ಪಂದ್ಯಾವಳಿಯ ನಿಯಮಗಳ ಪ್ರಕಾರ, ಮಳೆ ಅಥವಾ ಇತರ ಅನಿರೀಕ್ಷಿತ ಸಂದರ್ಭಗಳಿಂದಾಗಿ ಆಟವನ್ನು ಮೂಲ ದಿನಾಂಕದಂದು ಪೂರ್ಣಗೊಳಿಸಲಾಗದಿದ್ದರೆ, ಈ ಬ್ಯಾಕಪ್ ದಿನದಂದು ಅದು ಮತ್ತೇ ಪುನರಾರಂಭಗೊಳ್ಳಲಿದೆ.ಇನ್ನೂ ಈ ಹಿಂದೆ ನಡೆದ 8 ಆವೃತ್ತಿಗಳ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಒಂದು
ಬೆಂಗಳೂರು: ಮೇಕೆದಾಟು ಹೋರಾಟಕ್ಕೆ ಬಾರದ ಸ್ಯಾಂಡಲ್ ವುಡ್ ನಟರ ನಟ್ಟು ಬೋಲ್ಟ್ ಸರಿ ಮಾಡ್ತೀನಿ ಎಂದಿದ್ದ ಡಿಕೆ ಶಿವಕುಮಾರ್ ಹೇಳಿಕೆಯನ್ನು ಇಂದು ನಟಿ ರಮ್ಯಾ ಒಂದೆಡೆ ಖಂಡಿಸಿ ಮತ್ತೊಂದೆಡೆ ಸಮರ್ಥಿಸಿಕೊಂಡಿದ್ದಾರೆ. ಡಿಕೆ ಶಿವಕುಮಾರ್ ನಟ್ಟು ಬೋಲ್ಟ್ ಹೇಳಿಕೆಗೆ ಸ್ಯಾಂಡಲ್ ವುಡ್ ನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ನಟಿ ರಮ್ಯಾ ಮಾಧ್ಯಮಗಳಿಗೆ ಡಿಕೆಶಿ ಹೇಳಿದ್ದು ಸರಿ ಎಂದಿದ್ದರು. ಬಳಿಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೇ ಕೆಲವರಿಗೆ ಹೊರಗೆ ಬಹಿರಂಗವಾಗಿ ಹೇಳಿಕೆ ನೀಡಲು ಭಯವಿರುತ್ತದೆ. ಹೀಗಾಗಿ ಆ ರೀತಿ ಹೇಳಿಕೆ ನೀಡಬಾರದಿತ್ತು ಎಂದರು.
ಅಂತರಾಷ್ಟ್ರೀಯ ಮಹಿಳಾ ದಿನಕ್ಕೆ ಇನ್ನೇನು ಎರಡೇ ದಿನಗಗಳು ಬಾಕಿಯಿದೆ. ನಿಮ್ಮ ಜೀವನದಲ್ಲಿ ಮಹಿಳೆಯರನ್ನು ಎಷ್ಟು ಕಾಳಜಿ ಮಾಡುತ್ತೀರಿ ಎಂಬುದನ್ನು ತೋರಿಸಲು ಇದು ಒಳ್ಳೆಯ ಅವಕಾಶ. ಜೀವನದ ಪ್ರಮುಖ ಘಟ್ಟಗಳಲ್ಲಿ ಬರುವ ತಾಯಿ, ಸಹೋದರಿ, ಹೆಂಡತಿ ಮತ್ತು ಸ್ನೇಹಿತೆಯರಿಗೆ ವಿಶೇಷ ಗಿಫ್ಟ್ ನೀಡಿ ಅವರನ್ನು ಖುಷಿಯಾಗಿರಿಸಲು ಇದು ಒಳ್ಳೆಯ ಅವಕಾಶ. ನಿಮ್ಮ ಜೀವನದಲ್ಲಿ ಮಹಿಳೆಯರನ್ನು ಆಚರಿಸಲು ನಿಮಗೆ ಸಹಾಯ ಮಾಡಲು ಕೆಲವು ಉಡುಗೊರೆ ಕಲ್ಪನೆಗಳು ಇಲ್ಲಿವೆ: ವೈಯಕ್ತಿಕಗೊಳಿಸಿದ ಆಭರಣಗಳು: ಅವಳ ಹೆಸರಿನ ಮೊದಲಕ್ಷರವನ್ನು ಬಳಸಿ ಕಸ್ಟಮ್-ನಿರ್ಮಿತ ಆಭರಣವು ಸುಂದರವಾದ ಮತ್ತು ಅರ್ಥಪೂರ್ಣ ಉಡುಗೊರೆಯಾಗಿ ನೀಡಬಹುದು.
ಬೆಂಗಳೂರು: ವಿಧಾನಸಭೆಯಲ್ಲಿ ಶಾಸಕರಿಗೆ ನಿದ್ರೆ ಮಾಡಲು ಚೇರ್ ವ್ಯವಸ್ಥೆ ಆಗಿದೆ. ಇದೀಗ ಸ್ಪೀಕರ್ ಯುಟಿ ಖಾದರ್ ಶಾಸಕರಿಗೆ ಟೀ, ಕಾಫಿ ಮತ್ತು ಹರಟೆ ಹೊಡೆಯಲು ಕ್ಲಬ್ ಸ್ಥಾಪಿಸುವ ಬಗ್ಗೆ ಮಾತನಾಡಿದ್ದಾರೆ. ಶಾಸಕರಿಗೆ ಮಧ್ಯಾಹ್ನ ಕೆಲವು ಹೊತ್ತು ನಿದ್ರೆ ಮಾಡಲು ಅನುಕೂಲವಾಗುವಂತೆ ಸ್ಪೀಕರ್ ಈಗಾಗಲೇ ಆರಾಮ ಚೇರ್ ಗಳ ವ್ಯವಸ್ಥೆ ಮಾಡಿದ್ದಾರೆ. ಇದಕ್ಕೆ ಟೀಕೆ ವ್ಯಕ್ತವಾದ ಬೆನ್ನಲ್ಲೇ ಇಂದು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಇದು ಕೆಲವು ಕಂಪನಿಗಳ ಡೆಮೋ ಕುರ್ಚಿಯಷ್ಟೇ ಹೊರತು ದುಡ್ಡು ಕೊಟ್ಟು ತಂದಿದ್ದಲ್ಲ ಎಂದಿದ್ದರು.
ಮುಂಬೈ: ಭಾರತ ತಂಡದ ವೇಗಿ ಮೊಹಮ್ಮದ್ ಶಮಿ ಅವರು ದೇಶಕ್ಕಾಗಿ ತಮ್ಮ ರಂಜಾನ್ ಉಪವಾಸ ಮುರಿದಿದ್ದಾರೆ. ಮೊಹಮ್ಮದ್ ಶಮಿ ನಡಗೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ, ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷರು ಶಮಿ ನಡೆಯನ್ನು ಟೀಕಿಸುವ ಭರದಲ್ಲಿ ವಿವಾದ ಸೃಷ್ಟಿಸಿದ್ದಾರೆ.ರಂಜಾನ್ ಸಮಯದಲ್ಲಿ ರೋಜಾ ಆಚರಿಸದ ಭಾರತೀಯ ಕ್ರಿಕೆಟರ್ ಮೊಹಮ್ಮದ್ ಶಮಿಯನ್ನು ಅಪರಾಧಿ ಎಂದು ಕರೆಯುವ ಮೂಲಕ ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ವಿವಾದವನ್ನು ಹುಟ್ಟುಹಾಕಿದ್ದಾರೆ.ರೋಜಾ ಇಟ್ಟುಕೊಳ್ಳದೆ ಅವರು (ಮೊಹಮ್ಮದ್ ಶಮಿ) ಅಪರಾಧ ಮಾಡಿದ್ದಾರೆ, ಅವರು ಇದನ್ನು ಮಾಡಬಾರದು. ಶರಿಯತ್ ದೃಷ್ಟಿಯಲ್ಲಿ ಅವರು ಅಪರಾಧಿ, ಅವರು ದೇವರಿಗೆ ಉತ್ತರಿಸಬೇಕಾಗುತ್ತದೆ ಎಂದು ಮೌಲಾನಾ ಬರೇಲ್ವಿ ಹೇಳಿದ್ದಾರೆ.
ಕಲಬುರಗಿ: ಪಿಯು ವಿದ್ಯಾರ್ಥಿನಿ ಬದಲು ತಾನೇ ರಾಜ್ಯಶಾಸ್ತ್ರ ಪರೀಕ್ಷೆ ಬರೆದು ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಸಿಕ್ಕಿಬಿದಿದ್ದಾರೆ. ವಿಶೇಷವೆಂದರೆ ಮಲ್ಲಿಕಾರ್ಜುನ ಖರ್ಗೆ ಒಡೆತನದ ಮಿಲಿಂದ್ ಕಾಲೇಜಿನಲ್ಲಿ ಘಟನೆ ನಡೆದಿದೆ. ದ್ವಿತೀಯ ಪಿಯು ಪರೀಕ್ಷೆ ಈಗ ಜಾರಿಯಲ್ಲಿದೆ. ನಿನ್ನೆ ರಾಜ್ಯಶಾಸ್ತ್ರ ಪರೀಕ್ಷೆ ನಡೆಯುತ್ತಿತ್ತು. ಮಿಲಿಂದ್ ಕಾಲೇಜಿನಲ್ಲಿ ಅರ್ಚನಾ ಎನ್ನುವ ವಿದ್ಯಾರ್ಥಿನಿ ಬದಲಿಗೆ ಕಾನೂನು ಪದವೀಧರೆಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣ ಪಾಟೀಲ್ ಎನ್ನುವವರು ಪರೀಕ್ಷೆ ಬರೆದಿದ್ದಾರೆ. ವಿಶೇಷವೆಂದರೆ ದಲಿತ ನಾಯಕ ಎಂಬ ಖ್ಯಾತಿ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಒಡೆತನದ ಕಾಲೇಜಿನಲ್ಲಿ ನಡೆದಿರುವ ಈ ಅಕ್ರಮವನ್ನು ದಲಿತ ಸೇನೆಯೇ ಬಯಲಿಗೆಳೆದಿದೆ.
ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವಿವಾಹ ಇಂದು ಬೆಂಗಳೂರಿನಲ್ಲಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಬಂದಿದ್ದಾರೆ. ಬಿಜೆಪಿ ಸಂಸದರಾಗಿರುವ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ವಿವಾಹವಾಗುತ್ತಿರುವ ಸುದ್ದಿ ಎರಡು ತಿಂಗಳ ಹಿಂದೆ ಬಹಿರಂಗವಾಗಿತ್ತು. ಅದಾದ ಬಳಿಕ ಇಬ್ಬರೂ ಜೊತೆಯಾಗಿರುವ ಫೋಟೋ, ವಿಡಿಯೋಗಳೂ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇಂದು ಬೆಂಗಳೂರಿನ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್ ನಲ್ಲಿ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಶಿವಶ್ರೀ ಮೂಲತಃ ಚೆನ್ನೈಯವರಾಗಿದ್ದು, ಗಾಯಕಿ, ನೃತ್ಯಪಟು ಮತ್ತು ಆಯುರ್ವೇದ ವೈದ್ಯ ಪದವೀಧರೆ ಕೂಡಾ.
ನವದೆಹಲಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ಅವರ ಬಂಧನದ ಬೆನ್ನಲ್ಲೇ ಎಸ್ಡಿಪಿಐ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ.ನಿಷೇಧಿತ ಪಿಎಫ್ಐ ನಂಟು ಹೊಂದಿರುವ ಎಸ್ಡಿಪಿಐ ವಿರುದ್ದ ಇರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ 12ಕ್ಕೂ ಅಧಿಕ ಕಡೆಗಳಲ್ಲಿ ಇಡಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.ಉಗ್ರ ಚಟುವಟಿಕೆ ಸೇರಿ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ 2022ರ ಸೆಪ್ಟೆಂಬರ್ನಲ್ಲಿ ಕೇಂದ್ರ ಸರ್ಕಾರವು ಪಿಎಫ್ಐ ಅನ್ನು ನಿಷೇಧಿಸಿತ್ತು. 2009ರಲ್ಲಿ ಎಸ್ಡಿಪಿಐ ಸ್ಥಾಪನೆಯಾಗಿತ್ತು. ಇದು ದೆಹಲಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಇದು ಪಿಎಫ್ಐನ ರಾಜಕೀಯ ಪಕ್ಷ ಎಂದು ಹೇಳಲಾಗುತ್ತದೆ.
ಬೆಂಗಳೂರು: ವಿಧಾನಸಭೆಯಲ್ಲಿ ಶಾಸಕರು ಮಧ್ಯಾಹ್ನದ ವೇಳೆ ಸಣ್ಣ ನಿದ್ರೆ ಮಾಡಲು ಅನುಕೂಲವಾಗುವಂತಹ ಚೇರ್ ವಿಚಾರವಾಗಿ ಎದ್ದಿರುವ ವಿವಾದಗಳಿಗೆ ಸ್ಪಿಕರ್ ಯುಟಿ ಖಾದರ್ ಸ್ಪಷ್ಟನೆ ನೀಡಿದ್ದು ಇದಕ್ಕೆ ಯಾವುದೇ ಖರ್ಚು ಮಾಡಿಲ್ಲ ಎಂದಿದ್ದಾರೆ. ಒಂದೆಡೆ ರಾಜ್ಯದಲ್ಲಿ ಗೃಹಲಕ್ಷ್ಮಿ ಹಣ, ಅನ್ನಭಾಗ್ಯ ಹಣ ಬಂದಿಲ್ಲ ಎಂಬ ಆಕ್ರೋಶವಿದೆ. ಇನ್ನೊಂದೆಡೆ ಯೋಜನೆಗಳಿಗೆ ಅನುದಾನ ಸಿಗುತ್ತಿಲ್ಲ ಎಂಬ ಆಕ್ರೋಶವಿದೆ. ಈ ನಡುವೆ ಶಾಸಕರಿಗಾಗಿ ಸ್ಪೀಕರ್ ಐಷಾರಾಮಿ ಚೇರ್ ತರಿಸಿದ್ದು ಸರಿಯಾ ಎಂದು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು.
ದುಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಗೆಲ್ಲಲು ವಿರಾಟ್ ಕೊಹ್ಲಿ ಬ್ಯಾಟಿಂಗ್ ಕಾರಣವಾಗಿತ್ತು. ಆದರೆ ಅವರು ಮಾಡಿದ ಒಂದು ತಪ್ಪಿನಿಂದ ವಿಲನ್ ಕೂಡಾ ಆಗ್ತಿದ್ದರು. ಹೇಗೆ ಇಲ್ಲಿದೆ ನೋಡಿ ವಿವರ. ತಂಡ ಗೆಲುವಿನ ಸನಿಹದಲ್ಲಿದ್ದಾಗ ಕೊಹ್ಲಿ ಬೇಡದ ಹೊಡೆತಕ್ಕೆ ಕೈ ಹಾಕಿ ಔಟಾದರು. ತಂಡದ ಪ್ಲ್ಯಾನ್ ಪ್ರಕಾರ ಕೆಎಲ್ ರಾಹುಲ್ ದೊಡ್ಡ ಹೊಡೆತಕ್ಕೆ ಕೈ ಹಾಕಬೇಕಿತ್ತು. ಕೊಹ್ಲಿ ಕೊನೆಯ ತನಕ ಕ್ರೀಸ್ ನಲ್ಲಿರಬೇಕಿತ್ತು. ಆದರೆ ಕೊಹ್ಲಿ ಇಲ್ಲದ ಹೊಡೆತಕ್ಕೆ ಕೈ ಹಾಕಲು ಹೋಗಿ ಔಟಾದರು. ಈ ಪಂದ್ಯವನ್ನು ಭಾರತ ಗೆದ್ದಿರುವುದರಿಂದ ಕೊಹ್ಲಿ ಹೀರೋ ಆಗಿಯೇ ಉಳಿದುಕೊಂಡರು.
ಲಂಡನ್: ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮೇಲೆ ಲಂಡನ್ ನಲ್ಲಿ ಖಲಿಸ್ತಾನಿ ಉಗ್ರರು ದಾಳಿಗೆ ಯತ್ನಿಸಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಲಂಡನ್ ನಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕಾರ್ಯಕ್ರಮವೊಂದನ್ನು ಮುಗಿಸಿ ಹೊರಬರುವಾಗ ವ್ಯಕ್ತಿಯೊಬ್ಬ ಕಾರಿಗೆ ಅಡ್ಡ ಬಂದು ರಾಷ್ಟ್ರಧ್ವಜವನ್ನು ಹರಿದುಹಾಕುತ್ತಾನೆ. ಈತ ಖಲಿಸ್ತಾನಿ ಬೆಂಬಲಿಗ ಎನ್ನಲಾಗಿದೆ. ಇನ್ನೊಂದು ವಿಡಿಯೋದಲ್ಲಿ ಖಲಿಸ್ತಾನಿ ಉಗ್ರರು ತನ್ನ ಬಾವುಟ ಹಾರಿಸಿ ಖಲಿಸ್ತಾನಿ ಪರ ಘೋಷಣೆಗಳನ್ನು ಕೂಗುತ್ತಾರೆ. ಆದರೆ ಘಟನೆ ಬಗ್ಗೆ ಭಾರತ ಅಥವಾ ಬ್ರಿಟನ್ ನಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.
ಬೆಂಗಳೂರು: ಮಾರ್ಚ್ ಬಂತೆಂದರೆ ಮಕ್ಕಳಿಗೆ ಪರೀಕ್ಷಾ ಕಾಲ. ಇಲ್ಲೊಬ್ಬ ಬೀದಿ ಬದಿ ವ್ಯಾಪಾರಿ ಮಕ್ಕಳ ಪರೀಕ್ಷೆಗೆ ಜಾಗೃತಿ ಮೂಡಿಸುವ ವಿಡಿಯೋವೊಂದು ಈಗ ವೈರಲ್ ಆಗಿದೆ. ಬೀದಿ ಬದಿ ವ್ಯಾಪಾರಿಗಳು ಎಂದರೆ ಕೇವಲ ಹೊಟ್ಟೆ ಪಾಡಿಗಾಗಿ ವ್ಯಾಪಾರ ಮಾಡುವವರು, ಅವಿದ್ಯಾವಂತರು ಎಂದೇ ಎಲ್ಲರೂ ಅಂದುಕೊಳ್ಳುತ್ತಾರೆ. ಆದರೆ ಅವರಲ್ಲೂ ಕೆಲವರು ಓದಿನ ಬಗ್ಗೆ ವಿಶೇಷ ಗೌರವವಿಟ್ಟುಕೊಂಡಿರುತ್ತಾರೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ. ಬೀದಿ ಬದಿ ವ್ಯಾಪಾರಿಗಳು ಮೈಕ್ ಹಾಕಿಕೊಂಡು ತರಕಾರಿ ರೇಟ್ ಘೋಷಣೆ ಮಾಡುವುದು ಸಹಜ. ಆದರೆ ಈ ವ್ಯಕ್ತಿ ಅದೇ ಮೈಕ್ ನಲ್ಲಿ ವಿದ್ಯಾರ್ಥಿಗಳೇ ಪರೀಕ್ಷೆ ಬಂತು ಚೆನ್ನಾಗಿ ಓದಿ, ಒಳ್ಳೆ ಅಂಕ ಪಡೆದುಕೊಳ್ಳಿ ಎಂದು ಜಾಗೃತಿ ಮೂಡಿಸುತ್ತಿದ್ದಾನೆ.
ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ಬೆಲೆ ಏರಿಕೆ ಮಾಡಿದ್ದೇ ಮಾಡಿದ್ದು, ಈಗ ಬೆಂಗಳೂರಿನಲ್ಲಿ ವಾಯುಮಾಲಿನ್ಯ, ಟ್ರಾಫಿಕ್ ಹೆಚ್ಚಾಗಿದೆ ಎಂದು ವರದಿ ಬಂದಿದೆ. ಕಳೆದ ತಿಂಗಳಷ್ಟೇ ಏಕಾಏಕಿ ಮೆಟ್ರೋ ಪ್ರಯಾಣ ದರ ಏರಿಕೆಯಾಗುತ್ತದೆ. ಏಕಾಏಕಿ ಟಿಕೆಟ್ ದರ ದುಪ್ಪಟ್ಟಾಗಿದ್ದರಿಂದ ಮಧ್ಯಮ ವರ್ಗದ ಜನ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದರು. ಹಲವರು ನಿತ್ಯ ಅನಿವಾರ್ಯವಾಗಿ ಸಂಚರಿಸುವವರನ್ನು ಬಿಟ್ಟರೆ ಉಳಿದವರು ಮೆಟ್ರೋಗೆ ಗುಡ್ ಬೈ ಹೇಳಿದ್ದಾರೆ. ಇತ್ತೀಚೆಗೆ ಮೆಟ್ರೋ ನಿಲ್ದಾಣಗಳಲ್ಲಿ ಮೊದಲಿನಷ್ಟು ಪ್ರಯಾಣಿಕರಿಲ್ಲ. ಹಲವು ಜನ ಮೆಟ್ರೋ ಬಳಸುವುದನ್ನೇ ಬಿಟ್ಟಿದ್ದಾರೆ. ಮೆಟ್ರೋ ಪ್ರಯಾಣ ದರ ಏರಿಕೆಯಾಗಿರುವುದರಿಂದ ಅನೇಕರು ಖಾಸಗಿ ವಾಹನ, ಕ್ಯಾಬ್ ಇಲ್ಲವೇ ಬಸ್ ಕಡೆಗೆ ಮುಖ ಮಾಡಿದ್ದಾರೆ.
