ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣ ಸಂಬಂದ ನಾಗೇಂದ್ರ ಸೇರಿದಂತೆ ಮೂವರಿಗೆ 1.25 ಕೋಟಿ ರೂ ದಂಡ ಪಾವತಿಸುವಂತೆ ಸೂಚಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.ದಂಡ ಪಾವತಿಸದಿದ್ದಲ್ಲಿ, ಒಂದು ವರ್ಷ ಜೈಲು ಶಿಕ್ಷೆ ಅನುಭವಿಬೇಕು ಎಂದು ನ್ಯಾಯಾಲಯ ಆದೇಶಿಸಿದೆ.ಮಾಜಿ ಸಚಿವ ಬಿ.ನಾಗೇಂದ್ರ, ಅನಿಲ್ ರಾಜಶೇಖರ್ ಮತ್ತು ಚುಂಡೂರು ಭಾಸ್ಕರ್ ವಿರುದ್ಧ ವಿಎಸ್ಎಲ್ ಸ್ಟೀಲ್ಸ್ ಸಂಸ್ಥೆಯು ಚೆಕ್ಬೌನ್ಸ್ ಕೇಸ್ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ತೀರ್ಪು ಪ್ರಕಟಿಸಿದೆ.
ನವದೆಹಲಿ: ಮುಂಬೈ ದಾಳಿ ಮಾಸ್ಟರ್ ಮೈಂಡ್ ರಾಣಾ ಕೆಲವೇ ಕ್ಷಣಗಳಲ್ಲಿ ಭಾರತಕ್ಕೆ ಬಂದಿಳಿಯಲಿದ್ದು, ಆತನ ಭದ್ರತೆಗೆ ಭದ್ರತಾ ಸಿಬ್ಬಂದಿ ಭರ್ಜರಿ ಏರ್ಪಾಟು ಮಾಡಿದ್ದಾರೆ. 2008 ರಲ್ಲಿ ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ತಹವ್ವೂರ್ ರಾಣಾ ಅಮೆರಿಕಾದಿಂದ ಗಡೀಪಾರಾಗಿದ್ದು ಭಾರತಕ್ಕೆ ಬರುತ್ತಿದ್ದಾನೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಆತ ದೆಹಲಿಯ ಪಾಲಂ ಏರ್ ಬೇಸ್ ನಲ್ಲಿ ಬಂದಿಳಿಯಲಿದ್ದಾನೆ. ಈತನನ್ನು ಬಿಗಿ ಭದ್ರತೆಯಲ್ಲಿ ಕರೆತರಲು ಎನ್ ಐಎ ಅಧಿಕಾರಿಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಏರ್ ಬೇಸ್ ಗೆ ಬಂದಿಳಿದ ತಕ್ಷಣ ಆತನನ್ನು ಕರೆದೊಯ್ಯಲು ವಿಶೇಷ ಬುಲೆಟ್ ಪ್ರೂಫ್ ವಾಹನ ರೆಡಿಯಾಗಿದೆ. ಈ ವಾಹನ ಬಾಂಬ್ ಬಿದ್ದರೂ ಅಲ್ಲಾಡಲ್ಲ
ನವದೆಹಲಿ: ರೈಲು ಎಸಿ ಕೋಚ್ ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ್ದೂ ಅಲ್ಲದೆ, ತನ್ನನ್ನು ಪ್ರಶ್ನಿಸಲು ಬಂದ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಲ್ಲೆ ನಡೆಸಿದ ಮಹಿಳೆಯೊಬ್ಬರ ವಿಡಿಯೋವೊಂದು ವೈರಲ್ ಆಗಿದೆ. ರೈಲಿನ ಎಸಿ ಕೋಚ್ ನಲ್ಲಿ ಬುರ್ಖಾ ಧರಿಸಿ ಮಹಿಳೆಯೊಬ್ಬಳು ಕೂತಿದ್ದಾಳೆ. ಆಕೆಯ ಬಳಿ ಟಿಕೆಟ್ ಇರುವುದಿಲ್ಲ. ಟಿಸಿ ಕೇಳಿದ್ದಕ್ಕೆ ಕೊಡುವುದೂ ಇಲ್ಲ. ಹೀಗಾಗಿ ರೈಲ್ವೇ ಅಧಿಕಾರಿಗಳು ಅಲ್ಲಿಗೆ ಬರುತ್ತಾರೆ. ಈ ವೇಳೆ ಆಕೆ ಅಕ್ಷರಶಃ ಧಮ್ಕಿ ಹಾಕುತ್ತಾಳೆ. ಪದೇ ಪದೇ ತನ್ನನ್ನು ಟಿಕೆಟ್ ಬಗ್ಗೆ ಕೇಳಿದಾಗ ಎಲ್ಲರನ್ನೂ ಕತ್ತರಿಸಿ ಹಾಕುತ್ತೇನೆ ಎಂದಿದ್ದಾಳೆ.
ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ನ 23ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 58 ರನ್ಗಳಿಂದ ಸೋತ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ ಡಬಲ್ ಶಾಕ್ ಎದುರಾಗಿದೆ.ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಸೋಲು ಕಂಡಿತು. ಈ ಬೆನ್ನಲ್ಲೇ ಸಂಜು ಸ್ಯಾಮ್ಸನ್ ಅವರಿಗೆ ₹ 24 ಲಕ್ಷ ದಂಡ ವಿಧಿಸಲಾಗಿದೆ.ಟೈಟನ್ಸ್ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಪ್ರಸಕ್ತ ಆವೃತ್ತಿಯಲ್ಲಿ ಸ್ಲೋ ಓವರ್ ರೇಟ್ಗಾ ಆರ್ಆರ್ಗೆ 2ನೇ ಬಾರಿ ದಂಡ ವಿಧಿಸಲಾಗಿದೆ. ಇನ್ನೊಂದು ಪಂದ್ಯದಲ್ಲಿ ಈ ಘಟನೆ ಮರುಕಳಿಸಿದ್ರೆ ಸ್ಯಾಮ್ಸನ್ ಒಂದು ಪಂದ್ಯದಿಂದ ಬ್ಯಾನ್ ಆಗಲಿದ್ದಾರೆ.
ಬೆಂಗಳೂರು: ಐಪಿಎಲ್ 2025 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದೆ. ಆದರೆ ಆರ್ ಸಿಬಿ ಅಭಿಮಾನಿಗಳಿಗೆ ನಮ್ಮ ಕನ್ನಡದ ಹುಡುಗ ಕೆಎಲ್ ರಾಹುಲ್ ರನ್ನು ಶತ್ರು ಥರಾ ನೋಡ್ಬೇಕಲ್ಲಾ ಅನ್ನೋದೇ ಬೇಜಾರು. ಎಲ್ಲರಿಗೂ ಗೊತ್ತಿರುವ ಹಾಗೆ, ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದಾರೆ. ಆದರೆ ಆರ್ ಸಿಬಿಯಲ್ಲೇ ಅವರಿಗೆ ಅನೇಕ ಅಭಿಮಾನಿಗಳಿದ್ದಾರೆ. ಕಾರಣ, ಅವರು ನಮ್ಮ ಕನ್ನಡದ ಪ್ರತಿಭೆ. ಇಲ್ಲಿಯೇ ಆಡಿ ಬೆಳೆದವರು.
ನವದೆಹಲಿ: 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ನಲ್ಲಿ ಕೊನೆಗೂ ಕ್ರಿಕೆಟ್ಗೆ ಮಾನ್ಯತೆ ನೀಡಲಾಗಿದೆ. ಆದರೆ, ಆರು ತಂಡಗಳಿಗೆ ಮಾತ್ರ ಪ್ರವೇಶದ ಅವಕಾಶ ನೀಡಲಾಗಿದೆ.128 ವರ್ಷಗಳ ನಂತರ 2028ರ ಲಾಸ್ ಏಂಜಲೀಸ್ ಕೂಟ ಮೂಲಕ ಒಲಿಂಪಿಕ್ಸ್ಗೆ ಕ್ರಿಕೆಟ್ ಮರಳುತ್ತಿದೆ. ಪ್ಯಾರಿಸ್ನಲ್ಲಿ ನಡೆದ 1900ರ ಕ್ರೀಡಾಕೂಟದಲ್ಲಿ ಕ್ರಿಕೆಟ್ ಕೊನೆಯ ಬಾರಿಗೆ ಒಲಿಂಪಿಕ್ಸ್ನಲ್ಲಿ ಕಾಣಿಸಿಕೊಂಡಿತ್ತು. ಅಲ್ಲಿ ಗ್ರೇಟ್ ಬ್ರಿಟನ್ ಮತ್ತು ಫ್ರಾನ್ಸ್ ನಡುವೆ ಎರಡು ದಿನಗಳ ಪಂದ್ಯವನ್ನು ನಡೆಸಲಾಗಿತ್ತು.ಲಾಸ್ ಏಂಜಲೀಸ್ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಟಿ20 ಸ್ವರೂಪದಲ್ಲಿ ಕ್ರಿಕೆಟ್ ಅನ್ನು ಪರಿಚಯಿಸಲಾಗುತ್ತಿದೆ. ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ತಲಾ 6 ತಂಡಗಳು ಸ್ಪರ್ಧಿಸುತ್ತವೆ ಎಂದು ಕೂಟದ ಆಯೋಜಕರು ದೃಢಪಡಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವಿಪರೀತ ಬಿಸಿಲು, ಸೆಖೆಯಿಂದ ಜನ ಹೈರಾಣಾಗಿದ್ದಾರೆ. ಈ ವರ್ಷ ಮಳೆಗಾಲ ಯಾವಾಗ ಶುರುವಾಗುತ್ತದೆ ಇಲ್ಲಿದೆ ನೋಡಿ ವಿವರ. ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಹಾಗಿದ್ದರೂ ತಾಪಮಾನವೇನೂ ಕಡಿಮೆಯಿಲ್ಲ. ಈಗಾಗಲೇ ಹವಾಮಾನ ವರದಿಗಳು ಈ ಬಾರಿ ಉತ್ತಮ ಮಳೆಯಾಗಲಿದೆ ಎಂದು ಸೂಚನೆ ನೀಡಿವೆ. ಹವಾಮಾನ ಮೂಲಗಳ ಪ್ರಕಾರ ಈ ಬಾರಿ ಬೇಗನೇ ಮುಂಗಾರು ಆಗಮನವಾಗಲಿದೆ.
