Shorts

ನವದೆಹಲಿ: ಕಾಂಗ್ರೆಸ್ ಜೊತೆಗಿನ ಮದುವೆ ಹಿಂಸಾತ್ಮಕವಾಗಿತ್ತು. ಹೀಗಾಗಿ ವಿಚ್ಛೇದನ ಪಡೆಯಬೇಕಾಯ್ತು ಎಂದು ರಾಜ್ಯಸಭೆಯಲ್ಲಿ ಇಂದು ಮಲ್ಲಿಕಾರ್ಜುನ ಖರ್ಗೆಗೆ ದೇವೇಗೌಡರು ತಿರುಗೇಟು ನೀಡಿದ್ದಾರೆ. ರಾಜ್ಯಸಭೆಯಲ್ಲಿ ಇಂದು ನಿವೃತ್ತಿ ಹೊಂದುತ್ತಿರುವ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭವಿತ್ತು. ಈ ವೇಳೆ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ ಹಾಸ್ಯ ಮತ್ತು ವ್ಯಂಗ್ಯವಾಗಿ ದೇವೇಗೌಡರು ನಮ್ಮನ್ನು ಪ್ರೀತಿಸಿದರು. ಆದರೆ ನಂತರ ಮೋದಿಯವರನ್ನು ಮದುವೆಯಾದರು ಎಂದಿದ್ದರು. ಆದರೆ ಖರ್ಗೆ ಮಾತನಾಡುವಾಗ ದೇವೇಗೌಡರು ಇರಲಿಲ್ಲ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಇದಕ್ಕೆ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಜೊತೆಗಿನ ಮದುವೆ ಹಿಂಸಾತ್ಮಕವಾಗಿತ್ತು. ಹೀಗಾಗಿ ವಿಚ್ಛೇದನ ಪಡೆದೆ ಎಂದಿದ್ದಾರೆ.

ಹೈದರಾಬಾದ್: ಐಪಿಎಲ್ 2026 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಲು ಹೊಸ ನಾಯಕನನ್ನು ಫ್ರಾಂಚೈಸಿ ಘೋಷಿಸಿದೆ. ಟೀಂ ಇಂಡಿಯಾ ಆಟಗಾರನಿಗೆ ಅದೃಷ್ಟ ಖುಲಾಯಿಸಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಆಸ್ಟ್ರೇಲಿಯಾ ಮೂಲದ ಪ್ಯಾಟ್ ಕುಮಿನ್ಸ್ ನಾಯಕರಾಗಿದ್ದರು. ಕಳೆದ ಆವೃತ್ತಿಯಲ್ಲಿ ಅವರೇ ತಂಡವನ್ನು ಮುನ್ನಡೆಸಿದ್ದರು. ಆದರೆ ಈ ಆವೃತ್ತಿಯಲ್ಲಿ ಅವರು ಬೆನ್ನು ನೋವಿನ ಕಾರಣದಿಂದ ಅಲಭ್ಯರಾಗಿದ್ದಾರೆ. ಈ ಕಾರಣಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಲಾಗಿದೆ. ಟೀಂ ಇಂಡಿಯಾದ ಇಶಾನ್ ಕಿಶನ್ ಹೈದರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ಆವೃತ್ತಿಯಲ್ಲೂ ಇಶಾನ್ ಹೈದರಾಬಾದ್ ಪರ ಆಡಿದ್ದರು. ಇತ್ತೀಚೆಗೆ ನಡೆದ ಟಿ20 ವಿಶ್ವಕಪ್ ನಲ್ಲಿ ಇಶಾನ್ ಕಿಶನ್ ಅದ್ಭುತ ಪ್ರದರ್ಶನ ನೀಡಿದ್ದರು.

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದು ಯಾವ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ಇಲ್ಲಿದೆ ಇಂದಿನ ಹವಾಮಾನ ವರದಿ. ಬೇಸಿಗೆಯ ಬೇಗೆಯ ನಡುವೆ ದಿಡೀರ್ ಮಳೆಯಾಗುತ್ತಿರುವುದು ವಾತಾವರಣವನ್ನು ಕೊಂಚ ತಂಪು ಮಾಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆಯಾಗಿರುವ ವರದಿಯೂ ಆಗಿದೆ. ಇಂದು ಕೂಡಾ ಕೆಲವೇ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡದ ಕೆಲವು ಭಾಗಗಳು, ಚಿಕ್ಕಮಗಳೂರು, ಮಂಡ್ಯ, ಬೆಂಗಳೂರು, ರಾಮನಗರ, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ಬೀದರ್, ರಾಯಚೂರು, ಬೆಳಗಾವಿ, ಯಾದಗಿರಿ, ಹುಬ್ಬಳ್ಳಿ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.