ಬೆಂಗಳೂರು: ಸತತ ಬಿಸಿಲಿನಿಂದ ಕಂಗೆಟ್ಟಿರುವ ಜನ ಮಳೆ ಯಾವಾಗ ಎಂದು ಎದಿರು ನೋಡುತ್ತಿದ್ದಾರೆ. ದೇಶದ ಹವಾಮಾನ ವರದಿ ನೋಡುವುದಾದರೆ ಮಾರ್ಚ್ ನಲ್ಲಿ ದೇಶದ ಈ ಭಾಗಗಳಿಗೆ ಬಿರುಗಾಳಿ ಸಹಿತ ಮಳೆಯ ಅಬ್ಬರವಿರಲಿದೆ ಎಂದು ವರದಿಗಳು ಹೇಳುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆಯಿಂದಲೇ ಹವಾಮಾನದಲ್ಲಿ ವಿಪರೀತ ಬದಲಾವಣೆಯಾಗುತ್ತಿದೆ. ಒಂದೆಡೆ ಸೆಖೆಯಾಗಿದ್ದರೆ ರಾತ್ರಿ ವಿಪರೀತ ಚಳಿ ಕೂಡಾ ಇದೆ. ಈ ಹವಾಮಾನ ವೈಪರೀತ್ಯ ಜನರನ್ನು ಕಂಗಾಲು ಮಾಡಿದೆ. ಆದರೆ ಇಂದಿನಿಂದ ತಾಪಮಾನ ಸಹಜ ಸ್ಥಿತಿಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಬಗ್ಗೆ ಒಂದೊಂದೇ ಶಾಕಿಂಗ್ ವಿಚಾರಗಳು ಬಯಲಾಗುತ್ತಿದೆ. ಐಪಿಎಲ್ ಅಧಿಕಾರಿ, ಡಿಜಿಪಿ ಕೆ ರಾಮಚಂದ್ರ ರಾವ್ ಅವರ ಮಗಳಾಗಿ ರನ್ಯಾ ಚಿನ್ನ ಕಳ್ಳ ಸಾಗಣಿಕೆ ದಂಧೆಗೆ ಬಿದ್ದಿದ್ದೇ ಅಚ್ಚರಿ. ಪ್ರತೀ ಬಾರಿ ದುಬೈಗೆ ಹೋದರೆ ಆಕೆಗೆ 12 ಲಕ್ಷ ಕಮಾಯಿ ಸಿಗುತ್ತಿತ್ತು ಎಂಬ ಶಾಕಿಂಗ್ ವಿಚಾರ ಬಯಲಾಗಿದೆ. ರನ್ಯಾ ಕೇವಲ ನಟಿ ಮಾತ್ರವಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಒಬ್ಬ ಪೊಲೀಸ್ ಅಧಿಕಾರಿ ಮಗಳು. ಆದರೆ ಆಕೆಯನ್ನೇ ಕಳ್ಳಸಾಗಣೆ ಮಾಡಲು ಬಳಸಿದ್ದರ ಹಿಂದೆಯೂ ಉದ್ದೇಶವಿದೆ. ಪೊಲೀಸ್ ಅಧಿಕಾರಿ ಮಗಳು, ನಟಿ ಬೇರೆ ಯಾರಿಗೂ ಗೊತ್ತಾಗಲ್ಲ ಎನ್ನುವುದು ಪಾಪಿಗಳ ಉದ್ದೇಶವಾಗಿತ್ತು.
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ವಿಪರೀತ ಬಿಸಿಲಿನ ವಾತಾವರಣವಿದೆ. ಇದರ ನಡುವೆ ಜನರಿಗೆ ಮಳೆಯ ಗುಡ್ ನ್ಯೂಸ್ ಸಿಕ್ಕಿದೆ. ಈ ದಿನ ಮಳೆಯಾಗುವುದು ಖಚಿತ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಹಾಗಿದ್ದರೆ ಎಲ್ಲೆಲ್ಲಿ ಮಳೆಯಾಗಲಿದೆ ಇಲ್ಲಿದೆ ವಿವರ.ರಾಜ್ಯದಲ್ಲಿ ಜನ ಈಗ ಸುಡು ಬಿಸಿಲಿನಿಂದ ತತ್ತರಿಸಿದ್ದಾರೆ. ಒಮ್ಮೆ ಮಳೆ ಬಂದರೆ ಸಾಕು ಎನ್ನುವಂತಾಗಿದೆ ಪರಿಸ್ಥಿತಿ. ಈಗಲೇ ಮೇ ತಿಂಗಳ ತಾಪಮಾನ ಕಂಡುಬರುತ್ತಿದೆ. ಇದರ ನಡುವೆ ಹವಾಮಾನ ವರದಿಗಳು ಸದ್ಯದಲ್ಲೇ ಮಳೆಯಿದೆ ಎನ್ನುತ್ತಿದೆ.ಹವಾಮಾನ ವರದಿ ಪ್ರಕಾರ ಮುಂದಿನ ವಾರ ಅಂದರೆ ಮಂಗಳವಾರ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ರಾಘವೇಂದ್ರ ಸ್ವಾಮಿಗಳ ಕುರಿತಾದ ಅಪ್ಪಣಾಚಾರ್ಯ ವಿರಚಿತ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ. ಇದನ್ನು ಗುರುವಾರಗಳಂದು ತಪ್ಪದೇ ಓದಿ. ಇದರಿಂದ ನಿಮಗೆ ಸಕಲವೂ ಒಳಿತಾಗುವುದು. ಶ್ರೀಪೂರ್ಣಬೋಧ-ಗುರು-ತೀರ್ಥ-ಪಯೋಽಬ್ಧಿ-ಪಾರಾಕಾಮಾರಿ-ಮಾಽಕ್ಷ-ವಿಷಮಾಕ್ಷ-ಶಿರಃ ಸ್ಪೃಶಂತೀ |ಪೂರ್ವೋತ್ತರಾಮಿತ-ತರಂಗ-ಚರತ್-ಸು-ಹಂಸಾದೇವಾಲಿ-ಸೇವಿತ-ಪರಾಂಘ್ರಿ-ಪಯೋಜ-ಲಗ್ನಾ || ೧ ||ಜೀವೇಶ-ಭೇದ-ಗುಣ-ಪೂರ್ತಿ-ಜಗತ್-ಸು-ಸತ್ತ್ವ-ನೀಚೋಚ್ಚ-ಭಾವ-ಮುಖ-ನಕ್ರ-ಗಣೈಃ ಸಮೇತಾ |ದುರ್ವಾದ್ಯಜಾ-ಪತಿ-ಗಿಲೈರ್ಗುರು-ರಾಘವೇಂದ್ರ-ವಾಗ್-ದೇವತಾ-ಸರಿದಮುಂ ವಿಮಲೀಕರೋತು || ೨ ||ಶ್ರೀ-ರಾಘವೇಂದ್ರಃ ಸಕಲ-ಪ್ರದಾತಾಸ್ವ-ಪಾದ-ಕಂಜ-ದ್ವಯ-ಭಕ್ತಿಮದ್ಭ್ಯಃ |ಅಘಾದ್ರಿ-ಸಂಭೇದನ-ದೃಷ್ಟಿ-ವಜ್ರಃಕ್ಷಮಾ-ಸುರೇಂದ್ರೋಽವತು ಮಾಂ ಸದಾಽಯಮ್ || ೩ || ಶ್ರೀ-ರಾಘವೇಂದ್ರೋ ಹರಿ-ಪಾದ-ಕಂಜ-ನಿಷೇವಣಾಲ್ಲಬ್ಧ-ಸಮಸ್ತ-ಸಂಪತ್ |ದೇವ-ಸ್ವಭಾವೋ ದಿವಿಜ-ದ್ರುಮೋಽಯ-ಮಿಷ್ಟಪ್ರದೋ ಮೇ ಸತತಂ ಸ ಭೂಯಾತ್ || ೪ ||ಭವ್ಯ-ಸ್ವರೂಪೋ ಭವ-ದುಃಖ-ತೂಲ-ಸಂಘಾಗ್ನಿ-ಚರ್ಯಃ ಸುಖ-ಧೈರ್ಯ-ಶಾಲೀ |ಸಮಸ್ತ-ದುಷ್ಟ-ಗ್ರಹ-ನಿಗ್ರಹೇಶೋದುರತ್ಯಯೋಪಪ್ಲವ-ಸಿಂಧು-ಸೇತುಃ || ೫ ||ನಿರಸ್ತ-ದೋಷೋ ನಿರವದ್ಯ-ವೇಷಃಪ್ರತ್ಯರ್ಥಿ-ಮೂಕತ್ವ-ನಿದಾನ-ಭಾಷಃ |ವಿದ್ವತ್-ಪರಿಜ್ಞೇಯ-ಮಹಾ-ವಿಶೇಷೋವಾಗ್-ವೈಖರೀ-ನಿರ್ಜಿತ-ಭವ್ಯ-ಶೇಷಃ || ೬ ||ಸಂತಾನ-ಸಂಪತ್-ಪರಿಶುದ್ಧ-ಭಕ್ತಿ-ವಿಜ್ಞಾನ-ವಾಗ್-ದೇಹ-ಸು-ಪಾಟವಾದೀನ್ |ದತ್ವಾ ಶರೀರೋತ್ಥ-ಸಮಸ್ತ-ದೋಷಾನ್ಹತ್ವಾ ಸ ನೋಽವ್ಯಾದ್ ಗುರು-ರಾಘವೇಂದ್ರಃ || ೭ ||
ಬೆಂಗಳೂರು: ನಿಮ್ಮ ಇಂದಿನ ಭವಿಷ್ಯ, ರಾಶಿ ಫಲ ಹೇಗಿದೆ ಎಂದು ತಿಳಿದುಕೊಳ್ಳಿ.ಮೇಷ: ಕುಟುಂಬದ ಬಗ್ಗೆ ಚಿಂತೆ ಇರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಕಾನೂನು ಅಡೆತಡೆಗಳು ನಿವಾರಣೆಯಾಗಲಿವೆ. ವ್ಯಾಪಾರ ಚೆನ್ನಾಗಿ ನಡೆಯುತ್ತದೆ. ಸುಸ್ತು ಇರುತ್ತದೆ. ತಂದೆಯ ಆರೋಗ್ಯ ತೃಪ್ತಿ ನೀಡಲಿದೆ. ಅಹಂಕಾರದ ಭಾವನೆಗಳು ನಿಮ್ಮ ಮನಸ್ಸಿನಲ್ಲಿ ಬರಲು ಬಿಡಬೇಡಿ. ವ್ಯಾಪಾರದಲ್ಲಿ ಹೊಸ ಯೋಜನೆಗಳಿಂದ ಲಾಭವಿದೆ. ಹಣಕಾಸಿನ ಪರಿಸ್ಥಿತಿಯು ತೃಪ್ತಿಕರವಾಗಿರುತ್ತದೆ.ವೃಷಭ: ವಿವಿಧ ಮೂಲಗಳಿಂದ ಆದಾಯವಿರುತ್ತದೆ. ಭೂಮಿ ಮತ್ತು ಕಟ್ಟಡಕ್ಕೆ ಸಂಬಂಧಿಸಿದ ಯೋಜನೆ ರೂಪಿಸಲಾಗುವುದು. ಉದ್ಯೋಗ ಸಿಗಲಿದೆ. ಕೆಲಸ ಹೆಚ್ಚಲಿದೆ. ಯಾವುದೇ ಆತುರ ಬೇಡ. ಉದ್ಯೋಗದಲ್ಲಿ ಸ್ವಯಂಪ್ರೇರಿತ ವರ್ಗಾವಣೆ ಮತ್ತು ಬಡ್ತಿಯ ಸಾಧ್ಯತೆಗಳಿವೆ.