ಬೆಂಗಳೂರು: ನನ್ನ ಮೇಲೆ ಯಾವುದೇ ಕಳಂಕ ಇಲ್ಲ. ಇಷ್ಟು ವರ್ಷದ ರಾಜಕೀಯದಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯಿಲ್ಲ ಎನ್ನುವ ಸಿಎಂ ಸಿದ್ದರಾಮಯ್ಯ ಮೇಲೆ ಇದು ಮೂರನೇ ಬಾರಿಗೆ ಇತ್ತೀಚೆಗಿನ ದಿನಗಳಲ್ಲಿ ಅಪವಾದ ಕೇಳಿಬಂದಿದೆ. ಇದೀಗ ಸಿಎಂ ಸಿದ್ದರಾಮಯ್ಯ ಮೇಲೆ ಗಣಿ ಗುತ್ತಿಗೆ ನವೀಕರಣಕ್ಕೆ ಅಕ್ರಮವಾಗಿ ಒಪ್ಪಿಗೆ ನೀಡಿದ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ 2015 ರಲ್ಲಿ 500 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದರು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ. ಇತ್ತೀಚೆಗಷ್ಟೇ ಸಿದ್ದರಾಮಯ್ಯ ಮೇಲೆ ಮುಡಾ ಹಗರಣದ ಆರೋಪ ಕೇಳಿಬಂದಿತ್ತು
ಬೆಂಗಳೂರು: ಹಲವು ಬೆಲೆ ಏರಿಕೆಗಳ ಮಧ್ಯೆ ಈಗ ಬೆಂಗಳೂರಿಗರಿಗೆ ಕಾವೇರಿ ನೀರಿನ ದರ ಏರಿಕೆ ಶಾಕ್ ಸಿಕ್ಕಿದೆ. ನೀರಿನ ದರ ಏರಿಕೆಗೆ ಸೋಷಿಯಲ್ ಮೀಡಿಯಾಗಳಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಬಿಟ್ಟಿ ಭಾಗ್ಯಕ್ಕಾಗಿ ಇನ್ನೂ ಎಲ್ಲೆಲ್ಲಿ ಕಿತ್ಕೊಳ್ತೀರಿ ಎಂದು ಪ್ರಶ್ನಿಸಿದ್ದಾರೆ. ಒಂದೆಡೆ ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಬೆಲೆ ಏರಿಕೆ ಮಾಡಿದೆ. ಇತ್ತೀಚೆಗಷ್ಟೇ ಬಸ್, ಹಾಲು, ವಿದ್ಯುತ್, ಕಸ ಎಲ್ಲವೂ ದುಬಾರಿ ದುನಿಯಾ ಆಗಿದೆ. ಇದರ ನಡುವೆ ಬೆಂಗಳೂರಿಗರಿಗೆ ನಮ್ಮ ಮೆಟ್ರೊ ಪ್ರಯಾಣ ದರವೂ ಏರಿಕೆಯಾಗಿತ್ತು.
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಬಂದಿದ್ದು ಈಗ ಸಿಇಟಿ ಪರೀಕ್ಷೆ ಕಾಲ. ಸಿಇಟಿ ಪರೀಕ್ಷೆ ಯಾವಾಗ ಯಾವ ದಿನ ಯಾವೆಲ್ಲಾ ಪರೀಕ್ಷೆ ಸಂಪೂರ್ಣ ವಿವರ ಇಲ್ಲಿದೆ ನೋಡಿ. ಈ ಸಾಲಿನ ಸಿಇಟಿ ಪರೀಕ್ಷೆಗಳು ಏಪ್ರಿಲ್ 16 ಮತ್ತು 17 ರಂದು ನಡೆಯಲಿದೆ. ಏಪ್ರಿಲ್ 16 ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತ ಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನ ಶಾಸ್ತ್ರ ಮತ್ತು ಏಪ್ರಿಲ್ 17 ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಗಣಿತ ಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮುಂಚಿತವಾಗಿ ಮತ್ತು ಪರೀಕ್ಷಾ ನಂತರ 30 ನಿಮಿಷ ಪೊಲೀಸರು ಬಿಗಿ ಭದ್ರತೆ ಒದಗಿಸಲಿದ್ದಾರೆ.
ಬೆಂಗಳೂರು: ಮಹಿಳೆಯರು ಮಾತ್ರವಲ್ಲ, ಪುರುಷರಲ್ಲೂ ಫಲವಂತಿಕೆ ಸಮಸ್ಯೆ ಇದ್ದೇ ಇರುತ್ತದೆ. ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸೇವನೆ ಮಾಡಿದರೆ ಸಾಕು. ಪುರುಷರಲ್ಲಿ ವೀರ್ಯಾಣು ಸಂಖ್ಯೆ ಸಾಕಷ್ಟು ಇಲ್ಲದೇ ಇದ್ದರೆ, ಆರೋಗ್ಯಕರ ವೀರ್ಯಾಣು ಉತ್ಪತ್ತಿಯಾಗದೇ ಇದ್ದರೆ ಅಥವಾ ಇನ್ನಿತರ ಯಾವುದೇ ಲೈಂಗಿಕ ಸಮಸ್ಯೆಗಳಿದ್ದಲ್ಲಿ ಅವರ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಈ ಜ್ಯೂಸ್ ಸಹಾಯಕ. ನುಗ್ಗೆಸೊಪ್ಪಿನ ಜ್ಯೂಸ್ಪ್ರತಿನಿತ್ಯ ಖಾಲಿ ಹೊಟ್ಟೆಯಲ್ಲಿ ನುಗ್ಗೆಸೊಪ್ಪು ಪುಡಿಯ ಜ್ಯೂಸ್ ಮಾಡಿ ಸೇವನೆ ಮಾಡುವುದರಿಂದ ಪುರುಷರಿಗೆ ಅನೇಕ ಉಪಯೋಗಗಳಿವೆ. ಬಂಜೆತನ ಸಮಸ್ಯೆ ನಿವಾರಣೆ ಮಾತ್ರವಲ್ಲದೆ, ದೈಹಿಕ ಶಕ್ತಿ, ರೋಗ ನಿರೋಧಕ ಶಕ್ತಿ ಹೆಚ್ಚಿಸಬಹುದು.
ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ದಕ್ಷಿಣ ಕನ್ನಡಕ್ಕೆ ಮಾತ್ರವಲ್ಲ; ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ, ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮೋದಿಜೀ ಅವರ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಸೇರಿ ದಕ್ಷಿಣ ಕನ್ನಡಕ್ಕೆ, ಮಂಗಳೂರಿನಲ್ಲಿರುವ ವಿಧಾನಸಭಾ ಕ್ಷೇತ್ರಕ್ಕೆ 19,500 ಕೋಟಿ ಅನುದಾನ ಕೊಟ್ಟಿದ್ದರು. ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಅನುದಾನವೂ ಇಲ್ಲ; ರಾಜ್ಯದ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡಕ್ಕೆ ಬರುವುದೂ ಇಲ್ಲ ಎಂದು ಟೀಕಿಸಿದರು.
ಬೆಂಗಳೂರು: ನಿನ್ನೆ ಯಥಾಸ್ಥಿತಿಯಲ್ಲಿದ್ದ ಅಡಿಕೆ ಬೆಲೆ ಇಂದು ಏರಿಕೆಯಾಗಿದ್ದು ಬೆಳೆಗಾರರಿಗೆ ಬಂಪರ್ ಸಿಕ್ಕಂತಾಗಿದೆ. ಆದರೆ ಕಾಳುಮೆಣಸು ಬೆಳೆಗಾರರಿಗೆ ನಿರಾಸೆಯಾಗಲಿದೆ. ಯಾಕೆಂದರೆ ಕಾಳುಮೆಣಸು ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಇಂದಿನ ದರ ಹೇಗಿದೆ ಇಲ್ಲಿದೆ ವಿವರ. ಅಡಿಕೆ ಬೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಲೇ ಇದೆ. ಮೊನ್ನೆ ಅಡಿಕೆ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಬೆಳೆಗಾರರ ಮೊಗದಲ್ಲಿ ಹರ್ಷ ತಂದಿತ್ತು. ನಿನ್ನೆ ಏರಿಕೆಯಾಗದೇ ಇದ್ದರೂ ಇಳಿಕೆಯಾಗಿರಲಿಲ್ಲ. ಆದರೆ ಇಂದು ಮತ್ತೆ ಅಡಿಕೆ ಬೆಲೆ ಕೊಂಚ ಏರಿಕೆಯಾಗಿದೆ. ನಿನ್ನೆ ಹೊಸ ಅಡಿಕೆ ಬೆಲೆ ಗರಿಷ್ಠ 440 ರೂ. ಗಳಷ್ಟಿದ್ದರೆ, ಹಳೆ ಅಡಿಕೆ ಬೆಲೆ ಗರಿಷ್ಠ 485 ರೂ.ಗಳಷ್ಟಿತ್ತು.
ಬೆಂಗಳೂರು: ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿ ಗ್ರಾಹಕರು ಸಮಾಧಾನದ ನಿಟ್ಟುಸಿರು ಬಿಡುವಂತಾಗಿತ್ತು. ಆದರೆ ಮತ್ತೆ ಎರಡು ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಎಷ್ಟು ಏರಿಕೆಯಾಗಿದೆ ಎಂಬ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆ99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಮೊನ್ನೆಯಂತೂ ಪರಿಶುದ್ಧ ಚಿನ್ನದ ಬೆಲೆ 94 ಸಾವಿರ ಗಡಿ ದಾಟಿ ದಾಖಲೆ ಮಾಡಿತ್ತು. ಆದರೆ ಕಳೆದ ಎರಡುದಿನಗಳಿಂದ ಕೊಂಚ ಮಟ್ಟಿಗೆ ಇಳಿಕೆಯಾಗಿತ್ತು. ಹೀಗಾಗಿ ಚಿನ್ನದ ದರ ಮತ್ತಷ್ಟು ಇಳಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು.
ನವದೆಹಲಿ: ಈ ಬೇಸಿಗೆಕಾಲದಲ್ಲಿ ಎಲ್ಲರೂ ಕೂಲ್ ಆಗಿ ಚಪ್ಪರಿಸಿಕೊಂಡು ಸೇವನೆ ಮಾಡುವ ಸಾಫ್ಟ್ ಡ್ರಿಂಕ್ ಗಳನ್ನು ಟಾಯ್ಲೆಟ್ ಕ್ಲೀನರ್ ಬಳಸಿ ತಯಾರಿಸಲಾಗುತ್ತದೆ ಎಂದು ಪತಂಜಲಿ ಉತ್ಪನ್ನದ ಸಂಸ್ಥಾಪಕ ಬಾಬಾ ರಾಮ್ ದೇವ್ ಆರೋಪಿಸಿದ್ದಾರೆ. ಸಾಫ್ಟ್ ಡ್ರಿಂಕ್ ಗಳು ತುಂಬಾ ಅಪಾಯಕಾರಿ. ಅವುಗಳಲ್ಲಿ ಟಾಯ್ಲೆಟ್ ಕ್ಲೀನರ್ ಬಳಸಲಾಗುತ್ತದೆ. ಇದು ಒಂದು ರೀತಿಯಲ್ಲಿ ಶರಬತ್ ಜಿಹಾದ್ ಎಂದು ಬಾಬಾ ರಾಮ್ ದೇವ್ ಹೇಳಿರುವುದು ಈಗ ತೀವ್ರ ಚರ್ಚೆಗೆ ಗುರಿಯಾಗಿದೆ. ಪತಂಜಲಿಯ ರೋಸ್ ಶರಬತ್ ಉತ್ಪನ್ನದ ಪ್ರಚಾರದ ವಿಡಿಯೋವೊಂದರಲ್ಲಿ ಬಾಬಾ ರಾಮ್ ದೇವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನ್ಯೂಯಾರ್ಕ್: ವಿದೇಶೀ ಉತ್ಪನ್ನಗಳ ಮೇಲೆ ವಿಧಿಸಿದ ಸುಂಕದ ವಿಚಾರ ಭಾರೀ ಸದ್ದು ಮಾಡುತ್ತಿರುವಾಗಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 75 ದೇಶಗಳಿಗೆ 90 ದಿನಗಳ ಬ್ರೇಕ್ ನೀಡಿದ್ದಾರೆ. ಆದರೆ ಚೀನಾ ಮೇಲೆ ಮಾತ್ರ 125% ಸುಂಕ ಮುಂದುವರಿಸಿದ್ದಾರೆ. ಇದಕ್ಕೆ ಕಾರಣವೇನು ನೋಡಿ. ಡೊನಾಲ್ಡ್ ಟ್ರಂಪ್ ಪ್ರತಿಸುಂಕ ವಿಚಾರ ಈಗ ಹಲವು ದೇಶಗಳನ್ನು ಸಂಕಷ್ಟಕ್ಕೀಡು ಮಾಡಿದೆ. ಟ್ರಂಪ್ ನಿರ್ಧಾರ ಭಾರತದ ಮೇಲೂ ಪರಿಣಾಮ ಬೀರಿದೆ. ಷೇರುಮಾರುಕಟ್ಟೆಗಳ ಮೇಲೂ ಪ್ರಭಾವ ಬೀರುತ್ತಿದೆ. ಈ ನಡುವೆ 75 ದೇಶಗಳಿಗೆ ಪ್ರತಿಸುಂಕಕ್ಕೆ 90 ದಿನಗಳ ಬ್ರೇಕ್ ನೀಡಲಾಗಿದೆ. ಈ ಪಟ್ಟಿಯಲ್ಲಿ ಭಾರತವೂ ಇರಬಹುದು ಎನ್ನಲಾಗಿದೆ.
ಗುಜರಾತ್ ಟೈಟನ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ತನಗೆ ಔಟ್ ತೀರ್ಪು ನೀಡಿದ್ದಕ್ಕೆ ಅಂಪಾಯರ್ ಜೊತೆಗೇ ರಾಜಸ್ಥಾನ್ ರಾಯಲ್ಸ್ ತಂಡದ ರಿಯಾನ್ ಪರಾಗ್ ವಾಗ್ವಾದ ನಡೆಸಿದ ವಿಡಿಯೋ ವೈರಲ್ ಆಗಿದೆ. ಈ ಪಂದ್ಯವನ್ನು ರಾಜಸ್ಥಾನ್ 58 ರನ್ ಗಳಿಂದ ಸೋತಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 159 ರನ್ ಗಳಿಗೆ ಆಲೌಟ್ ಆಯಿತು. ರಾಜಸ್ಥಾನ್ ಬ್ಯಾಟಿಂಗ್ ವೇಳೆ 7 ನೇ ಓವರ್ ನಲ್ಲಿ ರಿಯಾನ್ ಪರಾಗ್ ಹೊಡೆದ ಚೆಂಡು ಬ್ಯಾಟ್ ಸವರಿಕೊಂಡು ಕೀಪರ್ ಕೈ ಸೇರಿತು.
ಬೆಂಗಳೂರು: ತಮ್ಮ ಆಪ್ತ ಧನ್ವೀರ್ ಗೌಡ ನಾಯಕರಾಗಿರುವ ವಾಮನ ಸಿನಿಮಾ ವೀಕ್ಷಿಸಲು ಬಂದ ನಟ ದರ್ಶನ್ ಸಂಕಷ್ಟಕ್ಕೀಡಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಸಾಕ್ಷಿ ಜೊತೆಯೇ ಕೂತು ಸಿನಿಮಾ ವೀಕ್ಷಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ಚಿಕ್ಕಣ್ಣ ಕೂಡಾ ಸಾಕ್ಷಿಯಾಗಿದ್ದಾರೆ. ಆದರೆ ನಿನ್ನೆ ವಾಮನ ಸಿನಿಮಾವನ್ನು ಚಿಕ್ಕಣ್ಣ ಪಕ್ಕದಲ್ಲೇ ಕುಳಿತು ದರ್ಶನ್ ವೀಕ್ಷಣೆ ಮಾಡಿದ್ದಾರೆ. ಇದೇ ವಿಚಾರ ಈಗ ಅವರಿಗೆ ಸಂಕಷ್ಟ ತಂದೊಡ್ಡಲಿದೆ. ದರ್ಶನ್ ಗೆ ಜಾಮೀನು ನೀಡುವಾಗ ಕೆಲವೊಂದು ಷರತ್ತುಗಳನ್ನು ವಿಧಿಸಲಾಗಿತ್ತು.
ಬೆಂಗಳೂರು: ಐಪಿಎಲ್ 2025 ರಲ್ಲಿ ಇಂದು ಕನ್ನಡಿಗರ ಪಾಲಿಗೆ ಉಗುಳಲೂ ಆಗದ ನುಂಗಲೂ ಆಗದ ಮ್ಯಾಚ್. ಒಂದು ಕಡೆ ಆರ್ ಸಿಬಿ ಆಗಿದ್ದರೆ ಅದಕ್ಕೆ ಎದುರಾಳಿಯಾಗಿ ಕನ್ನಡಿಗ ಕೆಎಲ್ ರಾಹುಲ್ ಅವರ ಡೆಲ್ಲಿ ಕ್ಯಾಪಿಟಲ್ಸ್. ತನ್ನನ್ನು ಕಡೆಗಣಿಸಿದ ಆರ್ ಸಿಬಿಗೆ ಕೆಎಲ್ ರಾಹುಲ್ ರೆಡಿಯಾಗಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಇಂದು ಆರ್ ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದೆ. ಈ ಐಪಿಎಲ್ ನಲ್ಲಿ ತವರು ಆರ್ ಸಿಬಿ ತಂಡವನ್ನು ಸೇರಿಕೊಳ್ಳಬೇಕೆಂದು ಕೆಎಲ್ ರಾಹುಲ್ ಗೆ ಕನಸಿತ್ತು. ಆದರೆ ಮೆಗಾ ಹರಾಜಿನಲ್ಲಿ ಆರ್ ಸಿಬಿ ಅವರನ್ನು ಕೈ ಬಿಟ್ಟಿದ್ದು ಕನ್ನಡಿಗರಿಗೆ ನಿರಾಸೆ ತಂದಿತ್ತು.