ಲಾಹೋರ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಎರಡನೇ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವು 50 ರನ್ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತು.ದುಬೈನಲ್ಲಿ ಭಾನುವಾರ ನಡೆಯುವ ಫೈನಲ್ ಹಣಾಹಣಿಯಲ್ಲಿ ನ್ಯೂಜಿಲೆಂಡ್ ತಂಡವು ಭಾರತ ತಂಡವನ್ನು ಎದುರಿಸಲಿದೆ. ಭಾರತ ಸತತ ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿದೆ. 2002 ಮತ್ತು 2013ರಲ್ಲಿ ಭಾರತ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತ್ತು.ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡವು ರಚಿನ್ ರವೀಂದ್ರ (108, 101ಎ) ಮತ್ತು ಕೇನ್ ವಿಲಿಯಮ್ಸನ್ (102, 94ಎ) ಅವರ ಭರ್ಜತಿ ಶತಕಗಳ ನೆರವಿನಿಂದ ನ್ಯೂಜಿಲೆಂಡ್ 6 ವಿಕೆಟ್ಗೆ 362 ರನ್ಗಳ ಗಳಿಸಿತು.
ಆಂಧ್ರಪ್ರದೇಶ: ತೆಲುಗಿನ ಜನಪ್ರಿಯ ಗಾಯಕಿ ಕಲ್ಪನಾ ರಾಘವೇಂದ್ರ ಅವರು ಹೈದರಾಬಾದ್ನ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದ ನಂತರ ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹಗಳು ಹರಿದಾಡುತ್ತಿದೆ. ಖ್ಯಾತ ಗಾಯಕಿ ಆತ್ಮಹತ್ಯೆಗೆ ಯತ್ನಿಸಿದ್ದು ಎಂದು ಸುದ್ದಿ ಹರಿದಾಡಿತ್ತು.ಇದೀಗ ಕಲ್ಪನಾ ಅವರ ಮಗಳು ತಾಯಿಯ ಆತ್ಮಹತ್ಯೆ ಪ್ರಯತ್ನದ ವರದಿಗಳನ್ನು ತಳ್ಳಿಹಾಕಿದರುಮಾಧ್ಯಮದೊಂದಿಗಿನ ಸಂಭಾಷಣೆಯ ಸಮಯದಲ್ಲಿ, ಕಲ್ಪನಾ ಅವರ ಮಗಳು ತನ್ನ ತಾಯಿಯ ಆತ್ಮಹತ್ಯೆ ಪ್ರಯತ್ನದ ಹಕ್ಕುಗಳನ್ನು ನಿರಾಕರಿಸಿದರು ಮತ್ತು "ನನ್ನ ತಾಯಿಗೆ ಯಾವುದೇ ಸಮಸ್ಯೆಗಳಿಲ್ಲ. ಅವಳು ಸಂಪೂರ್ಣವಾಗಿ ಉತ್ತಮ, ಸಂತೋಷ ಮತ್ತು ಆರೋಗ್ಯಕರವಾಗಿದ್ದಾರೆ. ಆಕೆ ಗಾಯಕಿ ಅದರ ಜತೆಗೆ ಪಿಎಚ್ಡಿ ಮತ್ತು ಎಲ್ಎಲ್ಬಿಯನ್ನು ಸಹ ಮಾಡುತ್ತಿದ್ದಾರೆ. ಇದರಿಂದ ನಿದ್ರಾಹೀನತೆ
ಲಕ್ನೋ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಪ್ರಕರಣದ ವಿಚಾರಣೆಗೆ ಗೈರು ಹಾಜರಾಗಿದ್ದಕ್ಕಾಗಿ ಲಕ್ನೋ ಕೋರ್ಟ್ ಅವರಿಗೆ ₹200 ದಂಡ ವಿಧಿಸಿದೆ. 2022 ರಲ್ಲಿ ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ವಿರುದ್ಧ ಹೇಳಿಕೆಗೆ ಸಂಬಂಧ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ದೂರುದಾರರ ವಕೀಲರಿಗೆ ಹಣವನ್ನು ನೀಡುವಂತೆ ಸೂಚಿಸಿದೆ.ರಾಹುಲ್ ಸಾವರ್ಕರ್ ಅವರನ್ನು ‘ಬ್ರಿಟಿಷರ ಸೇವಕ’ ಎಂದು ಕರೆದಿದ್ದಾರೆ ಎಂದು ದೂರುದಾರ ನೃಪೇಂದ್ರ ಪಾಂಡೆ ಪರ ವಕೀಲರು ಹೇಳಿದ್ದಾರೆ. ರಾಹುಲ್ ಪತ್ರಿಕಾಗೋಷ್ಠಿಗೂ ಮುನ್ನ ಸಾವರ್ಕರ್ ಅವರನ್ನು ಕೀಳಾಗಿ ಹೇಳುವ ಕರಪತ್ರಗಳನ್ನು ಹಂಚಲಾಗಿತ್ತು ಎಂದು ಅವರು ಹೇಳಿದ್ದಾರೆ.
ನವದೆಹಲಿ: ಕಳೆದ ಐದು ಒಲಿಂಪಿಕ್ಸ್ಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಭಾರತದ ಟೇಬಲ್ ಟೆನಿಸ್ ದಿಗ್ಗಜ ಆಟಗಾರ ಅಚಂತ ಶರತ್ ಕಮಲ್ ಅವರು ದಿಢೀರ್ ನಿವೃತ್ತಿ ಪ್ರಕಟಿಸಿದ್ದಾರೆ.ಎರಡು ದಶಕಗಳಿಂದ ಟೇಬಲ್ ಟೆನಿಸ್ ಆಡುತ್ತಿರುವ ಅವರು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಏಳು ಚಿನ್ನ ಸೇರಿ 13 ಪದಕ ಗೆದ್ದಿರುವ ಅವರು ಏಷ್ಯನ್ ಕ್ರೀಡಾಕೂಟದಲ್ಲಿ ಎರಡು ಕಂಚಿನ ಪದಕಗಳನ್ನು ಜಯಿಸಿದ್ದಾರೆ.2024ರ ಅಥೆನ್ಸ್ ಒಲಿಂಪಿಕ್ಸ್ನಿಂದ ಹಿಡಿದ ಐದು ಒಲಿಂಪಿಕ್ಸ್ಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಶರತ್, ಕಳೆದ ವರ್ಷ ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಿದ್ದರು.
ಬೆಂಗಳೂರು: ದಕ್ಷಿಣ ಆಫ್ರಿಕಾ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಎರಡನೇ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ತಂಡ 362ರನ್ ಗಳಿಸಿದೆ. ಈ ರನ್ನಲ್ಲಿ ಬೆಂಗಳೂರು ಮೂಲದ ರಚಿನ್ ರವೀಂದ್ರ ಅವರ ಕೊಡುಗೆ ಅಪಾರವಾಗಿದೆ.ರಚಿನ್ ರವೀಂದ್ರ ಅವರು ಮಾಸ್ಟರ್ಫುಲ್ ಶತಕದೊಂದಿಗೆ ಹೊಸ ದಾಖಲೆಯನ್ನು ಬರೆದಿದ್ದಾರೆ. 101 ಎಸೆತಗಳಲ್ಲಿ 108 ರನ್ ಗಳಿಸಿ ICC ಟೂರ್ನಿಯಲ್ಲಿ ತಮ್ಮ ಮೊದಲ ಐದು ODI ಶತಕಗಳನ್ನು ಗಳಿಸಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.ರವೀಂದ್ರ ಅವರ 108 ಮತ್ತು ವಿಲಿಯಮ್ಸನ್ ಅವರ 102 ರನ್ಗಳ ನೆರವಿನಿಂದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ನಂತರ 362/6 ಕ್ಕೆ ಬೃಹತ್ ಮೊತ್ತವನ್ನು ಗಳಿಸಿತು.
ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ಸವಾಲಿನ ಮೊತ್ತವನ್ನು ಬೆನ್ನಟ್ಟುವ ಮೂಲಕ ಟೀಂ ಇಂಡಿಯಾ ಚಾಂಪಿಯನ್ ಟ್ರೋಫಿ 2025ರ ತಲುಪಿದೆ. ಈ ಮೂಲಕ ಭಾರತವು ಆಸ್ಟ್ರೇಲಿಯಾವನ್ನು ಸೋಲಿಸಿ, 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿತು.ಇಂದು ನ್ಯೂಜಿಲ್ಯಾಂಡ್ ಹಾಗೂ ಸೌತ್ ಆಫ್ರಿಕಾ ನಡುವೆ ಎರಡನೇ ಸೆಮಿಫೈನಲ್ ಪಂದ್ಯಾಟ ನಡೆಯುತ್ತಿದ್ದು, ಇದರಲ್ಲಿ ಜಯಶಾಲಿಯಾಗುವ ಟೀ, ಪೈನಲ್ನಲ್ಲಿ ಭಾರತವನ್ನು ಎದುರಿಸಲಿದೆ. ಇದೀಗ ರೋಮಾಂಚಕ ಕ್ಷಣಗಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.ಫೈನಲ್ ಪಂದ್ಯಾಟವು ಇದೇ 9ರಂದು ಐಕಾನಿಕ್ ದುಬೈ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ದಂಪತಿ ಕೆಲ ತಿಂಗಳ ಹಿಂದೆ ಗಂಡು ಮಗುವನ್ನು ಸ್ವಾಗತಿಸಿದ್ದರು. ಇದೀಗ ದಿವಂಗತ ಅಂಬರೀಶ್ ಮನೆಯಲ್ಲಿ ಮೊಮ್ಮಗನ ನಾಮಕರಣಕ್ಕೆ ಭಾರೀ ಸಿದ್ದತೆ ನಡೆಯುತ್ತಿದೆ.ಇನ್ನೂ ಅಂಬರೀಶ್ ಅವರಿಗೆ ನಟ ಯಶ್ ಹಾಗೂ ರಾಧಿಕಾ ದಂಪತಿ ಮೇಲೆ ವಿಶೇಷ ಪ್ರೀತಿ. ಇವರಿಬ್ಬರ ಎಂಗೇಜ್ಮೆಂಟ್ನಿಂದ ಹಿಡಿದು ಎಲ್ಲ ಸಮಾರಂಭಗಳಲ್ಲೂ ಅವರು ಭಾಗಿಯಾಗುತ್ತಿದ್ದರು. ಇನ್ನೂ ಯಶ್ಗೆ ಹೆಣ್ಣು ಮಗುವಾದಾಗ ಅಂಬರೀಶ್ ಅವರು ಗಿಫ್ಟ್ ಆಗಿ ತೊಟ್ಟಿಲು ನೀಡಿದ್ದರು.ಅದೇ ತೊಟ್ಟಿಲನ್ನೂ ತಮ್ಮ ಮೊಮ್ಮಕ್ಕಳಿಗೂ ಬಳಸಬೇಕೆಂದು ಅಂಬರೀಶ್ ಅವರು ಯಶ್ ಬಳಿ ಹೇಳಿದ್ದರಂತೆ. ಹೀಗಾಗಿ ಅಂಬಿ ಮೊಮ್ಮಗನಿಗೂ ಕಲಘಟಗಿ ತೊಟ್ಟಿಲು ರೆಡಿಯಾಗಿ ಬಂದಿದೆ. ಇದೇ
ಬೆಂಗಳೂರು: ಇತ್ತೀಚೆಗೆ ಬೆಂಗಳೂರು ಚಿತ್ರೋತ್ಸವಕ್ಕೆ ಗೈರಾದ ಸ್ಟಾರ್ ಕಲಾವಿದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಮುಂದೆ ಏನೇ ಕೆಲಸವಾಗಬೇಕಿದ್ರೂ ನಮ್ಮ ಬಳಿಗೆ ಬರಬೇಕಲ್ಲ. ಆಗ ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂದು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ನಿರ್ದೇಶಕ ತರುಣ್ ಸುಧೀರ್ ಚಿತ್ರತಂಡದ ಮೇಲೆ ಅರಣ್ಯ ಅಧಿಕಾರಿಗಳಿಂದ ದಾಳಿ ನಡೆಸಿದ್ದು, ಇದು ನಟ್ಟು ಬೋಲ್ಟ್ ಹೇಳಿಕೆಯ ಪರಿಣಾಮವೇ ಎಂದು ಅನುಮಾನ ಮೂಡಿದೆ. ನಿರ್ದೇಶಕ ತರುಣ್ ಸುಧೀರ್ ಈಗ ಹೊಸಬರ ತಂಡ ಕಟ್ಟಿಕೊಂಡು ಸಿನಿಮಾವೊಂದರ ಚಿತ್ರೀಕರಣ ನಡೆಸುತ್ತಿದ್ದಾರೆ. ರಕ್ಷಿತಾ ಪ್ರೇಮ್ ಸಹೋದರ ರಾಣಾ ಈ ಸಿನಿಮಾದ ನಾಯಕ. ಇದೀಗ ಸಿನಿಮಾ ಚಿತ್ರೀಕರಣ ಮಾಡುತ್ತಿದ್ದಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ.
ನವದೆಹಲಿ: ಮಂಗಳವಾರ ರಾತ್ರಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಫಿಟ್ನೆಸ್ ಕುರಿತು ತಮ್ಮ ಕಾಮೆಂಟ್ಗಳ ನಂತರ ರಾಜಕೀಯ ಗದ್ದಲ ಎಬ್ಬಿಸಿರುವ ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ ಅವರು ಪುರುಷರ ರಾಷ್ಟ್ರೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ.ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯವನ್ನು ಗೆದ್ದಿರುವುದಕ್ಕೆ ಇಂದು ನನಗೆ ತುಂಬಾ ಸಂತೋಷವಾಗಿದೆ. 84 ರನ್ ಗಳಿಸಿದ್ದಕ್ಕಾಗಿ ನಾನು ವಿರಾಟ್ ಕೊಹ್ಲಿಯನ್ನು ಅಭಿನಂದಿಸುತ್ತೇನೆ. ನಾನು ತುಂಬಾ ಉತ್ಸುಕನಾಗಿದ್ದೇನೆ ಮತ್ತು ಫೈನಲ್ಗಾಗಿ ಎದುರು ನೋಡುತ್ತಿದ್ದೇನೆ ಎಂದು ಮೊಹಮ್ಮದ್ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.ಕಾಂಗ್ರೆಸ್ ವಕ್ತಾರರು ವಿರಾಟ್ ಕೊಹ್ಲಿ ಅವರ ಪ್ರದರ್ಶನವನ್ನು ಉಲ್ಲೇಖಿಸಿ ಎಕ್ಸ್ನಲ್ಲಿ ಪೋಸ್ಟ್ ಮೂಲಕ
ಲಕ್ನೋ: ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಪಾನ್-ಮಸಾಲಾ ಉಗುಳುವ ಘಟನೆಯ ನಂತರ, ಸ್ಪೀಕರ್ ಸತೀಶ್ ಮಹಾನಾ ಬುಧವಾರ ವಿಧಾನಸಭಾ ಆವರಣದಲ್ಲಿ ಪಾನ್-ಮಸಾಲಾ ಮತ್ತು ಗುಟ್ಕಾ ಸೇವನೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.ಈ ಮೂಲಕ ವಿಧಾನಸೌಧದ ಆವರಣದಲ್ಲಿ ಪಾನ್ ಮಸಾಲ ಮತ್ತು ಗುಟ್ಕಾ ಸೇವ ನಿಷೇಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೂಚಿಸಲಾಗಿದೆ. ವಿಧಾನಸಭಾ ಆವರಣದಲ್ಲಿ ಯಾರಾದರೂ ಪಾನ್ ಮಸಾಲ ಮತ್ತು ಗುಟ್ಕಾ ಸೇವಿಸಿದರೆ 1000 ರೂಪಾಯಿ ದಂಡ ವಿಧಿಸಲಾಗುವುದು ಮತ್ತು ಅವರ ವಿರುದ್ಧ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಾ ತಿಳಿಸಿದ್ದಾರೆ.
ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ ಎಂದು ಬರೋಬ್ಬರಿ 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಬೆಂಗಳೂರು ಏರ್ಪೋರ್ಟ್ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಟಿ ರನ್ಯಾರಾವ್ ಬಗ್ಗೆ ರಾಜ್ಯ ಸರ್ಕಾರ ಪ್ರತಿಕ್ರಿಯಿಸಿದೆ.ದುಬೈನಿಂದ ಭಾರತಕ್ಕೆ 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ನಟಿಯನ್ನು ಅರೆಸ್ಟ್ ಮಾಡಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಶಾಸಕ ಮತ್ತು ಕರ್ನಾಟಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಪ್ರತಿಕ್ರಿಯಿಸಿ, ರನ್ಯಾಳನ್ನು ಇತರ ಆರೋಪಿಗಳಂತೆ ನಡೆಸಿಕೊಳ್ಳಲಾಗುತ್ತಿದೆ ಎಂದರು."ಅವಳು ಕಳ್ಳಸಾಗಾಣಿಕೆಯಲ್ಲಿ ತೊಡಗಿರುವ ಆರೋಪಿ, ಅವಳು ಡಿಜಿಪಿ, ಸಿಎಂ ಅಥವಾ ಪ್ರಧಾನಿ
ರಾಜ್ಯದ ಶಾಲಾ ಮಕ್ಕಳಿಗೆ ಇನ್ನೇನು ಫೈನಲ್ ಪರೀಕ್ಷೆಗಳು ಆರಂಭಗೊಳ್ಳಲಿದೆ. ಆದರೆ ಪೋಷಕರು ಆದಷ್ಟು ಬೇಗ ಪರೀಕ್ಷೆ ಮುಗಿದು, ಮಕ್ಕಳಿಗೆ ಬೇಸಿಗೆ ರಜೆ ಸಿಗಲಿ ಎಂದು ಕಾಯುತ್ತಿದ್ದಾರೆ.ಆದರೆ ಈ ಭಾರಿ ಅವಧಿಗೂ ಮುನ್ನಾ ಬೇಸಿಗೆ ರಜೆ ನೀಡುವ ಸಾಧ್ಯತೆಯಿದೆ. ರಾಜ್ಯದ ಎಲ್ಲೆಡೆ ಬಿಸಿಲ ತಾಪಕ್ಕೆ ಜನರು ಸುಸ್ತಾಗಿ ಹೋಗಿದ್ದಾರೆ. ಇದರಿಂದ ಜನರು ಮನೆಯಿಂದ ಹೊರ ಹೋಗಲು ಹಿಂದೆ ಮುಂದೇ ನೋಡ್ತಾ ಇದ್ದಾರೆ.ದಿನೇ ದಿನೇ ಬಿಸಿಲ ತಾಪ ಏರುತ್ತಿರುವುದರಿಂದ ಇದೀಗ ಶಾಲೆಗಳಲ್ಲಿ ಪರೀಕ್ಷೆ ಮುಗಿದ ಬೆನ್ನಲ್ಲೇ ಬೇಸಿಗೆ ರಜೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ.
ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಉಳ್ಳವರು ಸ್ವ ಇಚ್ಛೆಯಿಂದ ಬಿಟ್ಟುಕೊಡಲಿ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣಗೆ ನೆಟ್ಟಿಗರು ನೀವು ಸರ್ಕಾರೀ ಸವಲತ್ತುಗಳನ್ನು ಬಿಡ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳು ಇತ್ತೀಚೆಗೆ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸುತ್ತಿದೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಹಾಗಿದ್ದರೂ ಕೊಟ್ಟ ಮಾತಿನಂತೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡೇ ಹೋಗಬೇಕಾದ ಅನಿವಾರ್ಯತೆ ಸರ್ಕಾರದ್ದಾಗಿದೆ. ಈ ನಡುವೆ ಕೆಲವು ಶ್ರೀಮಂತರೂ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿ ಯೋಜನೆ ಲಾಭ ಪಡೆದುಕೊಳ್ಳುತ್ತಿರುವುದರ ಬಗ್ಗೆ ಎಚ್.ಎಂ. ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದು, ಉಳ್ಳವರು ಗ್ಯಾರಂಟಿಯನ್ನು ತಾವಾಗಿಯೇ ಬಿಟ್ಟುಕೊಡಲಿ ಎಂದಿದ್ದಾರೆ.
ಚಿತ್ರದುರ್ಗ: ತಾಲ್ಲೂಕಿನ ಸೀಬಾರ ಬಳಿ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಗಾತದಲ್ಲಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಇಂದು ನಡೆದಿದೆ.ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಇನ್ನೆರಡು ಲಾರಿಗಳು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಆಂಧ್ರಪ್ರದೇಶ, ತಾಡಪತ್ರಿ ಗ್ರಾಮದ ಶೇಖರ್ (55), ತಮಿಳುನಾಡು, ಧರ್ಮಪುರಿಯ ಪೆರಿಯಸ್ವಾಮಿ (50), ಉತ್ತರ ಪ್ರದೇಶ, ಅಲಿಗಡದ ಜಬರುದ್ದೀನ್ (52) ಎಂದು ಗುರುತಿಸಲಾಗಿದೆ.ಲಾರಿಗಳು ಮುಂಬೈನಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದವು. ಬಟ್ಟೆ ತುಂಬಿದ್ದ ಲಾರಿ ಟೈರ್
ನವದೆಹಲಿ: ದೆಹಲಿಯ ಬಜೆಟ್ ಜನರ ನಿರೀಕ್ಷೆಗಳನ್ನು ಪೂರೈಸುತ್ತದೆ. ಇದಕ್ಕಾಗಿ ನಾನು ಸ್ವತಃ ಮಹಿಳೆಯರ ಜತೆ, ಕುಟುಂಬಗಳು, ಯುವಕರು ಮತ್ತು ವಿವಿಧ ವಲಯಗಳ ವೃತ್ತಿಪರರನ್ನು ಭೇಟಿಯಾಗಲಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಭರವಸೆ ನೀಡಿದರು.ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಸಿಎಂ ರೇಖಾ ಗುಪ್ತಾ, "ನಾನು ಸ್ಲಂ ಪ್ರದೇಶಗಳಲ್ಲಿನ ಸಹೋದರಿಯರು ಮತ್ತು ಕುಟುಂಬಗಳನ್ನು ಭೇಟಿ ಮಾಡುತ್ತೇನೆ, ಈ ಸರ್ಕಾರದಿಂದ ಅವರಿಗಿರುವ ನಿರೀಕ್ಷೆಗಳ ಬಗ್ಗೆ ನಾನು ಅವರೊಂದಿಗೆ ಮಾತನಾಡುತ್ತೇನೆ. ವಿವಿಧ ವಲಯಗಳ ಯುವಕರು ಮತ್ತು ವೃತ್ತಿಪರರೊಂದಿಗೆ ಚರ್ಚೆ ನಡೆಸಲಾಗುವುದು. ದೆಹಲಿಯ ಬಜೆಟ್ ಜನರ ನಿರೀಕ್ಷೆಗಳನ್ನು ಈಡೇರಿಸುತ್ತದೆ" ಎಂದರು.
ಬೆಂಗಳೂರು: ಹಿಂದೂಗಳಲ್ಲಿ ಯಾರೂ ಬಡವರಿಲ್ವಾ, ಮುಸ್ಲಿಮರು ಮಾತ್ರ ಬಡವರಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರೀ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡುವ ವಿಚಾರ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಈಗ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸದನದಲ್ಲೂ ಹೋರಾಟದ ಎಚ್ಚರಿಕೆ ನೀಡಿದೆ. ಸರ್ಕಾರೀ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಗುತ್ತಿಗೆ ನೀಡಬೇಕು ಎಂಬ ವಿಚಾರ ಹಲವು ದಿನಗಳಿಂದ ಸಿಎಂ ಮುಂದೆ ಪ್ರಸ್ತಾವನೆ ಇಡಲಾಗಿತ್ತು.
ಬೆಳಗಾವಿ: ಮದ್ಯವ್ಯಸನಿಯಾದ ಪತಿಯ ಕಿರುಕುಳ ತಾಳಲಾರದೇ ಮೂವರು ಮಕ್ಕಳೊಂದಿಗೆ ತಾಯಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲ್ಲೂಕಿನಲ್ಲಿ ಚಿಂಚಲಿಯಲ್ಲಿ ಇಂದು ನಡೆದಿದೆ.ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಕ್ಕಳನ್ನು ಚಿಂಚಲಿ ಪಟ್ಟಣದ ನಿವಾಸಿಗಳಾದ ಶಾರದಾ ಅಶೋಕ ಡಾಲೆ(32), ಅಮೃತಾ(14), ಆದರ್ಶ(8) ಮತ್ತು ಅನುಷಾ (5) ಎಂದು ಗುರುತಿಸಲಾಗಿದೆ.ಎಲ್ಲರ ದೇಹಗಳನ್ನು ನೀರಿನಿಂದ ಹೊರ ತೆಗೆಯಲಾಗಿದೆ.ಶಾರದಾ ಅವರ ಪತಿ ಅಶೋಕ ಡಾಲೆ ನಿತ್ಯವೂ ಕುಡಿದು ಬಂದು ಪತ್ನಿ ಹಾಗೂ ಮಕ್ಕಳಿಗೆ ಕಿರುಕುಳ
ಬೆಂಗಳೂರು: ಜೀ ಕನ್ನಡದ ಟಾಪ್ ಸೀರಿಯಲ್ಗಳಲ್ಲಿ ಒಂದಾಗಿರುವ ಅಮೃತಧಾರೆ ವಿಭಿನ್ನ ಕಥಾಹಂದರದ ಮೂಲಕ ಉತ್ತಮ ಟಿಆರ್ಪಿಯೊಂದಿಗೆ ಪ್ರಸಾರವಾಗುತ್ತಿದೆ.ಉತ್ತಮ ಟಿಆರ್ಪಿಯೊಂದಿಗೆ ಸೀರಿಯಲ್ ಸಾಗುತ್ತಿದ್ದಾಗ ಇದೀಗ ಏಕಾಏಕಿ ಸೀರಿಯಲ್ನ ಭೂಮಿಕಾ ಪಾತ್ರಧಾರಿ ನಟಿ ಛಾಯಾಸಿಂಗ್ ಅವರು ಸೀರಿಯಲ್ ಬಿಡುತ್ತಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಇದಕ್ಕೆಲ್ಲ ಕಾರಣ ಸೀರಿಯಲ್ನಲ್ಲಿ ಆಗುತ್ತಿರುವ ಸದ್ಯದ ಸ್ಟೋರಿ. ಮಗು ಆಗಲ್ಲ ಎಂದು ಭೂಮಿ, ತನ್ನ ಗಂಡ ಗೌತಮ್ಗೆ ಎರಡನೇ ಮದುವೆ ಮಾಡಲು ಹೊರಟಿದ್ದಾಳೆ. ಗೌತಮ್ಗೆ ಎರಡನೇ ಮದುವೆಗೆ
ಲಾಹೋರ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಎರಡನೇ ಸೆಮಿಫೈನಲ್ನಲ್ಲಿ ಇಂದು ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟನರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ತಂಡವು ಮೊದಲು ಫೀಲ್ಡಿಂಗ್ಗೆ ಇಳಿಯಲಿದೆ. ಈ ಬಾರಿಯಾದರೂ ದಕ್ಷಿಣ ಆಫ್ರಿಕಾ ತಂಡವು ಚೋಕರ್ ಹಣೆಪಟ್ಟಿಯನ್ನು ಕಳೆದುಕೊಳ್ಳುತ್ತಾ ಎಂಬ ಪ್ರಶ್ನೆ ಮತ್ತೆ ಮೂಡಿದೆ.ಈ ಪಂದ್ಯವನ್ನು ಗೆಲ್ಲುವ ತಂಡವು ಭಾನುವಾರ ದುಬೈನಲ್ಲಿ ನಡೆಯುವ ಫೈನಲ್ನಲ್ಲಿ ಭಾರತ ತಂಡವನ್ನು ಎದುರಿಸಲಿದೆ. ಮಂಗಳವಾರ ನಡೆದ ಮೊದಲ ಸೆಮಿಫೈನಲ್ನಲ್ಲಿ ಭಾರತ ತಂಡವು 4 ವಿಕೆಟ್ಗಳಿಂದ ಆಸ್ಟ್ರೇಲಿಯಾ ತಂಡವನ್ನು ಫೈನಲ್ ಪ್ರವೇಶಿಸಿದೆ.