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೊನ್ನೆ ಕೋರ್ಟ್ ಗೆ ಹಾಜರಾಗಬೇಕಿದ್ದ ನಟ ದರ್ಶನ್ ಬೆನ್ನು ನೋವಿನ ನೆಪ ಹೇಳಿ ತಪ್ಪಿಸಿಕೊಂಡಿದ್ದರು. ಆದರೆ ನಿನ್ನೆ ತಮ್ಮ ಆಪ್ತ ಧನ್ವೀರ್ ಗೌಡ ಅಭಿನಯದ ವಾಮನ ಸಿನಿಮಾವನ್ನು ವೀಕ್ಷಿಸಲು ಥಿಯೇಟರ್ ಗೆ ಬಂದಿದ್ದಾರೆ. ಇದಕ್ಕೆ ಜನರ ಪ್ರತಿಕ್ರಿಯೆ ಹೇಗಿತ್ತು ನೋಡಿ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ನಟ ದರ್ಶನ್ ಮತ್ತು ಎಲ್ಲಾ ಆರೋಪಿಗಳಿಗೆ ತಿಂಗಳಿಗೊಮ್ಮೆ ಕಡ್ಡಾಯವಾಗಿ ಕೋರ್ಟ್ ಗೆ ಹಾಜರಾಗಲು ಷರತ್ತು ವಿಧಿಸಲಾಗಿತ್ತು. ಕಳೆದ ತಿಂಗಳು ಕೋರ್ಟ್ ಗೆ ಬಂದಿದ್ದ ದರ್ಶನ್ ಈ ಬಾರಿ ಬೆನ್ನು ನೋವಿನ ನೆಪ ಹೇಳಿ ತಪ್ಪಿಸಿಕೊಂಡಿದ್ದರು.
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮುಂಗಾರುಪೂರ್ವ ಮಳೆಯಾಗುತ್ತಿದ್ದು, ಉಳಿದಂತೆ ಬಿಸಿಲಿನ ವಾತಾವರಣವಿದೆ. ವಿಶೇಷವಾಗಿ ದಕ್ಷಿಣ ಕನ್ನಡದವರಿಗೆ ಇಂದು ಹವಾಮಾನ ವರದಿ ತಪ್ಪದೇ ಗಮನಿಸಬೇಕಾಗುತ್ತದೆ. ರಾಜ್ಯದಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ ನೋಡಿ. ಅದರಲ್ಲೂ ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಲೇ ಇದೆ. ನಿನ್ನೆ ಹಾಗೂ ಮೊನ್ನೆಯೂ ವಿಪರೀತ ಗಾಳಿ ಮಳೆ ಕಂಡುಬಂದಿತ್ತು. ಇಂದೂ ಕೂಡಾ ಈ ಜಿಲ್ಲೆಯಲ್ಲಿ ಭಾರೀ ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಕನ್ನಡ ಜೊತೆಗೆ ಕೊಡಗಿನಲ್ಲೂ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಜೀವನದಲ್ಲಿ ಪ್ರತಿಯೊಬ್ಬರು ಯಶಸ್ಸು ಸಿಗಬೇಕು, ಮುನ್ನುಗ್ಗುವ ಛಲವಿರಬೇಕು ಎಂದು ಬಯಸುತ್ತಾರೆ. ಜೀವನದಲ್ಲಿ ಎಲ್ಲಾ ರಂಗದಲ್ಲೂ ಯಶಸ್ಸು ಸಿಗಬೇಕೆಂದರೆ ಮಾನಸಿಕ ಸ್ಥೈರ್ಯ ಅಗತ್ಯ. ವಿದ್ಯಾರ್ಥಿಗಳಿಗೆ ಓದಿದ ವಿಚಾರಗಳು ಮನನವಾಗಬೇಕು, ಉತ್ತಮ ಅಂಕ ಬರಬೇಕು ಎಂದರೆ ಪ್ರತಿನಿತ್ಯ ಬೆಳಿಗ್ಗೆ ಎದ್ದು ಪರಶುರಾಮ ಸ್ತುತಿಯನ್ನು ಓದಿ. ಇಲ್ಲಿದೆ ನೋಡಿ.ಕುಲಾಚಲಾ ಯಸ್ಯ ಮಹೀಂ ದ್ವಿಜೇಭ್ಯಃಪ್ರಯಚ್ಛತಃ ಸೋಮದೃಷತ್ತ್ವಮಾಪುಃ |ಬಭೂವುರುತ್ಸರ್ಗಜಲಂ ಸಮುದ್ರಾಃಸ ರೈಣುಕೇಯಃ ಶ್ರಿಯಮಾತನೀತು || ೧ || ನಾಶಿಷ್ಯಃ ಕಿಮಭೂದ್ಭವಃ ಕಿಪಭವನ್ನಾಪುತ್ರಿಣೀ ರೇಣುಕಾನಾಭೂದ್ವಿಶ್ವಮಕಾರ್ಮುಕಂ ಕಿಮಿತಿ ಯಃ ಪ್ರೀಣಾತು ರಾಮತ್ರಪಾ |
ಅಹಮದಾಬಾದ್: ಸಾಯಿ ಸುದರ್ಶನ್ ಅವರ ಅಮೋಘ ಬ್ಯಾಟಿಂಗ್ ಬಳಿಕ ಕನ್ನಡಿಗ ಪ್ರಸಿದ್ಧ ಕೃಷ್ಣ ಅವರ ಪರಿಣಾಮಕಾರಿ ಬೌಲಿಂಗ್ ದಾಳಿಯ ನೆರವಿನಿಂದ ಆತಿಥೇಯ ಗುಜರಾತ್ ಟೈಟನ್ಸ್ ತಂಡವು ಬುಧವಾರ ಇಂಡಿಯನ್ ಪ್ರೀಮಿಯರ್ ಲೀಗ್ನ ಪಂದ್ಯದಲ್ಲಿ 58 ರನ್ಗಳಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿತು.ಮೊದಲ ಪಂದ್ಯ ಸೋತು ಸತತ ನಾಲ್ಕು ಪಂದ್ಯಗಳನ್ನು ಗೆದ್ದ ಗುಜರಾತ್ ತಂಡವು 8 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿತು. ಮತ್ತೊಂದೆಡೆ ರಾಜಸ್ಥಾನ ರಾಯಲ್ಸ್ ಐದು ಪಂದ್ಯಗಳಲ್ಲಿ ಮೂರರಲ್ಲಿ ಸೋತು ಏಳನೇ ಸ್ಥಾನಕ್ಕೆ ಕುಸಿದಿದೆ.ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಫೀಲ್ಡಿಂಗ್ ಆಯ್ಡುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 20 ಓವರ್ಗಳಲ್ಲಿ ಆರು ವಿಕೆಟ್ಗೆ 217 ರನ್ ಗಳಿಸಿತು.
ಅಹಮದಾಬಾದ್: ಸಾಯಿ ಸುದರ್ಶನ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಆತಿಥೇಯ ಗುಜರಾತ್ ಟೈಟನ್ಸ್ ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ನ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಿದೆ.ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಫೀಲ್ಡಿಂಗ್ ಆಯ್ಡುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 20 ಓವರ್ಗಳಲ್ಲಿ ಆರು ವಿಕೆಟ್ಗೆ 217 ರನ್ ಗಳಿಸಿ, ಎದುರಾಳಿ ತಂಡದ ಗೆಲುವಿಗೆ 218 ರನ್ಗಳ ಗುರಿಯನ್ನು ನೀಡಿದೆ.ಗುಜರಾತ್ ತಂಡದ ನಾಯಕ ಶುಭಮನ್ ಗಿಲ್ 2 ರನ್ ಗಳಿಸಿ ಔಟಾಗಿ ನಿರಾಸೆ ಮೂಡಿಸಿದರು. ಆದರೆ, ಮತ್ತೊಬ್ಬ ಆರಂಭಿಕ ಬ್ಯಾಟರ್ 53 ಎಸೆತಗಳಲ್ಲಿ 82 ರನ್ ಸಿಡಿಸಿದರು.