ಬೆಂಗಳೂರು: ಹಿರಿಯ ಕಲಾವಿದರಿಗೆ ಗೌರವವಿಲ್ಲ. ಸಾಧುಕೋಕಿಲಾ ಎದುರೇ ಸಿಕ್ಕರೂ ನಮ್ಮ ಮುಖ ನೋಡಲ್ಲ. ನಮಗೆ ಪಾಸ್ ಕೊಡಿ ಎಂದು ಕೇಳಿದರೂ ಬೆಂಗಳೂರು ಚಿತ್ರೋತ್ಸವಕ್ಕೆ ಆಹ್ವಾನ ಕೊಟ್ಟಿಲ್ಲ. ಕೊಡದೇ ಹೇಗೆ ಹೋಗೋದು ಎಂದು ಹಿರಿಯ ನಟ ಟೆನಿಸ್ ಕೃಷ್ಣ ಆರೋಪ ಮಾಡಿದ್ದಾರೆ. ಇಂದು ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಟೆನಿಸ್ ಕೃಷ್ಣ ‘ಹಿರಿಯ ಕಲಾವಿದರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕಿತ್ತು. ಅವರಿಗೆ ಯಾರು ಬೇಕಾದವರು ಇರ್ತಾರೋ ಅವರಿಗೆ ಕರೆದಿದ್ದಾರೆ. ನಾವು ಕನ್ನಡ ಪರ ಎಷ್ಟು ಹೋರಾಟಗಳಲ್ಲಿ ಭಾಗಿಯಾಗಿದ್ದಾನೆ ಎಂದು ತೋರಿಸಲಾ ನಿಮಗೆ?’ ಎಂದು ಹೇಳಿದ್ದಾರೆ. ‘ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಎನ್ನುತ್ತಾರೆ.
ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಕಾಯಕ ಸಮುದಾಯಗಳಿಗೆ ಆರ್ಥಿಕ ಶಕ್ತಿ ಕೊಟ್ಟು ಅವರನ್ನು ಮುಂದಕ್ಕೆ ತರುವ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸ್ಲಿಮರನ್ನು ಓಲೈಸಲು ಹೊರಟ ಕಾಂಗ್ರೆಸ್ ಸರಕಾರವು, ಇತರರೆಲ್ಲರಿಗೂ ಅನ್ಯಾಯ ಮಾಡಲು ಹೊರಟಿದೆ ಎಂದು ಆಕ್ಷೇಪಿಸಿದರು. ಸಿದ್ದರಾಮಯ್ಯನವರು ನಿಜವಾಗಿಯೂ ಅಹಿಂದ ನಾಯಕರೇ ಆಗಿದ್ದರೆ ಇಷ್ಟೊತ್ತಿಗೆ ಅನೇಕ ಹಿಂದುಳಿದ ಸಮಾಜಗಳಿಗೆ ಆರ್ಥಿಕ ಶಕ್ತಿ ತುಂಬಬೇಕಿತ್ತು. ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ನೀವು ಕೈ ಜೋಡಿಸಬೇಕಿತ್ತು ಎಂದು ತಿಳಿಸಿದರು. ಮಡಿವಾಳರು, ಸವಿತಾ ಸಮಾಜ ಸೇರಿ ಅನೇಕ ಕಾಯಕ ಸಮುದಾಯಗಳು ನಾಡಿನಲ್ಲಿವೆ ಎಂದರು.
ಬೆಂಗಳೂರು: ಬಿಎಸ್ ಯಡಿಯೂರಪ್ಪ ಸರ್ಕಾರದ ಕನಸಿನ ಕೂಸಾಗಿರುವ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಹಣ ಈಗ ಫಲಾನುಭವಿ ಹೆಣ್ಣುಮಕ್ಕಳ ಖಾತೆಗೆ ಸೇರುತ್ತಿದೆ. ಅಂದು ಭಾಗ್ಯಲಕ್ಷ್ಮಿ ಬಾಂಡ್ ಮಾಡಿಸಿಕೊಂಡಿದ್ದವರು ಈಗ ಹಣ ಕ್ಲೈಮ್ ಮಾಡುವುದು ಹೇಗೆ ಇಲ್ಲಿದೆ ವಿವರ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2006 ರಲ್ಲಿ ಆರಂಭವಾದ ಯೋಜನೆ ಭಾಗ್ಯಲಕ್ಷ್ಮಿ. ಅದರಂತೆ ಬಡತನ ರೇಖೆಗಿಂತ ಕೆಳಗಿರುವ ಹೆಣ್ಣು ಮಗು ಜನಿಸಿದ ತಕ್ಷಣ ಅದರ ಹೆಸರಿನಲ್ಲಿ 1 ಲಕ್ಷ ರೂ. ಬಾಂಡ್ ಮಾಡಿಸಲಾಗುತ್ತದೆ. ಇದು ಮಗುವಿಗೆ 18 ವರ್ಷ ವಯಸ್ಸಾದಾಗ ಕ್ಲೈಮ್ ಮಾಡಬಹುದಾಗಿದೆ.
ದುಬೈ: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಸಂದರ್ಭದಲ್ಲಿ ದಿನವಿಡೀ ಉಪವಾಸ ವ್ರತ ಮಾಡಬೇಕಾಗುತ್ತದೆ. ಆದರೆ ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ದೇಶಕ್ಕಾಗಿ ರಂಜಾನ್ ಉಪವಾಸವನ್ನೂ ಕೈ ಬಿಟ್ಟಿದ್ದಾರೆ. ಮೊಹಮ್ಮದ್ ಶಮಿ ಕೂಡಾ ಮೂಲತಃ ಇಸ್ಲಾಂ ಧರ್ಮದವರು. ತಮ್ಮ ಧಾರ್ಮಿಕ ಆಚರಣೆಗಳನ್ನು ಅವರು ತಪ್ಪದೇ ನಿರ್ವಹಿಸುತ್ತಾರೆ. ಆದರೆ ನಿನ್ನೆಯ ಪಂದ್ಯದಲ್ಲಿ ಅವರ ವರ್ತನೆಯೊಂದು ದೇಶಕ್ಕಾಗಿ ರಂಜಾನ್ ಉಪವಾಸವನ್ನೂ ಕೈ ಬಿಟ್ಟಿದ್ದಾರೆ ಎನ್ನುವುದು ಬಹಿರಂಗವಾಗಿದೆ. ರಂಜಾನ್ ಉಪವಾಸದ ಸಂದರ್ಭದಲ್ಲಿ ಪಾನೀಯವನ್ನೂ ಸೇರಿಸುವಂತಿಲ್ಲ.
ದುಬೈ: ಟೀಂ ಇಂಡಿಯಾ ವಿರುದ್ಧ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಸೋತ ಬೆನ್ನಲ್ಲೇ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ಕಂಡ ಅದ್ಭುತ ಆಟಗಾರ. ಅದರಲ್ಲೂ ಭಾರತದ ವಿರುದ್ಧ ಅವರು ಅತ್ಯುತ್ತಮ ಆಟವನ್ನೇ ಪ್ರದರ್ಶಿಸಿದ್ದರು. ನಿನ್ನೆಯೂ ಅವರು ಅರ್ಧಶತಕ ಸಿಡಿಸಿ ಮಿಂಚಿದ್ದರು. ಆದರೆ ಅವರಿಗೆ ನಿನ್ನೆಯ ಪಂದ್ಯವನ್ನು ಗೆಲ್ಲಲಾಗಲಿಲ್ಲ ಎನ್ನುವ ಕೊರಗಿತ್ತು. ಇದೀಗ ಅವರು ಏಕದಿನ ಮಾದರಿಗೆ ನಿವೃತ್ತಿ ಘೋಷಿಸಿದ್ದಾರೆ. 2027 ನೇ ಏಕದಿನ ವಿಶ್ವಕಪ್ ಗೆ ಹೊಸಬರಿಗೆ ಅವಕಾಶ ಮಾಡಿಕೊಡಲು ಈಗನೇ ನಿವೃತ್ತಿ ಹೇಳುವುದು ಉಚಿತವೆನಿಸುತ್ತಿದೆ.
ಬೆಂಗಳೂರು: ಡಿಕೆ ಶಿವಕುಮಾರ್ ಗೆ ಸಿಎಂ ಯೋಗವಿದೆಯೇ ಎಂಬ ಬಗ್ಗೆ ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದು ಇಲ್ಲಿದೆ ನೋಡಿ ವಿವರ. ರಾಜ್ಯದಲ್ಲಿ ಈಗ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಕೂಗು ಜೋರಾಗಿ ಕೇಳಿಬರುತ್ತಿದೆ. ಅತ್ತ ಡಿಕೆ ಶಿವಕುಮಾರ್ ಕೂಡಾ ಬಹಿರಂಗವಾಗಿಯೇ ಮುಂದಿನ ಚುನಾವಣೆಗೆ ನನ್ನದೇ ನೇತೃತ್ವ ಎಂದಿದ್ದಾರೆ. ಹೀಗಿರುವಾಗ ಡಿಕೆ ಶಿವಕುಮಾರ್ ಪರ ಈಗ ಮಠಾಧೀಶರೂ ಬ್ಯಾಟಿಂಗ್ ಮಾಡುತ್ತಿದ್ದಾರೆ. ಈಗ ನೊಣವಿನಕೆರೆ ಸ್ವಾಮೀಜಿಗಳು ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಹೇಳಿಕೆ ನೀಡಿದ್ದು, ದೇವರ ಆಶೀರ್ವಾದದಿಂದ ಅವರು ಸಿಎಂ ಆಗಿಯೇ ಆಗುತ್ತಾರೆ ಎಂದಿದ್ದಾರೆ.
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ, ಅನ್ನಭಾಗ್ಯ ಯೋಜನೆ ಹಣ ಬಂದಿಲ್ಲ ಎಂದು ಜನ ಹಿಡಿಶಾಪ ಹಾಕುತ್ತಿದ್ದರೆ ಇತ್ತ ಶಾಸಕರಿಗೆ ಮಾತ್ರ ವಿಧಾನಸಭೆಯಲ್ಲಿ ಮಲಗಿ ನಿದ್ರೆ ಮಾಡಲೂ ಐಷಾರಾಮಿ ಸೋಫಾ ತರಿಸಲಾಗಿದೆ. ಇದು ಈಗ ಭಾರೀ ಟೀಕೆಗೆ ಗುರಿಯಾಗಿದೆ. ರಾಜ್ಯ ವಿಧಾನಮಂಡಲ ಅಧಿವೇಶನ ಈಗ ನಡೆಯುತ್ತಿದ್ದು, ನಾಡಿದ್ದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಸ್ಪೀಕರ್ ಯುಟಿ ಖಾದರ್ ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನದ ನಿದ್ರೆ ಮಾಡಲೂ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಪಡಸಾಲೆಯಲ್ಲಿ ಕಾಲು ಚಾಚಿ ಮಧ್ಯಾಹ್ನದ ಹೊತ್ತು ಕೆಲವು ಕ್ಷಣ ನಿದ್ರೆ ಮಾಡಲೂ ಅನುವು ಮಾಡಿಕೊಡುವಂತಹ ಸೋಫಾಗಳನ್ನು ತರಿಸಲಾಗಿದೆ.