ಮಂಗಳೂರು: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಶಕ್ತಿ ಬಿಜೆಪಿಗೆ ಇದೆ ಎಂಬ ಸಂದೇಶವನ್ನು 83 ವರ್ಷದ ಮಹಿಳೆ ವತ್ಸಲಾ ಕಾಮತ್ ಅವರು ಸಾಂಕೇತಿಕವಾಗಿ ತೋರಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು.ಬಿಜೆಪಿ ಜನಾಕ್ರೋಶ ಯಾತ್ರೆಯ ಮೂರನೇ ದಿನವಾದ ಇಂದು ಇಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬೂತ್ ಅಧ್ಯಕ್ಷರಾದ ವತ್ಸಲಾ ಕಾಮತ್ ಅವರು ನನಗೆ ಬಿಜೆಪಿಯ ಧ್ವಜವನ್ನು ಕೊಟ್ಟು ನಮ್ಮ ಯಾತ್ರೆಗೆ ಚಾಲನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ.
ನವದೆಹಲಿ: ಬ್ಯಾಂಕಾಕ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ವ್ಯಕ್ತಿಯೊಬ್ಬ ತನ್ನ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಬಗ್ಗೆ ವರದಿಯಾಗಿದೆ.ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಮದ್ಯಪಾನ ಮಾಡಿದ್ದಾನೆ ಎಂದು ಸಿಬ್ಬಂದಿ ದೂರಿದ್ದಾರೆ.ಏ.9ರಂದು ದೆಹಲಿಯಿಂದ ಬ್ಯಾಂಕಾಕ್ಗೆ ಹಾರುತ್ತಿದ್ದ AI2336 ವಿಮಾನದಲ್ಲಿ ಪ್ರಯಾಣಿಕರ ಅಶಿಸ್ತಿನ ವರ್ತನೆಯ ಘಟನೆಯ ಬಗ್ಗೆ ಕ್ಯಾಬಿನ್ ಸಿಬ್ಬಂದಿಗೆ ವರದಿಯಾಗಿದೆ ಎಂದು ಏರ್ ಇಂಡಿಯಾ ದೃಢಪಡಿಸಿದೆ.
ನವದೆಹಲಿ: ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಮೇರಿ ಕೋಮ್ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಹರಿದಾಡುತ್ತಿದೆ.2005ರಂದು ಒನ್ಲರ್ ಕರುಂಗ್ ಅವರನ್ನು ವಿವಾಹವಾದ ಮೇರಿ ಕೋಮ್ ಅವರು ಸುದೀರ್ಘವಾದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿದ್ದಾರೆ ಎನ್ನಲಾಗಿದೆ. ಈ ಜೋಡಿ ಈಗಾಗಲೇ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳದುಬಂದಿದೆ.2022 ರ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಮೇರಿಯ ಪತಿ ಓಂಲರ್ ಸೋಲಿನ ನಂತರ
ವಿಜಯಪುರ: ಪ್ರವಾದಿ ಮಹಮ್ಮದ್ ಪೈಂಗಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ.ಏ.7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತಾಡಿದ್ದರು. ಈ ವೇಳೆ, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಮೊಹಮ್ಮದ್ ಹನ್ನಾನ್ ಎಂಬ ವ್ಯಕ್ತಿ ಈ ಸಂಬಂಧ ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗುಜರಾತ್: ಬುಧವಾರ ರಾತ್ರಿ ಗುಜರಾತ್ನ ಇಲ್ಲಿನ ಒಂದು ಕುಟುಂಬವೊಂದು ಮಲಗಿದ್ದ ವೇಳೆ, ಮನೆಯೊಳಗೆ ಸಿಂಹವೊಂದು ಎಂಟ್ರಿಕೊಟ್ಟು, ಅಡುಗೆ ಕೋಣೆಯ ಗೋಡೆಯ ಮೇಲೆ ಕೂತು ರಿಲ್ಯಾಕ್ಸ್ ಆಗುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.ಈ ಘಟನೆ ಗುಜರಾತ್ನ ಅಮ್ರೇಲಿಯಲ್ಲಿರುವ ಮುಲುಭಾಯಿ ರಾಮ್ಭಾಯ್ ಲಖನ್ನೋತ್ರಾ ಅವರ ಮನೆಯಲ್ಲಿ ನಡೆದಿದೆ. ರಾತ್ರಿ ವೇಳೆ ಮನೆಯವರು ಮಲಗಿದ್ದ ವೇಳೆ ಸಿಂಹ ಮನೆಯೊಳಗೆ ಬಂದು ಅಡುಗೆ ಕೋಣೆ ಸೇರಿದೆ. ಇದನ್ನು ನೋಡಿ ಮನೆಯವರು ಭಯಭೀತರಾಗಿದ್ದಾರೆ. ಮನೆಯವರ ಚೀರಾಟಕ್ಕೆ ನೆರೆಹೊರೆಯವರು ಓಡಿ ಬಂದು ವರನ್ನು ಸುರಕ್ಷಿತವಾಗಿ ಮನೆಯಿಂದ ಹೊರಕರೆದುಕೊಂಡು ಹೋಗಿದ್ದಾರೆ.
ಕೇಸರಿ ಚಾಪ್ಟರ್ 2ನಲ್ಲಿ ಅಕ್ಷಯ್ ಕುಮಾರ್ ಕಥಕ್ಕಳಿ ಉಡುಪನ್ನು ಧರಿಸಿರುವುದು ಕಂಡುಬರುತ್ತದೆ. ಮಾಹಿತಿ: ಕಥಕ್ಕಳಿ ಕೇರಳದ ಒಂದು ಶಾಸ್ತ್ರೀಯ ಭಾರತೀಯ ನೃತ್ಯ ಪ್ರಕಾರವಾಗಿದ್ದು, ಅದರ ವಿಸ್ತಾರವಾದ ವೇಷಭೂಷಣಗಳು, ರೋಮಾಂಚಕ ಮೇಕಪ್ ಮತ್ತು ಶೈಲೀಕೃತ ಚಲನೆಗಳು ಮತ್ತು ಮುಖಭಾವಗಳ ಮೂಲಕ ಸಂಕೀರ್ಣವಾದ ಕಥೆ ಹೇಳುವಿಕೆಗೆ ಹೆಸರುವಾಸಿಯಾಗಿದೆ.ಇದೀಗ ಅಕ್ಷಯ್ ಕುಮಾರ್ ಅವರ ವೇಷ ಭಾರೀ ಕುತೂಹಲವನ್ನು ಮೂಡಿಸುತ್ತಿದೆ.ಶೀರ್ಷಿಕೆಯಲ್ಲಿ, ಅಕ್ಷಯ್ ಬರೆದಿದ್ದಾರೆ, "ಇದು ವೇಷಭೂಷಣವಲ್ಲ. ಇದು ಸಂಪ್ರದಾಯ, ಪ್ರತಿರೋಧ, ಸತ್ಯ, ನನ್ನ ರಾಷ್ಟ್ರದ ಸಂಕೇತವಾಗಿದೆ. ಸಿ ಶಂಕರನ್ ನಾಯರ್ ಆಯುಧದಿಂದ ಹೋರಾಡಲಿಲ್ಲ. ಅವರು ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಕಾನೂನೊಂದಿಗೆ ಮತ್ತು ಅವರ ಆತ್ಮದಲ್ಲಿ ಬೆಂಕಿಯೊಂದಿಗೆ
ಉಡುಪಿ: ನಾನೊಬ್ಬ ಪಕ್ಷದ ಕಾರ್ಯಕರ್ತನಾಗಿದ್ದು, ಪಕ್ಷ ನನಗೆ ಏನೇ ಜವಾಬ್ದಾರಿ ನೀಡಿದರು, ಅದನ್ನು ನಿಭಾಯಿಸಿದ್ದೇನೆ. ಇನ್ನೊಂದು ಜವಾಬ್ದಾರಿ ಕೊಟ್ಟರು ಕೆಲಸ ಮಾಡುತ್ತೇನೆ' ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ಹೇಳಿದರು.ಸುದ್ದಿಗಾರರೊಂದಿಗೆ ಬುಧವಾರ ಇಲ್ಲಿ ಮಾತನಾಡಿದ ಅವರು, ತಮಿಳುನಾಡಿನ ಬಿಜೆಪಿ ಅಧ್ಯಕ್ಷ ರೇಸ್ನಲ್ಲಿ ನಾನಿಲ್ಲ ಎನ್ನುವ ಮೂಲಕ ಅಣ್ಣಾಮಲೈ ಕುತೂಹಲ ಮೂಡಿಸಿದ್ದರು.ಇದೀಗ ತಮಿಳುನಾಡಿನಲ್ಲಿ ಚುನಾವಣೆ ಸಮೀಪಿಸುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮಿಳುನಾಡಿನ ವಿರೋಧ ಪಕ್ಷದ ನಾಯಕ ಪಳನಿ ಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಮೈತ್ರಿಯ
ಅಹಮ್ಮದಾಬಾದ್: ನಿಮ್ಮ ಎದುರೇ ಸಂಸತ್ತಿನಲ್ಲಿ ಜಾತಿಗಣತಿ ಬಿಲ್ ಪಾಸ್ ಮಾಡುತ್ತಾರೆ ನೋಡುತ್ತಿರಿ ಎಂದು ಮೋದಿಗೆ ರಾಹುಲ್ ಗಾಂಧಿ ಇಂದು ಸವಾಲು ಹಾಕಿದ್ದಾರೆ. ಅವರು ಇಂದು ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ್ದಾರೆ. ದೇಶದಲ್ಲಿ ಜಾತಿಗಣತಿ ಮಾಡುವುದು ಅಗತ್ಯವಾಗಿದೆ. ಇದರಿಂದ ಎಲ್ಲಾ ವರ್ಗದ ಜನರಿಗೆ ಸಮಪಾಲು ಸಿಗಲಿದೆ. ಆದರೆ ಬಿಜೆಪಿ ಮತ್ತು ಆರ್ ಎಸ್ಎಸ್ ಗೆ ಇದು ಬೇಕಾಗಿಲ್ಲ. ಅಲ್ಪ ಸಂಖ್ಯಾತರಿಗೂ ಸಮಪಾಲು ಸಿಗುವುದು ಅವರಿಗೆ ಇಷ್ಟವಿಲ್ಲ. ಈ ಕಾರಣಕ್ಕೆ ಜಾತಿಗಣತಿ ಮಾಡಲ್ಲ ಎಂದರು.
ಬೆಂಗಳೂರು: ಪತ್ನಿಯನ್ನು ಕೊಂದು ಆಕೆಯ ಮೃತದೇಹವನ್ನು ಸೂಟ್ಕೇಸ್ನಲ್ಲಿ ತುಂಬಿಸಿ, ಮನೆಯಿಂದ ಪರಾರಿಯಾಗಿದ್ದ ಪತಿ ಇದೀಗ ಕೊಲೆಗೆ ಕಾರಣ ಏನೆಂಬುದನ್ನು ಬಾಯಿಬಿಟ್ಟಿದ್ದಾನೆ.ಆರೋಪಿ ರಾಕೇಶ್ ಖೇಡೇಕರ್, ಮಾರ್ಚ್ 26 ರ ರಾತ್ರಿ ನಗರದ ಹುಳಿಮಾವು ಬಳಿಯ ದೊಡ್ಡಕಮ್ಮನಹಳ್ಳಿಯಲ್ಲಿರುವ ತಮ್ಮ ಮನೆಯಲ್ಲಿ ತನ್ನ ಪತ್ನಿ ಗೌರಿ ಸಾಂಬ್ರೇಕರ್ (32) ಅವರನ್ನು ಕೊಂದು, ಆಕೆಯ ಮೃತದೇಹವನ್ನು ಸೂಟ್ಕೇಸ್ನಲ್ಲಿ ತುಂಬಿಸಿ, ಪರಾರಿಯಾಗಿದ್ದ. ಅದಲ್ಲೆ ಗೌರಿಯ ಸಹೋದರನಿಗೆ ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ರಾಕೇಶ್ನನ್ನು ಏಪ್ರಿಲ್ 2 ರಂದು ಪೊಲೀಸ್ ವಶಕ್ಕೆ ಪಡೆಯಲಾಯಿತು. ಕೊಲೆಗೆ ಕಾರಣ ಏನೆಂಬುದನ್ನು
ಬೆಂಗಳೂರು: ಕಸದ ಶುಲ್ಕ ಸಂಬಂಧ ಬಿಬಿಎಂಪಿ ಹೊರಡಿಸಿದ ಆಜ್ಞೆಯು ದಿಗ್ಭ್ರಮೆ ಮೂಡಿಸುವಂತಿದೆ ಹಾಗೂ ತೀವ್ರ ವಿದ್ಯುತ್ ಆಘಾತದಂತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಆಕ್ಷೇಪಿಸಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜವಾಬ್ದಾರಿ ಇಲ್ಲದೆ, ಮನ ಬಂದಂತೆ ಜನರ ಮೇಲೆ 2025-26ನೇ ಸಾಲಿಗೆ ತಮ್ಮ ಆಸ್ತಿ ತೆರಿಗೆ ಜೊತೆಯಲ್ಲಿ ಬಳಕೆದಾರರ ತ್ಯಾಜ್ಯ ಶುಲ್ಕ ಮತ್ತು ಸುಂಕವನ್ನು ವಿಧಿಸಲಾಗುತ್ತಿದೆ ಎಂದು ಟೀಕಿಸಿದರು. ಎಲ್ಲರೂ ಜಗ್ಗುವಂಥ ಮಟ್ಟದಷ್ಟು ಶುಲ್ಕ ಹಾಕಿದ್ದಾರೆ ಎಂದು ಆರೋಪಿಸಿದರು.
ಜವಾನ್ ಸಿನಿಮಾ ಸೂಪರ್ ಹಿಟ್ ಬಳಿಕ ನಿರ್ದೇಶಕ ಅಟ್ಲೀ, ಖ್ಯಾತ ನಟ ಅಲ್ಲು ಅರ್ಜುನ್ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಈಗಾಗಲೇ ಸಿನಿಮಾನವನ್ನು ಘೋಷಣೆ ಮಾಡಿದ್ದು, ಭಾರಿ ದೊಡ್ಡ ಬಜೆಟ್ನಲ್ಲಿ ಈ ಸಿನಿಮಾ ತಯಾರಾಗಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಸಿನಿಮಾಗೆ ತಾತ್ಕಾಲಿಕವಾಗಿ AA22 ಎಂದು ಹೆಸರಿಸಲಾಗಿದೆ. ಈ ಚಿತ್ರದ ಅನೌನ್ಸ್ಮೆಂಟ್ ಟ್ರೇಲರ್ ನಿನ್ನೆ ಬಿಡುಗಡೆಯಾಯಿತು ಮತ್ತು ಪ್ರೇಕ್ಷಕರನ್ನು ಅಚ್ಚರಿಗೊಳಿಸಿತು. ಏಕೆಂದರೆ ಇದು ಗಮನಾರ್ಹವಾದ VFX ಮತ್ತು ಜೀವಿ ಅನಿಮೇಷನ್ ಅನ್ನು ಒಳಗೊಂಡ ಬೃಹತ್ ಬಜೆಟ್ನಲ್ಲಿ ನಿರ್ಮಾಣವಾಗಲಿದೆ.AA22 ಯೋಜನೆಯನ್ನು ₹700 ಕೋಟಿ ಬಜೆಟ್ನಲ್ಲಿ ನಿರ್ಮಾಣವಾಗಲಿದೆ. ಇನ್ನೂ ಈ ಸಿನಿಮಾದ ಅಲ್ಲು
ಪ್ರಭಾಸ್ ಅವರ ಬಹುನಿರೀಕ್ಷಿತ ಮಾರುತಿ ನಿರ್ದೇಶನದ 'ದಿ ರಾಜಾ ಸಾಬ್' ಚಿತ್ರ ಬಿಡುಗಡೆ ವಿಳಂಬವಾಗಿದೆ. ಇದರಿಂದ ಭಾರೀ ಕುತೂಹಲದಿಂದ ಪ್ರಭಾಸ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.ಸುಮಾರು ಮೂರು ವರ್ಷಗಳಿಂದ ಚಿತ್ರೀಕರಣ ನಡೆಯುತ್ತಿರುವ ಈ ಹಾರರ್-ರೊಮ್ಯಾಂಟಿಕ್ ಮನರಂಜನೆ ಚಿತ್ರವು ಆರಂಭದಲ್ಲಿ ಏಪ್ರಿಲ್ 10, 2025 ರಂದು ಬಿಡುಗಡೆಯಾಗಬೇಕಿತ್ತು. ಇನ್ನೂ ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಬಾಕಿ ಉಳಿದಿರುವುದರಿಂದ, ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಇದುವರೆಗೆ ಸಿನಿಮಾದ ಹೊಸ ದಿನಾಂಕವನ್ನು ಚಿತ್ರತಂಡ ಘೋಷಿಸಿಲ್ಲ.ಇತ್ತೀಚೆಗೆ, ನಿರ್ದೇಶಕ ಮಾರುತಿ ಅವರು ಆಂಧ್ರಪ್ರದೇಶದ ತಿರುಪತಿ ಮತ್ತು ಶ್ರೀಕಾಳಹಸ್ತಿ
ತಮಿಳುನಾಡು: ಕಾಂಗ್ರೆಸ್ನ ಮಾಜಿ ಮುಖ್ಯಸ್ಥ ಕುಮಾರಿ ಅನಂತನ್ (93) ಬುಧವಾರ (ಏಪ್ರಿಲ್ 9, 2025) ಮುಂಜಾನೆ ಚೆನ್ನೈನಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ತಮಿಳು ಜನರು, ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಪ್ರತಿಪಾದಿಸುತ್ತಾ, ರಾಜ್ಯದ ನೆಲ, ಭಾಷೆ, ಸಂಸ್ಕೃತಿ ಪರ ಹೋರಾಟ ನಡೆಸಿದ್ದರು.ಇನ್ನೂ ಸಂಸತ್ತಿನ ಸಭಾಂಗಣದಲ್ಲಿ ತಮಿಳು ಭಾಷೆ ಬಳಸಬೇಕೆಂದು ಹೋರಾಟ ಮಾಡಿ, ಎಂದೆದಿಗೂ ನೆನಪಿನಲ್ಲಿ ಉಳಿಯುವ ಕೆಲಸವನ್ನು ಮಾಡಿದರು.ಅನಂತನ್ ಅವರಿಗೆ ಒಬ್ಬ ಮಗ ಮತ್ತು ನಾಲ್ವರು ಹೆಣ್ಣುಮಕ್ಕಳಿದ್ದಾರೆ, ಅವರಲ್ಲಿ ಹಿರಿಯ ಬಿಜೆಪಿ
ವಾರಣಾಸಿ: 19 ವರ್ಷದ ಯುವತಿಯ ಮೇಲೆ 7 ದಿನಗಳಲ್ಲಿ 23ಮಂದಿ ನಿರಂತರ ಅತ್ಯಾಚಾರ ಎಸಗಿರುವ ಪ್ರಕರಣ ಸಂಬಂಧ ಇದುವರೆಗೆ ಒಂಭತ್ತು ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ವಾರಣಾಸಿಯಲ್ಲಿ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ. ಯುವತಿಗೆ ಮಾದಕ ದ್ರವ್ಯ ನೀಡಿ ಹಲವಾರು ಹೋಟೆಲ್ಗಳಿಗೆ ಕರೆದೊಯ್ದು ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಲಾಗಿದೆ ಎಂದು ಹೇಳಲಾಗಿದೆ.ಪ್ರಕರಣದಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಮತ್ತು "ಇತರ ಆರೋಪಿಗಳನ್ನು ಬಂಧಿಸಲು