ಚೆನ್ನೈ: ತಮಿಳುನಾಡಿನಲ್ಲಿ ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಡಿಎಂಕೆ ನಾಯಕರ ಪ್ರತಿಭಟನೆ ಜೋರಾಗಿ ನಡೆಯುತ್ತಿದೆ. ಆದರೆ ಪ್ರತಿಭಟನೆ ವೇಳೆ ಡಿಎಂಕೆ ಕಾರ್ಯಕರ್ತನೊಬ್ಬ ಪಕ್ಕದಲ್ಲಿರುವ ಮಹಿಳೆಯ ಚಿನ್ನದ ಬಳೆ ಕದಿಯಲು ಯತ್ನಿಸುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಂಕೆ ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ನಾಯಕರು ಕೇಂದ್ರ ಸರ್ಕಾರ ಪ್ರಾದೇಶಿಕ ಭಾಷೆಗಳ ಸದ್ದಡಗಿಸಿ, ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಪ್ರತಿಭಟನೆ ನಡೆಸುತ್ತಿವೆ. ಯಾವುದೇ ಕಾರಣಕ್ಕೂ ನಮ್ಮ ರಾಜ್ಯದಲ್ಲಿ ಹಿಂದಿ ಹೇರಿಕೆ ಮಾಡಲು ಬಿಡಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೋರಾಟ ಮುಂದುವರಿಸಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕಾಂಗ್ರೆಸ್ಸಿಗರೇ ದಾಖಲೆ ಕೊಟ್ಟಿದ್ದರು ಎಂದು ಬಾಂಬ್ ಸಿಡಿಸಿದ್ದಾರೆ. ಸ್ನೇಹಮಯಿ ಕೃಷ್ಣ ಕೊಟ್ಟ ದೂರಿನನ್ವಯ ಲೋಕಾಯುಕ್ತ ಪೊಲೀಸರು ತನಿಖೆ ಕೈಗೆತ್ತಿಕೊಂಡು ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ವಿರುದ್ಧ ತನಿಖೆ ನಡಸಿದ್ದವು. ಅಂತಿಮವಾಗಿ ವರದಿ ನೀಡಿದ್ದು, ಪ್ರಕರಣದಲ್ಲಿ ಸಿದ್ದರಾಮಯ್ಯ ಪಾತ್ರವಿಲ್ಲ ಎಂದು ಕ್ಲೀನ್ ಚಿಟ್ ನೀಡಿದ್ದವು. ಆದರೆ ಇಷ್ಟಕ್ಕೇ ಸ್ನೇಹಮಯಿ ಕೃಷ್ಣ ಸುಮ್ಮನಾಗಿಲ್ಲ.
ಬೆಂಗಳೂರು: ದುಬೈನಿಂದ 14 ಕೆ.ಜಿ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ಸೆರೆಯಾಗಿರುವ ನಟಿ ರನ್ಯಾ ನಿಜಕ್ಕೂ ಯಾರು ಇಲ್ಲಿದೆ ನೋಡಿ ವಿವರ. ಪದೇ ಪದೇ ದುಬೈಗೆ ಹೋಗುತ್ತಿದ್ದ ರಮ್ಯಾ ಈ ಬಾರಿ ಬೆಂಗಳೂರು ಏರ್ ಪೋರ್ಟ್ ನಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರ ಮನೆಯಲ್ಲೂ ಅಕ್ರಮವಾಗಿ ಸಾಗಿಸಿ ತಂದ ಚಿನ್ನದ ಪೆಟ್ಟಿಗೆಯೇ ಸಿಕ್ಕಿದೆ ಎಂಬ ಮಾಹಿತಿಯಿದೆ. ಇದೀಗ ನಟಿ ರನ್ಯಾರನ್ನು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದೀಗ ಅವರನ್ನು ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮತ್ತು ಉಡುಪಿಯಲ್ಲಿ ಈಗ ಹೊರಗೆ ಕಾಲಿಡಲಾಗದಷ್ಟು ಬಿಸಿಲು, ಸೆಖೆ ಶುರುವಾಗಿದೆ. ಜನ ಯಾವ ನಮೂನೆ ಸೆಖೆ ಮಾರಾಯ್ರೇ ಎಂದು ಬೆವರಿಳಿಸುವಂತಾಗಿದೆ. ನಿನ್ನೆ ದಕ್ಷಿಣ ಕನ್ನಡದ ತಾಪಮಾನ ಬರೋಬ್ಬರಿ 40 ಡಿಗ್ರಿಯ ಆಸುಪಾಸು ತಲುಪಿತ್ತು. ಕೇರಳದಲ್ಲಿ ಮೋಡ ಕವಿದ ವಾತಾವರಣ ಮತ್ತು ಕೆಲವೆಡೆ ತುಂತುರು ಮಳೆಯಿತ್ತು. ಗಡಿ ಜಿಲ್ಲೆಯಲ್ಲಿ ಭಾರೀ ಬಿಸಿಲು, ಸೆಖೆ ಕಂಡುಬಂದಿದೆ. ಈ ಬಾರಿ ಕರಾವಳಿ ಭಾಗದಲ್ಲಿ ದಾಖಲೆಯ ತಾಪಮಾನ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದೆ. ನಿನ್ನೆಯಂತೂ ವಿಪರೀತ ಸೆಖೆಯಿತ್ತು.
ದುಬೈ: ಆಸ್ಟ್ರೇಲಿಯಾ ವಿರುದ್ಧ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಗೆಲುವಿಗೆ ತಾವೇ ರೂವಾರಿಯಾದರೂ ಪಂದ್ಯದ ಬಳಿಕ ನಾಯಕ ರೋಹಿತ್ ಶರ್ಮಾರನ್ನೇ ನೀನೇ ಮುಂದೆ ಹೋಗು ಎಂದು ತಳ್ಳಿದ ವಿರಾಟ್ ಕೊಹ್ಲಿ ವರ್ತನೆ ಎಲ್ಲರ ಮನಗೆದ್ದಿದೆ. ಈ ವಿಡಿಯೋ ಈಗ ವೈರಲ್ ಆಗಿದೆ. ಕೆಎಲ್ ರಾಹುಲ್ ಸಿಕ್ಸರ್ ಸಿಡಿಸಿ ಪಂದ್ಯ ಗೆಲ್ಲಿಸುತ್ತಿದ್ದಂತೇ ಡ್ರೆಸ್ಸಿಂಗ್ ರೂಂನಲ್ಲಿದ್ದ ಎಲ್ಲಾ ಆಟಗಾರರೂ ಕುಣಿದು ಕುಪ್ಪಳಿಸಿದ್ದರು. ಕೊಹ್ಲಿ ಎಲ್ಲರಿಗಿಂತ ಮೊದಲು ಮೈದಾನಕ್ಕೆ ಓಡಿ ಬಂದಿದ್ದರು. ಅಲ್ಲಿಯೇ ಎಲ್ಲಾ ಆಟಗಾರರನ್ನು ಅಪ್ಪಿ ಮುದ್ದಾಡಿದ ಕೊಹ್ಲಿ ಬಳಿಕ ಗ್ಯಾಲರಿಯಲ್ಲಿ ಕೂತಿದ್ದ ಅನುಷ್ಕಾ ಕಡೆಗೂ ನಾವು ಗೆದ್ದೆವು ಎಂದು ಸನ್ನೆ ಮಾಡಿ ಸಂಭ್ರಮಿಸಿದ್ದಾರೆ.
ದುಬೈ: ಚಾಂಪಿಯನ್ಸ್ ಟ್ರೋಫಿ 2025 ರ ಸೆಮಿಫೈನಲ್ ಪಂದ್ಯದಲ್ಲಿ ತಂಡದ ಗೆಲುವಿನ ರೂವಾರಿಯಾದ ವಿರಾಟ್ ಕೊಹ್ಲಿ ಗೆಲುವಿನ ಹೊಸ್ತಿಲಲ್ಲಿ ಔಟಾದಾಗ ಪಕ್ಕದಲ್ಲಿದ್ದ ಕೆಎಲ್ ರಾಹುಲ್ ನಾನು ಹೊಡೀತಿರ್ಲಿಲ್ವಾ ಎಂದು ಕೂಗಾಡಿದ ಪರಿ ಎಲ್ಲರ ಮನಗೆದ್ದಿದೆ. ರಾಹುಲ್ ಎಷ್ಟು ಒಳ್ಳೆಯವರು ಎನ್ನುತ್ತಿದ್ದಾರೆ ಫ್ಯಾನ್ಸ್. ಕೊನೆಯ ಹಂತದಲ್ಲಿ ಬಾಲ್ ಟು ಬಾಲ್ ಪರಿಸ್ಥಿತಿಯಿದ್ದಾಗ ಎರಡು ದೊಡ್ಡ ಹೊಡೆತಗಳ ಅಗತ್ಯವಿತ್ತು. ಆಗಲೇ ಕೊಹ್ಲಿ 84 ರಲ್ಲಿದ್ದರು. ಮತ್ತೊಂದು ಶತಕದ ಹೊಸ್ತಿಲಲ್ಲಿದ್ದರು. ಶತಕಕ್ಕಿಂತ ಅವರು ಈ ಇನಿಂಗ್ಸ್ ನಲ್ಲಿ ಜವಾಬ್ಧಾರಿ ಹೊತ್ತು ಆಡಿದ ಪರಿ ನೋಡಿದರೆ ಗೆಲುವಿನವರೆಗೂ ಅವರೇ ಕ್ರೀಸ್ ನಲ್ಲಿದ್ದರೆ ಚೆನ್ನಾಗಿತ್ತು ಎನ್ನುವ ಪರಿಸ್ಥಿತಿಯಿತ್ತು. ಅದಕ್ಕೆ ಅವರು ಅರ್ಹರಾಗಿದ್ದರು ಕೂಡಾ.