ಬೆಂಗಳೂರು: ನವಜಾತ ಶಿಶುಗಳಿಗೂ ಕೆಲವೊಮ್ಮೆ ತಲೆನೋವು ತಪ್ಪಿದ್ದಲ್ಲ. ಶೀತವಾದಾಗ ತಲೆನೋವಾಗುತ್ತಿದ್ದು, ಮಗು ವಿಪರೀತ ಅಳುತ್ತಿದ್ದರೆ ಏನು ಮಾಡಬೇಕು ಇಲ್ಲಿದೆ ಬೆಸ್ಟ್ ಟಿಪ್ಸ್.ಹಲವು ಕಾರಣಗಳಿಗೆ ಚಿಕ್ಕ ಮಕ್ಕಳಲ್ಲೂ ತಲೆನೋವು ಕಂಡುಬರಬಹುದು. ಶೀತವಾಗಿದ್ದಾಗ, ಕಫ ತುಂಬಿದ್ದರೆ, ಅಜೀರ್ಣವಾದಾಗ ತಲೆನೋವು ಬರುವ ಸಾಧ್ಯತೆಯಿರುತ್ತದೆ. ನವಜಾತ ಮಕ್ಕಳಿಗೆ ತಲೆನೋವಾದಾಗ ಜೋರಾಗಿ ಅಳುತ್ತವೆ. ಆ ಕಿರಿ ಕಿರಿಯನ್ನು ಅವುಗಳಿಗೆ ತಾಳಲು ಆಗುವುದಿಲ್ಲ. ಶ್ರೀಗಂಧ ಹಚ್ಚಿಶೀತ, ಕಫ ಯಾವುದೇ ಕಾರಣಕ್ಕೆ ತಲೆನೋವಾಗುತ್ತಿದ್ದರೆ ಚಿಕ್ಕಮಕ್ಕಳಿಗೆ ಶ್ರೀಗಂಧವನ್ನು ಹಚ್ಚಬಹುದು. ಸ್ವಲ್ಪ ಗಂಧವನ್ನು ಬೌಲ್ ನಲ್ಲಿ ಹಾಕಿ ಸ್ವಲ್ಪ ನೀರು ಚಿಮುಕಿಸಿ ಹದ ಬಿಸಿ ಮಾಡಿ.
ಬೆಂಗಳೂರು: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲಿನ ಚಾಕು ಇರಿತ ಪ್ರಕರಣ ಸಂಬಂಧ ಮುಂಬೈ ಪೊಲೀಸರು 1000 ಪುಟಗಳ ಸಮಗ್ರ ಚಾರ್ಜ್ಶೀಟ್ ಅನ್ನು ಸಲ್ಲಿಸಿದ್ದಾರೆ.ಚಾರ್ಜ್ಶೀಟ್ನಲ್ಲಿ ಶರೀಫುಲ್ ಇಸ್ಲಾಂ ಪ್ರಮುಖ ಶಂಕಿತ ಎಂದು ಗುರುತಿಸಲಾಗಿದೆ ಮತ್ತು ಗಣನೀಯ ವಿಧಿವಿಜ್ಞಾನ ಸಾಕ್ಷ್ಯಗಳು, ಸಿಸಿಟಿವಿ ದೃಶ್ಯಗಳು, ಬೆರಳಚ್ಚು ವಿಶ್ಲೇಷಣೆ ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ.ಸೈಫ್ಗೆ ಅನೇಕ ಇರಿತದ ಗಾಯಗಳಾಗಿದ್ದು, ಇದರ ಪರಿಣಾಮವಾಗಿ ಅವರ ಬೆನ್ನು, ಮಣಿಕಟ್ಟು ಮತ್ತು ಅವರ ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ.
ಬೆಂಗಳೂರು: ಕರ್ನಾಟಕ ಬೆಲೆ ಏರಿಕೆಗಳ ಪಟ್ಟಿಗೆ ಈಗ ನೀರು ಕೂಡಾ ಅಧಿಕೃತವಾಗಿ ಸೇರ್ಪಡೆಯಾಗಿದೆ. ಕಳೆದ ವಾರ ಹಾಲಿನ ಬೆಲೆ ಏರಿಕೆ ಬರೆಯಾದರೆ ಈ ವಾರ ನೀರಿನ ಬರೆ ಸಿಕ್ಕಿದೆ. ಬೆಂಗಳೂರಿನಲ್ಲಿ ನೀರಿನ ದರ ಏರಿಕೆಯಾಗಲಿದೆ ಎಂದು ಕಳೆದ ಹಲವು ದಿನಗಳಿಂದ ಸುದ್ದಿಯಿತ್ತು. ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಸದನದಲ್ಲೇ ಮಾಹಿತಿ ನೀಡಿದ್ದರು. ಹೀಗಾಗಿ ನೀರಿನ ದರ ಏರಿಕೆ ನಿರೀಕ್ಷಿತವಾಗಿತ್ತು. ಆದರೆ ಹಾಲು, ವಿದ್ಯುತ್ ದರ ಏರಿಕೆ ಬಳಿಕ ಈಗ ನೀರಿನ ದರ ಏರಿಕೆಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಈಗ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದ್ದಾರೆ.
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ದೀದಿ ಇರುವವರೆಗೂ ವಕ್ಫ್ ತಿದ್ದುಪಡಿ ನಿಯಮ ಜಾರಿಗೆ ಬರಲು ಬಿಡಲ್ಲ ಎಂದು ಸ್ವತಃ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಇತ್ತೀಚೆಗೆ ವಕ್ಫ್ ತಿದ್ದುಪಡಿ ಬಿಲ್ ಪಾಸ್ ಮಾಡಿತ್ತು. ಆದರೆ ಇದಕ್ಕೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಹಾಗಿದ್ದರೂ ಇದೀಗ ರಾಷ್ಟ್ರಪತಿಗಳ ಅಂಕಿತವೂ ಆಗಿ ತಿದ್ದುಪಡಿ ನಿಯಮಗಳು ಕಾನೂನಾಗಿದೆ. ಆದರೆ ಈ ಬಗ್ಗೆ ಜೈನ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ದೀದಿ ಮಮತಾ ಬ್ಯಾನರ್ಜಿ ‘ನಿಮಗೆಲ್ಲಾ ವಕ್ಫ್ ಹೊಸ ಕಾಯಿದೆ ಬಗ್ಗೆ ಆತಂಕವಿದೆ ಎಂದು ನನಗೆ ಗೊತ್ತು.
ಹೈದರಾಬಾದ್: ಸಿಂಗಾಪುರದಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರ ಗಾಯಗೊಂಡಿರುವ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ, ಟಾಲಿವುಡ್ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಚೇತರಿಸಿಕೊಳ್ಳುತ್ತಿದ್ದಾನೆ.ಅಗ್ನಿ ಅವಘಡದಲ್ಲಿ ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂಗಾಪುರಕ್ಕೆ ತೆರಳುವ ಮುನ್ನ ಪುತ್ರನ ಆರೋಗ್ಯದ ಅಪ್ಡೇಟ್ ಅನ್ನು ಪವನ್ ಕಲ್ಯಾಣ್ ಮಾಧ್ಯಮಕ್ಕೆ ನೀಡಿದರು. ಸಹೋದರ ಮೆಗಾಸ್ಟಾರ್ ಚಿರಂಜೀವಿ ದಂಪತಿ ಜೊತೆ ಪವನ್ ಕಲ್ಯಾಣ್ ಸಿಂಗಾಪುರಕ್ಕೆ ತೆರಳಿದ್ದಾರೆ. ಮಾರ್ಕ್ ಶಂಕರ್ ಶಾಲೆಯ ಸಮ್ಮರ್ ಕ್ಯಾಂಪ್ಗೆ ಭಾಗಿಯಾಗಿದ್ದು, ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಪುತ್ರನೊಂದಿಗೆ ಇತರೆ ವಿದ್ಯಾರ್ಥಿಗಳು ಸಹ ಇದ್ದರು.
ಬೆಂಗಳೂರು: ಕರ್ನಾಟಕದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಭ್ರಷ್ಟಾಚಾರ ಕಡಿಮೆಯಾಗುತ್ತಿಲ್ಲ. ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್ ಸ್ಥಾನದಲ್ಲಿದೆ. ಮುಖ್ಯಮಂತ್ರಿ ಏನೇ ಹೇಳಿದರೂ ಭ್ರಷ್ಟಾಚಾರ ಕುರಿತು ನನ್ನ ಅಭಿಪ್ರಾಯ ಇದೇ ಇರುತ್ತದೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರೂ ಆಗಿರುವ ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಅವರು ಸ್ವಪಕ್ಷದ ವಿರುದ್ಧವೇ ಬಾಂಬ್ ಸಿಡಿಸಿದ್ದಾರೆ.ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತದೆ. ಭ್ರಷ್ಟಾಚಾರ ವ್ಯಾಪಕವಾಗಿರುವುದರಿಂದಲೇ ಗುಣಮಟ್ಟದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಹಿಂದೆಲ್ಲ ಐದಾರು ದಶಕ ಬಾಳಿಕೆ ಬರುತ್ತಿದ್ದ ಸರ್ಕಾರಿ ಕಟ್ಟಡಗಳು ಹತ್ತು ವರ್ಷಗಳಲ್ಲಿಯೇ ಬಿದ್ದು ಹೋಗುತ್ತಿವೆ. ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚು ತಾಂಡವಾಗುತ್ತಿದೆ ಎಂದು ಯಲಬುರ್ಗಾ ಶಾಸಕರೂ ಆಗಿರುವ ರಾಯರಡ್ಡಿ ಕಿಡಿಕಾಡಿದರು.
ಬೆಂಗಳೂರು: ಮುಡಾ ಹಗರಣ ಆರೋಪದ ಬಳಿಕ ಸಿಎಂ ಸಿದ್ದರಾಮಯ್ಯ ಮೇಲೆ ಈಗ ಮತ್ತೊಂದು ಹಗರಣದ ಆರೋಪ ಕೇಳಿಬಂದಿದೆ. ಒಂದಲ್ಲ, ಎರಡಲ್ಲ, ಬರೋಬ್ಬರಿ 500 ಕೋಟಿ ರೂ. ಕಿಕ್ ಬ್ಯಾಕ್ ಪಡೆದುಕೊಂಡ ಆರೋಪ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ನಡೆಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬವರು ದೂರು ನೀಡಿದ್ದಾರೆ. ಏನಿದು ಪ್ರಕರಣ?ಸಿಎಂ ಸಿದ್ದರಾಮಯ್ಯ ಈ ಹಿಂದೆ 2015 ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು.
ಅಹಮ್ಮದಾಬಾದ್: ಎರಡು ದಿನಗಳ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ದೇಶದಲ್ಲಿ ಅಕ್ರಮವಾಗಿ ಚುನಾವಣೆಗಳನ್ನು ಗೆಲ್ಲುತ್ತಿದೆ. ಹೀಗಾಗಿ ಮತ್ತೆ ಮತಪತ್ರ ವಿಧಾನದ ಮೂಲಕ ಚುನಾವಣೆಗಳು ನಡೆಯಬೇಕು. ಹೀಗೇ ಮುಂದುವರಿದರೆ ಮುಂದೆ ಮೋದಿ ದೇಶವನ್ನೇ ಮಾರುತ್ತಾರೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. ಅಹಮ್ಮದಾಬಾದ್ ನಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಇಂದು ಭಾಷಣ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಅಕ್ರಮವಾಗಿ ಮತಯಂತ್ರದ ಮೂಲಕ ಚುನಾವಣೆ ಗೆದ್ದಿತು. ಇದೇ ರೀತಿ ಬಿಜೆಪಿ ಅನೇಕ ಚುನಾವಣೆಗಳನ್ನು ಅಕ್ರಮವಾಗಿ ಗೆದ್ದಿದೆ.
ಬೆಂಗಳೂರು: ಐಪಿಎಲ್ 2025 ರ ಮುಂದಿನ ಪಂದ್ಯಕ್ಕೆ ಸಿದ್ಧರಾಗುತ್ತಿರುವ ಕೆಎಲ್ ರಾಹುಲ್ ಗೆ ಅಭಿಮಾನಿಗಳು ಈ ಒಂದು ಪಂದ್ಯದಲ್ಲಿ ಚೆನ್ನಾಗಿ ಆಡಬೇಡಿ ಎಂದು ಸಲಹೆ ನೀಡಿದ್ದಾರೆ. ಅಷ್ಟಕ್ಕೂ ಅಭಿಮಾನಿಗಳು ಹೀಗೆ ಸಲಹೆ ನೀಡುವುದಕ್ಕೂ ಕಾರಣವಿದೆ. ಐಪಿಎಲ್ 2025 ರಲ್ಲಿ ನಾಳೆ ಆರ್ ಸಿಬಿ ವರ್ಸಸ್ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪಂದ್ಯ ನಡೆಯಲಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಆಡುತ್ತಿದ್ದಾರೆ.
ಹಾಸನ: ಬೆಲೆ ಏರಿಕೆಯ ಕಾರಣ ಜನರ ಸಹನೆಯ ಕಟ್ಟೆ ಒಡೆಯುವ ಪರಿಸ್ಥಿತಿ ಬಂದಿದೆ. ಜನಾಕ್ರೋಶ ಯಾತ್ರೆ ಎಲ್ಲ ಕಡೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ಇಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಲೆ ಏರಿಕೆಯಿಂದ ಜನರು ಪರದಾಡುವ ಪರಿಸ್ಥಿತಿಯನ್ನು ಸಿದ್ದರಾಮಯ್ಯನವರ ಸರಕಾರ ನಿರ್ಮಿಸಿದ್ದು, ಇದು ದುರದೃಷ್ಟಕರ ಎಂದು ಟೀಕಿಸಿದರು. ಭ್ರಷ್ಟಾಚಾರ ಮಿತಿ ಮೀರಿ ಹೋಗಿದೆ. ಇಡೀ ದೇಶದಲ್ಲಿ ಭ್ರಷ್ಟಾಚಾರದ ವಿಷಯದಲ್ಲಿ ಕರ್ನಾಟಕವೇ ನಂಬರ್ ಒನ್ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಹೇಳಿದ್ದಾರೆ ಎಂದು ಗಮನ ಸೆಳೆದರು.
ಅಹಮ್ಮದಾಬಾದ್: ಎಐಸಿಸಿ ಅಧಿವೇಶನದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಐಷಾರಾಮಿ ಸೋಫಾ ಸೆಟ್, ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಸಾಮಾನ್ಯ ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಹಮ್ಮದಾಬಾದ್ ನಲ್ಲಿ ಎಐಸಿಸಿ ಅಧಿವೇಶನ ನಡೆದಿದೆ. ಇದರಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಆದಿಯಾಗಿ ಪಕ್ಷದ ಎಲ್ಲಾ ಘಟಾನುಘಟಿ ನಾಯಕರು ಭಾಗಿಯಾಗಿದ್ದಾರೆ. ಈ ವೇಳೆ ರಾಹುಲ್, ಸೋನಿಯಾ ಐಷಾರಾಮಿ ಸೋಫಾದಲ್ಲಿ ಮತ್ತು ಪಕ್ಷದ ಅಧ್ಯಕ್ಷರಾಗಿರುವ ಖರ್ಗೆ ಅಲ್ಲೇ ಪಕ್ಕದಲ್ಲಿ ಸಾಮಾನ್ಯ ಕುರ್ಚಿಯಲ್ಲಿ ಕೂರಿಸುವ ವಿಡಿಯೋವೊಂದನ್ನು ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ.
ಬೆಂಗಳೂರು: ನಿನ್ನೆ ಭಾರೀ ಏರಿಕೆ ಕಂಡಿದ್ದರಿಂದ ಅಡಿಕೆ ಬೆಳೆಗಾರರಿಗೆ ಈಗ ನೆಮ್ಮದಿ. ಇಂದೂ ಯಥಾಸ್ಥಿತಿ ಮುಂದುವರಿದಿದೆ. ಆದರೆ ಕಾಳುಮೆಣಸು ಬೆಳೆಗಾರರಿಗೆ ನಿರಾಸೆಯಾಗಲಿದೆ. ಯಾಕೆಂದರೆ ಕಾಳುಮೆಣಸು ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಇಂದಿನ ದರ ಹೇಗಿದೆ ಇಲ್ಲಿದೆ ವಿವರ. ಕಳೆದ ವಾರ ಹೊಸ ಅಡಿಕೆ ಮತ್ತು ಹಳೆ ಅಡಿಕೆ ಬೆಲೆ ನಿಂತ ನೀರಾಗಿತ್ತು. ನಿನ್ನೆ ಅಡಿಕೆ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಬೆಳೆಗಾರರ ಮೊಗದಲ್ಲಿ ಹರ್ಷ ತಂದಿತ್ತು. ಇಂದು ಮತ್ತೆ ಅಡಿಕೆ ಬೆಲೆ ಹೆಚ್ಚೂ ಇಲ್ಲ, ಕಡಿಮೆಯೂ ಆಗಿಲ್ಲ ಎನ್ನುವ ಸ್ಥಿತಿಯಾಗಿದೆ. ನಿನ್ನೆ ಹೊಸ ಅಡಿಕೆ ಬೆಲೆ ಗರಿಷ್ಠ 475 ರೂ. ಗಳಷ್ಟಿದ್ದರೆ, ಹಳೆ ಅಡಿಕೆ ಬೆಲೆ ಗರಿಷ್ಠ 485 ರೂ.ಗಳಷ್ಟಿತ್ತು.